ರಾತ್ರಿಯೆಲ್ಲ ಕಿವಿಯ ಬಳಿ ಗುಂಯ್ ಎನ್ನುತ್ತ, ನನ್ನ ನಿದ್ರೆ ಮತ್ತು ನೆಮ್ಮದಿಗೆ ಭಂಗ ತರುವ ಸೊಳ್ಳೆಯೊಂದು ತುಂಬ ಕಿರಿ ಕಿರಿ ನೀಡುತ್ತಿತ್ತು. ಮೂಗಿನ ತುಂದಿ ಕಚ್ಚುತ್ತ, ಕಿವಿಯ ಮೆದುತೊಗಲು ಚುಚ್ಚಿ ಹಿಂಸೆ ಕೊಡುತ್ತ ನನ್ನ ಆಟ ಆಡಿಸುತ್ತಿತ್ತು. ಅದನ್ನು ಮುಗಿಸುವುದು ಸೂಕ್ತ ಎಂದು ಪ್ರತಿಹಿಂಸೆಗೆ ಸಿದ್ದವಾದರೆ ಸೊಳ್ಳೆ ಗಾಂಧಿ ತಾತನ ಮೂಗಿನ ಮೇಲೆ ಕೂತುಬಿಡೋದಾ...!
ಪಾಕಿಸ್ತಾನದ ಬಗ್ಗೆ ಮಾತನಾಡುವುದು ಮಹಾ ಪಾಪದ ಕೆಲಸವೇನಲ್ಲ. ಹಾಗೆ ಭಾವಿಸಬೇಕಿಲ್ಲ. ಅದು ಒಪ್ಪಿತವೊ ಇಲ್ಲವೋ, ಅದರ ಬಗ್ಗೆ ಅಲಕ್ಷ್ಯವೋ ನಿರ್ಲಕ್ಷ್ಯವೊ ಏನೇ ಆದರೂ ಅದು ಒಂದು ದೇಶ. ನೆರೆಯ ರಾಷ್ಟ್ರ. ‘ಪಡೋಸಿ...’ ಸಂಬಂಧದಲ್ಲಿ ನಮ್ಮದೇ ಕರುಳಬಳ್ಳಿ. ಭಾಷೆ, ಜನಜೀವನ ಶೈಲಿಯಲ್ಲಿ ಬದಲಾದರೂ ಮನುಷ್ಯ ಭಾವ, ಬದುಕುವ ಸಾಮಾನ್ಯ ಕಾಳಜಿ ಒಂದೇ. ಹಾಗೆ ನೋಡಿದರೆ ಸಾಂಸ್ಕೃತಿಕವಾಗಿ ಎರಡೂ ದೇಶಗಳು ಅಭಿನ್ನ. ನಮ್ಮಲ್ಲಿರುವ ಹಾಗೆ ಅಲ್ಲಿಯೂ ಪ್ರಜಾಪ್ರಭುತ್ವ ಇದೆ. ಅಲ್ಲಿ ನಡೆಯುವುದು ಇಲ್ಲೂ ನಡೆಯುತ್ತದೆ. ಅಲ್ಲಿ ನಡೆಯಲೇಬಾರದ್ದು ಇಲ್ಲೂ ನಡೆಯಲೇಬಾರದು. ತೀವ್ರವಾದ ನಮ್ಮಲ್ಲಿನದಕ್ಕಿಂತ ಅಲ್ಲಿ ತುಸು ಹೆಚ್ಚು ಸವಾರಿಗೆ ಹವಣಿಸಿದೆ. ಅಲ್ಲಿನ ಮಿಲಿಟರಿ ಅತಿರೇಕದ್ದು. ಅಕ್ಷಮ್ಯ. ಮತ್ತೆ ದೇಶ ಪುಟ್ಟದಾದಷ್ಟು ಅದಕ್ಕೆ ಭಯಗಳು ಜಾಸ್ತಿ. ಮಿಲಿಟರಿ ಕವಚದಲ್ಲಿ ಅದು ಸುರಕ್ಷಾ ಭಾವವನ್ನು ಕಲ್ಪಿಸಿಕೊಳ್ಳುತ್ತದೆ. ಅದೊಂದು ತರಹದ ಸಮಾಧಾನ. ಆದರೆ ಭ್ರಮೆಯಿಂದ ಕೂಡಿದ್ದು. ಭಯೋತ್ಪಾದನೆ ಕೂಡ ಒಂದರ್ಥದಲ್ಲಿ ಪುಕ್ಕಲುತನವೇ ಆಗುತ್ತದೆ. ಹಿಂಸಾ ಪ್ರವೃತ್ತಿಗೆ ಹೆದರಿಸುವುದೇ ಕೆಲಸ. ಹೆದರಿಸುವವರು ಶೂರರು, ಧೀರರು ಮತ್ತು ಜೀನಿಯಸ್ ಆಗಿರಲು ಹೇಗೆ ಸಾಧ್ಯ? ಮುಖ್ಯವಾಗಿ ಅಲ್ಲಿನ ವಿದ್ಯಮಾನಗಳನ್ನು ಗಮನಿಸುವುದಾದರೆ, ಮಿಲಿಟರಿ, ಮತಾಂಧರು, ಭಯೋತ್ಪಾದಕರು, ಭ್ರಷ್ಟರು ಇದೆಲ್ಲದರಿಂದ ಪಾಕಿ ತುಂಬ ರೋಸಿ ಹೋಗಿದ್ದಾನೆ. ಒಂದು ಸೂಕ್ತ ಪರ್ಯಾಯಕ್ಕಾಗಿ ಹಂಬಲಿಸಿದ್...
ಕಾಮೆಂಟ್ಗಳು