ವಿಷಯಕ್ಕೆ ಹೋಗಿ

ಹೀಗೊಂದು ಸೌಹಾರ್ದತೆ!

ಅಡಿಗಡಿಗೆ ಭಾಷೆ-ಗಡಿ ಸಮಸ್ಯೆ ಭುಗಿಲೇಳಲೇಬೇಕು! ಮಹಾರಾಷ್ಟ್ರ ಗಡಿ ಸಮಸ್ಯೆಗಂತೂ ಚಾಲನೆ ದಕ್ಕುತ್ತಲೇ ಇರುತ್ತದೆ. ರಾಜಕೀಯದ ಜತೆ ಸಾಹಿತ್ಯಿಕ-ಸಾಂಸ್ಕೃತಿಕ ಲಾಭಕ್ಕೂ! ವಿಪರ್ಯಾಸವಲ್ಲವೇ?


ಮತ್ತು ಸೌಹಾರ್ದತೆಯ ಘೋಷವೂ ಮೊಳಗಬೇಕಲ್ಲ! ರಾಜಧಾನಿಯಲ್ಲಿಂದು ಭಾಷಾ ಸೌಹಾರ್ದತಾ ಸಮಾವೇಶ ನಡೆಯಿತು. ಅದಕ್ಕೆಂದು ಬಿಜೆಪಿ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದೇಶದ ವಿವಿಧ ಭಾಷೆಯ ಹಾಗೂ ವಿಶೇಷವಾಗಿ ರಾಜ್ಯದ ಬಹುತೇಕ ಜಿಲ್ಲೆ ಮತ್ತು ಗಡಿ ಸಾಹಿತಿಮಣಿಗಳನ್ನು ರಾಜಧಾನಿಗೆ ಆಹ್ವಾನಿಸಿತ್ತು. ಆಹ್ವಾನಕ್ಕೆ ಓಗೊಟ್ಟು, ಸಾಹಿತಿಗಳು ತಮ್ಮ ಎಲ್ಲಾ ಬದುಕಿನ ಬಹುಮುಖ್ಯ ಕೆಲಸ ಕಾರ್ಯಗಳನ್ನೆಲ್ಲ ಬಿಟ್ಟು "ದೇಶ-ಭಾಷೆ-ನಾಡ ರಕ್ಷಣೆ" ಮತ್ತು "ಗಡಿ- ಸೌಹಾರ್ದತೆ" ಬಗ್ಗೆ ಒಟ್ಟೊಟ್ಟಿಗೆ ಕಾಳಜಿ ವ್ಯಕ್ತಪಡಿಸಲು, ಸಲಹೆಯನ್ನಿತ್ತಲು ರಾಜಧಾನಿಗೆ ಧಾವಿಸಿದ್ದರು. 

 ಹಾಗೆ ಸಮಾರಂಭ/ಸೌಹಾರ್ದತೆ ಸಮಾವೇಶಕ್ಕೆಂದೇ ಬಂದ ಗಡಿ ಭಾಗದ ಸಾಹಿತಿ ಮಿತ್ರರೊಬ್ಬರನ್ನು ನಾನು ಬೆಳ್ಳಂ ಬೆಳಿಗ್ಗೆ ಕಾಣಬೇಕಾಗಿ ಬಂದಿತ್ತು. ಇಳಿದುಕೊಳ್ಳಲು ಅವರಿಗೆಂದೇ ಗೊತ್ತು ಮಾಡಿದ್ದ ಲಾಡ್ಜ್ ನ ಒಂದು ರೂಮಿಗೆ ನಾವು ಒಟ್ಟಿಗೇ ಕಾಲಿಟ್ಟೆವು. ಅಲ್ಲಿ  ಅದೇ ಭಾಗದ ಮತ್ತೋರ್ವ ಸಾಹಿತಿ ಆಗಲೇ ವಿರಾಜಮಾನರಾಗಿದ್ದರು. ಥೇಟು 'ಶಿವಾಜಿ ಮಹಾರಾಜ'ರ ಹಾಗೆ! (ಇಬ್ಬರೂ ಮರಾಠಿಯಿಂದ ಕನ್ನಡಕ್ಕೆ ಸಾಕಷ್ಟು ಸಾಹಿತ್ಯ ಕೊಟ್ಟವರು)
ಅವರೊಂದು ಪ್ರಸಂಗ ಹೇಳಿದರು. ಬೆಳಿಗ್ಗೆ ಅವರು ಲಾಡ್ಜ್ ಬಂದಾಗ ತಮಗೆ ಗೊತ್ತು ಮಾಡಿದ ಕೋಣೆಗೆ ತೆರಳಿದರಂತೆ. ಅಲ್ಲಿ ಮರಾಠಿ ಸಾಹಿತಿ ಆಗಲೇ ವಿರಾಜಮಾನರಾಗಿದ್ದರಂತೆ. ಜತೆಗುಳಿಯಲು ಅವಕಾಶ ನೀಡಲಿಲ್ಲವಂತೆ. ಹೀಗಾಗಿ ಈ ರೂಮಿಗೆ ಬಂದೆ ಎಂದರು.

ಆ ಪ್ರಸಂಗ ಅವರೇ ಹೇಳಿದ್ದು ಹೀಗಿತ್ತು..
( ಸಂಭಾಷಣೆ ಹೀಗೆ ನಡೆಯಿತಂತೆ)

ಮಸಾ (ಮರಾಠಿ ಸಾಹಿತಿ) : ಬನ್ನಿ ಬನ್ನಿ... ನನ್ನ ಭೇಟಿ ಮಾಡಲೆಂದು ಬಂದಿರಾ?
ಗಭಾಸಾ (ಗಡಿ ಭಾಗದ ಸಾಹಿತಿ) : ಹಾ ಹಾ.. ನಿಮ್ಮ ಜತೆ ನನಗೂ ಇಲ್ಲೇ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ.
ಮಸಾ: ನೋ ನೋ
ಗಭಾಸಾ: ಅರೇ, ಯಾಕೆ?
ಮಸಾ: ಇಲ್ಲ ಹಾಗಾಗಲ್ಲ. ನಾನಾಗಲೇ ರಿಸೆಪ್ಷನ್ ಕೌಂಟರಿಗೆ ಹೇಳಿದ್ದೇನೆ. ನಾನ್ಯಾರ ಜತೆಗೂ ರೂಂ ಶೇರ್ ಮಾಡಲ್ಲ ಅಂತ.
ಗಭಾಸಾ: ಮತ್ತೆ ನಾನೆಲ್ಲಿ ಹೋಗೋದು?
ಮಸಾ:  ನೀವು ಬೇರೇನಾದರೂ ವ್ಯವಸ್ಥೆ ಮಾಡಿಕೊಳ್ಳಿ.
ಗಭಾಸಾ: ಅರೇ, ಸಂಜೆಯವರೆಗೆ ಅಷ್ಟೇ ತಾನೆ ನಾವಿಲ್ಲಿರೋದು?
ಮಸಾ: ನೋ ನೋ ಏನೇ ಆಗಲಿ ಸಾಧ್ಯವಿಲ್ಲ.
.... ಗಭಾಸಾ  ಎಷ್ಟೇ ಹೇಳಿದರೂ ಮಸಾ  ಒಪ್ಪಲೇ ಇಲ್ಲವಂತೆ.

ಭಾಷಾ ಸೌಹಾರ್ದತೆಗೆಂದು ಬಂದವರೇ ಒಂದು ಸಂಜೆಯವರೆಗೆ ಒಟ್ಟಾಗಿ ಇರೋಕಾಗಲ್ಲ. ಇನ್ನು  ಸಾಮಾನ್ಯ ಜನತೆ........ ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ...

'ಅನಭಿಜ್ಞ ಶಾಕುಂತಲ': ನೆನಪು ಮರೆವಿನಾಟ

 ಜೀವನವೇ ಒಂದು ನಾಟಕವೆಂದಾದರೆ. ಸಂಬಂಧ ಅನ್ನೋದು ಕಟ್ಟಿಕೊಂಡ ಆಟ. ಅಂದರೆ ನಾಟಕದಂತೆ ಬದುಕು ಕೂಡ ಆಟ ಕಟ್ಟುವ ಕ್ರಿಯೆ. ಇಲ್ಲಿ ಗುರಿ ಎಂದರೆ ಸುಖದ ಅಥವಾ ಸಾರ್ಥಕತೆಯ ದಡ ಸೇರುವುದು. ಈ ಆಟದ ಒಂದು ಹಂತದಲ್ಲಿ ಕಷ್ಟದ ಅಡವಿ ಸೇರುವುದೂ ಇದೆ! 'ಆಡಾಡ್ತ ಅಡವಿ ಸೇರುವುದು' ಅಂತಾರಲ್ಲ ಹಾಗೆ. ಅಡವಿ ಅಂದರೆ ಇಲ್ಲಿ ಸಂಕೀರ್ಣತೆ, ಸಂಕಷ್ಟ ಅವಘಡ, ಸಂದಿಗ್ಧತೆ ಎಂದು ಭಾವಿಸಿಕೊಳ್ಳಬಹುದು. ಬದುಕಿನ ದಾರಿಯಲ್ಲಿ ಒಮ್ಮೆ ಈ 'ಅಡವಿ' ಎದುರಾಗೇ ಆಗುತ್ತದೆ ಎನ್ನುವುದು ವಿಧಿಲಿಖಿತವೇ? ಗೊತ್ತಿಲ್ಲ. ಪ್ರೀತಿ-ಪ್ರೇಮ-ಕಾಮ ಎನ್ನುವ ಬದುಕಿನ ಒಟ್ಟಾರೆ ಆಟ- ಕೂಟದಲ್ಲಿ ಪಡಕೊಳ್ಳುವುದೆಲ್ಲ ಜೀವಕಾರುಣ್ಯವಷ್ಟೇ ಅಲ್ಲ. ಸಂಕಷ್ಟ ಮತ್ತು ಸಂದಿಗ್ಧತೆಯೂ ಜತೆಯಲ್ಲಿರುತ್ತದೆ ಎನ್ನುವುದು ಸಹಜ ಮನೋಧರ್ಮ.  ಬದುಕಿನ ಆಟಕ್ಕೆ ತೆರಕೊಂಡವರಲ್ಲಿ ಹಲವರು ಅನುಭವಿಸಿದ ಮಧುರ ಘಳಿಗೆಗಳನ್ನು ಕಡೆತನಕ ನೆನಪಿಟ್ಟುಕೊಳ್ಳುತ್ತಾರೆ. ಕೆಲವರು ಮರೆತೇ ಬಿಡುತ್ತಾರೆ!?..  ಕಾಳಿದಾಸನ ಮಹಾಕಾವ್ಯ ಶಾಕುಂತಲೆಯಲ್ಲಿ ಈ ಬದುಕು, ಮನುಷ್ಯ ಪ್ರೀತಿ ಪಯಣದ ನೆನಪು ಮತ್ತು ಮರೆವಿನಾಟ ಮನಮಿಡಿಯುವಂತೆ ಚಿತ್ರಣಗೊಂಡಿದೆ. ಈ ಕಾವ್ಯದಲ್ಲಿ ಎಲ್ಲವನ್ನು ವಿಧಿಯೇ ನಿರ್ಧರಿಸಿದಂತೆನಿಸುತ್ತದೆ. ಫೇಟಲಿಸಂ ವಾದಕ್ಕೆ ಪೂರಕವಾದ ಚಿಂತನೆ ಇದೆನ್ನಬಹುದು. ಆಧುನಿಕ ಯುಗದ ಶೇಕ್ಸಪಿಯರ್ ನ ಹಲವು ನಾಟಕಗಳಲ್ಲಿಯೂ ಈ ಫೇಟಲಿಸಂ ಪ್ರಧಾನ ಪಾತ್ರದಂತೆ ವರ್ತಿಸುವುದನ್ನು ಗಮನಿಸಬಹುದು. * ...

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರ...