ವಿಷಯಕ್ಕೆ ಹೋಗಿ

ಜಾತಿ ಆಧಾರಿತ ತಾರತಮ್ಯ: ಭಾರತಕ್ಕೆ ಸಮ್ಮತ ಸಿದ್ಧಾಂತ?

ಜಾತಿ ಆಧಾರಿತ ತಾರತಮ್ಯವನ್ನು ಮಾನವ ಹಕ್ಕು ಉಲ್ಲಂಘನೆ ಎಂದು ಪರಿಗಣಿಸುವ ಮಹತ್ವದ ಚಿಂತನೆ ಈಗ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವುದು ಮಹತ್ವದ ಬೆಳವಣಿಗೆ. ಮಾನವೀಯ ಮೌಲ್ಯಗಳ ದೃಷ್ಟಿಯಿಂದ ಇದೊಂದು ಅತ್ಯಂತ ಶ್ರೇಷ್ಠ ಹೆಜ್ಜೆ. ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ ಸಮ್ಮೇಳನ ಇಂಥದೊಂದು ದಿಟ್ಟ ಕ್ರಮಕ್ಕೆ ಯೋಚಿಸುತ್ತಿರುವುದು ಇಡೀ ವಿಶ್ವವನ್ನು ಆರೋಗ್ಯಕರ ಬದುಕಿನತ್ತ ಕೊಂಡೊಯ್ಯುವಂಥದು.
ಹಿಂದೂ ರಾಷ್ಟ್ರವೆಂದು ಗುರುತಿಸಲಾಗುತ್ತಿರುವ ನೇಪಾಳ ಇದನ್ನು ಸ್ವಾಗತಿಸಿದೆ. ಸೆಪ್ಟೆಂಬರ್ 16ರಂದು ನಡೆದ ಸಮ್ಮೇಳನದ ಕಲಾಪದಲ್ಲಿ ನೇಪಾಳದ ಸಚಿವ ಜೀತ್ ಬಹಾದ್ದೂರ್ ದಾರ್ಜಿ ಗೌತಂ ಅವರು 'ಜಾತಿ ತಾರತಮ್ಯದ ವಿರುದ್ಧ ಹೋರಾಡಲು ವಿಶ್ವಸಂಸ್ಥೆ ಹಾಗೂ ಅಂಗ ಸಂಸ್ಥೆಗಳು ಮುಂದಿಟ್ಟಿರುವ ಇಂಥದೊಂದು ಮಹತ್ವದ ಕ್ರಮಕ್ಕೆ ನೇಪಾಳ ಸ್ವಾಗತಿಸುತ್ತದೆ' ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದ ತಮಿಳು ಮೂಲದ ನವನೀತಾ ಪಿಳ್ಳೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಾಯಭಾರಿಯಾಗಿ ನೇಪಾಳದ ಕ್ರಮವನ್ನು ಸ್ವಾಗತಿಸಿದ್ದಾರೆ. ಜಾತೀಯತೆಯಿಂದ ಜರ್ಜರಿತಗೊಂಡ ದೇಶವೊಂದರ ದಿಟ್ಟ ಹೆಜ್ಜೆ ಇದಾಗಿದೆ, ಉಳಿದ ದೇಶಗಳೂ ಇದನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.
ಇದಕ್ಕೆ ಮತ್ತಷ್ಟು ಬಲ ಬಂದಿದ್ದು ಸ್ವಿಡನ್ ವ್ಯಕ್ತಪಡಿಸಿದ ಬೆಂಬಲದಿಂದ. ಐರೋಪ್ಯ ರಾಷ್ಟ್ರಗಳು ಇದನ್ನು ಆದ್ಯತೆ ನೆಲೆಯಲ್ಲಿ ಪರಿಗಣಿಸಲಿವೆ ಎನ್ನುವ ಮೂಲಕ ಅದು ಯುರೋಪ್ ಬದಲಾವಣೆಗೆ ತೆರಕೊಳ್ಳುವ ಇಂಗಿತ ಹೊಂದಿದ್ದನ್ನು ಸೂಚ್ಯವಾಗಿ ಹೇಳಿದಂತಾಗಿದೆ. ವರ್ಗ ಸಂಘರ್ಷದಿಂದ ನಲುಗಿ ಹೋಗಿರುವ ಯುರೋಪ್ ನಾಗರಿಕತೆಯಲ್ಲಿ ಮಾಸ್ಟರ್-ಸ್ಲೇವರ್ ಒಂದು ದೊಡ್ಡ ಪಿಡುಗೇ ಆಗಿದೆ. ಭಾರತದ ಚತುರ್ವರ್ಣ ವ್ಯವಸ್ಥೆ ಇದಕ್ಕೂ ಹೀನವಾಗಿರುವಂಥದು. ಯುರೋಪ್ ಇದರಿಂದ ಹೊರಬರಲು ಹವಣಿಸುವುದು ಗಮನಸೆಳೆಯುತ್ತದೆ.
ದಕ್ಷಿಣ ಆಫ್ರಿಕಾ ಮತ್ತಿತರ ರಾಷ್ಟ್ರಗಳಲ್ಲಿ ವರ್ಣ ಮತ್ತು ವರ್ಗ ಸಂಘರ್ಷಗಳು ಅತ್ಯಂತ ಹೀನಾಯ ಸ್ಥಿತಿಗೆ ಮನುಷ್ಯ ಬದುಕನ್ನು ಎಳೆದೊಯ್ದ ಉದಾಹರಣೆಗಳಿವೆ. ಭಾರತದ ಗಾಂಧಿ, ಅಂಬೇಡ್ಕರ್ ಮತ್ತು ಆಫ್ರಿಕಾದ ನೆಲ್ಸನ್ ಮಂಡೆಲಾ ಇದರ ರಾಕ್ಷಸಿ ರೂಪವನ್ನು ಕಂಡವರು. ಇದಕ್ಕೆ ದೊಡ್ಡ ಪ್ರತಿಭಟನೆ ವ್ಯಕ್ತಪಡಿಸಿದವರು. ಅದರ ವಿರುದ್ಧ ಹೋರಾಡಿ ತಕ್ಕಮಟ್ಟಿನ ಯಶಸ್ಸು ಕಂಡವರು. ಮತ್ತೆ ಇಂಥ ಹೋರಾಟಗಳು ನಡೆಯಲೇಬೇಕಾದ ತುರ್ತಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಈ ಕ್ರಮ ಚಳವಳಿಯ ಸ್ವರೂಪ ಪಡಕೊಳ್ಳಬೇಕಿದೆ.
ಭಾರತದಲ್ಲಿನ ಸಾಮಾಜಿಕ ಸ್ಥಿತಿಯಲ್ಲಿ ಜಾತಿ ತಾರತಮ್ಯ ಮೇಲ್ವರ್ಗದ ಮತ್ತು ಅದರಲ್ಲೂ ಬ್ರಾಹ್ಮಣರ ಬಹುದೊಡ್ಡ ಅಸ್ತ್ರವಾಗಿದೆ. ಹುಟ್ಟಿನ ಕಾರಣಕ್ಕೆ ಶ್ರೇಷ್ಠ ಎನ್ನುವ ಬಿಟ್ಟಿ ಪಟ್ಟ ಅಲಂಕರಿಸುವ ಭಾರತದ ಬ್ರಾಹ್ಮಣರು ಇಡೀ ದೇಶವನ್ನು ದಟ್ಟ ದಾರಿದ್ರ್ಯಕ್ಕೆ ನೂಕಿದ್ದಾರೆ. ಈ ಚಾಳಿ ಇತರ ಮೇಲ್ವರ್ಗಕ್ಕೂ ವ್ಯಾಪಿಸಿದ್ದು ನಾಚಿಕೆ ಪಡುವಂಥ ಬೆಳವಣಿಗೆ. ಕೆಳಗಿನವರನ್ನು ಆದಷ್ಟು ಅದುಮುತ್ತಲೇ ಮೇಲಾಟವನ್ನು ಕಾಪಾಡಿಕೊಂಡು ಬಂದ ಮೇಲ್ವರ್ಗದ ದರ್ಪ ಕೊಂಚವಾದರೂ ಸಡಿಲಗೊಂಡಿದ್ದು ಅಂಬೇಡ್ಕರ್ ನಡೆಸಿದ ಹೋರಾಟದಿಂದ. ಆದರೆ, ಅದರ ಫಲಾನುಭವಿಗಳು (ಎಲ್ಲರೂ ಅಲ್ಲ ) ಮಾತ್ರ ಆರ್ಥಿಕವಾಗಿ ಸಬಲಗೊಳ್ಳುತ್ತಿದ್ದಂತೆ ನವಬ್ರಾಹ್ಮಣರಾಗುತ್ತಿರುವುದು ವಿಷಾದಕರ.
ವೀರಶೈವ, ಲಿಂಗಾಯತರ ವಿಷಯದಲ್ಲೂ ಇದೇ ಸ್ಥಿತಿ. ಜಾತಿ ವಿನಾಶದ ಮೂಲ ಅಜೆಂಡಾ ಇಟ್ಟುಕೊಂಡು ಸಾಮಾಜಿಕ ಕ್ರಾಂತಿಯೊಂದನ್ನು ರೂಪಿಸಿದ ಬಸವಣ್ಣ ದೇವರ ಸ್ಥಾನಕ್ಕೆ ಏರಿದರು. ಅನುಯಾಯಿಗಳು ಜಾತಿ ವಿನಾಶದ ಬದಲು ಅವರೇ ಒಂದು ಜಾತಿಯಾಗಿ ಪ್ರಭುತ್ವ, ಅಧಿಕಾರಕ್ಕಾಗಿ ಮತ್ತದೇ ಶೋಷಣೆಯ ಮಾರ್ಗ ಹಿಡಿಯುತ್ತಿರುವುದು ಎಂಥ ವಿಪರ್ಯಾಸ!
ಇಂದು ಕರ್ನಾಟಕದ ರಾಜಕಾರಣದಲ್ಲಿ ನಡೆಯುತ್ತಿರುವುದನ್ನು ಗಮನಿಸಿದರೆ ಇದು ಢಾಳಾಗಿ ಕಾಣಿಸುವ ಸತ್ಯ. ಮೈಸೂರಿನ ಸುತ್ತೂರು ಮಠದಲ್ಲಿ, ಆರ್ ಎಸ್ ಎಸ್ ಪೌರೋಹಿತ್ಯದಲ್ಲಿ ಗೋಧ್ರಾ ನರಹತ್ಯೆಯ ರೂವಾರಿ ಎಂದೇ ಟೀಕೆಗೆ ಒಳಗಾದ ಮತ್ತು ಅಮೆರಿಕದಂಥ ರಾಷ್ಟ್ರಗಳ ವೀಸಾ ಪಡೆಯುವುದಕ್ಕೂ ಅನರ್ಹತೆ ಗಳಿಸಿಕೊಂಡ ನರೇಂದ್ರ ಮೋದಿಯಿಂದ ಇಡೀ ಕರ್ನಾಟಕ ಸರ್ಕಾರದ ಸಚಿವರು ಪ್ರವಚನ ಕೇಳುವ ಪರಿಸ್ಥಿತಿ! ಭಾರತದ ಪ್ರಜಾಪ್ರಭುತ್ವಕ್ಕೆ ಬಂದ ಇಂಥ ಗಂಡಾಂತರಕ್ಕೆ ಏನು ಹೇಳಬೇಕು?
ವಿಶ್ವದ ೨೦ ಕೋಟಿಗೂ ಹೆಚ್ಚು ಜನ ಜಾತೀಯ ತಾರತಮ್ಯದಿಂದ ನಲುಗುತ್ತಿದ್ದಾರೆ. ಅತ್ಯಂತ ಹೀನಾಯ ಸ್ಥಿತಿಯಲ್ಲಿದ್ದಾರೆ. ಈ ಸಂಬಂಧ ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ಕರಡು ಸಿದ್ದಾಂತ ಮತ್ತು ಮಾರ್ಗಸೂಚಿ ಸಿದ್ಧಪಡಿಸುತ್ತಿದೆ. ಇದಕ್ಕೆ ಕಾನೂನಿನ ಕಸುವು ತುಂಬಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಜೂರಾತಿಗೆ ಯತ್ನಿಸುತ್ತಿದೆ.
ಜಾತಿ, ವೃತ್ತಿ ಮತ್ತು ಜನಾಂಗ ಆಧಾರಿತ ತಾರತಮ್ಯ ಮಾನವೀಯ ಮೌಲ್ಯ ಅಲ್ಲ ಎನ್ನುವುದು ಈ ಮೂಲಕ ವಿಶ್ವಕ್ಕೆ ಮನದಟ್ಟು ಮಾಡುವುದು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿಶ್ವದ ಇತರ ರಾಷ್ಟ್ರಗಳು ಸಂಕಲ್ಪ ಮಾಡಿಕೊಂಡಲ್ಲಿ ಮಹತ್ತರ ಬದಲಾವಣೆಗೆ ದಾರಿಯಾಗುತ್ತದೆ.
ವಿಪರ್ಯಾಸವೆಂದರೆ ಭಾರತ ವಿಶ್ವದ ಈ ನಡೆಯನ್ನೇ ವಿರೋಧಿಸಿದೆ!

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ