ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹ್ಯಾಪಿ ಮೇರಿ ಕ್ರಿಸ್ಮಸ್..

ಕ್ರಿಸ್ ಮಸ್ ಅಂದರೆ ಪಶ್ಚಿಮದ ದೇಶಗಳಲ್ಲಿ ಕ್ರೈಸ್ತ ಜಗತ್ತು. ಇಂಡಿಯಾದಲ್ಲಿ ಅದೊಂದು ಧಾರ್ಮಿಕ ಆಚರಣೆ ಅಲ್ಲ. ಪ್ರೀತಿ, ಸ್ನೇಹ, ಸೌಹಾರ್ದತೆಯ ಸಂಭ್ರಮ. ಡಿಸೆಂಬರ್ 24ರಿಂದಲೇ ಕೇಕ್ ಸುಗ್ಗಿ ಶುರುವಾಗಿಬಿಡುತ್ತದೆ. ಬೆಂಗಳೂರಿನ ನೀಲಗಿರಿಸ್ ಕೇಕ್, ಕೇಕ್ ಶೋ.. ಕ್ರೈಸ್ತೇತರರೇ ಜಾಸ್ತಿ ಇರುವ ಕಮರ್ಷಿಯಲ್ ಸ್ಟ್ರೀಟ್, ಎಂ.ಜಿ, ಬ್ರಿಗೇಡ್ ರೋಡ್, ಪ್ರತಿ ಶಾಪಿಂಗ್ ಮಾಲುಗಳಲ್ಲಿ ಕ್ರಿಸ್ ಮಸ್ ಕಳೆಕಟ್ಟುತ್ತದೆ. ಬೆಳಕಿನ ಭವ್ಯತೆ, ಬಣ್ಣ ಬಣ್ಣದ ಸ್ಟಾರ್, ಅಬ್ಬರದ ಸಂಗೀತ... ಥೇಟು ಗಣಪನ ಹಬ್ಬದಂಥ ವಾತಾವರಣ ಸೃಷ್ಟಿಯಾಗಿರುತ್ತದೆ. ಹೌದು ಅಷ್ಟಕ್ಕೂ ಇಂಡಿಯಾ ತುಂಬ ಕ್ರೈಸ್ತರೇ ತುಂಬಿಕೊಂಡಿದ್ದಾರಾ! ಎಂದು ಪಶ್ಚಿಮದ ಕ್ರೈಸ್ತರೂ ನಾಚುವಂಥ ಕ್ರಿಸ್ ಮಸ್ ಇಲ್ಲಿ ವಿಜೃಂಭಿಸುತ್ತದೆ. ಧಾರವಾಡದ ಕಿಟೆಲ್ ಸೈನ್ಸ್ ಕಾಲೇಜಿನಲ್ಲಿ ನಾನು ಪದವಿ ಓದುತ್ತಿದ್ದಾಗ ಕ್ರಿಸ್ ಮಸ್ ಬಂತೆಂದರೆ ನಮಗೆಲ್ಲ ಈವೆಂಟು, ರಜಾಕಾಲ. ನಾನೂ ಕಾಲೇಜಿನ ಗ್ರೂಪ್ ಸಾಂಗ್ ಟೀಂನಲ್ಲಿ ಹಾಡುಗಾರನಾಗುತ್ತಿದ್ದೆ. ಎಲ್ಲ ಚರ್ಚ್ ಸಂಗೀತದ ಧುನ್ ಗಳೇ. ಕೆಲ ಕ್ರೈಸ್ತ ಹುಡುಗರು ನನ್ನನ್ನು ಅದೆಷ್ಟು ಬಾರಿ ಪಿಯಾನೊ, ವಯೊಲಿನ್, ಗಿಟಾರ್ ಕಲಿಸ್ತೀನಿ ಬಾ ಎಂದು ಗೋಗರೆಯುತ್ತಿದ್ದರು. ಅದರಲ್ಲಿನ ಕೆಲ ಗೆಳೆಯರು ಈಗ ರಾಜ್ಯದ ವಿವಿಧ ಭಾಗಗಳಲ್ಲಿ ಪಾದ್ರಿಗಳಾಗಿದ್ದಾರೆ. ಮ್ಯಾಡ್ಸ್ MADS ಎನ್ನುವ ನಮ್ಮ ಗೆಳೆಯರ ಗುಂಪಿನ ಮೊದಲ  ಅಕ್ಷರ M ಅಂದರೆ ಮ್ಯಾಥ್ಯು ನಮ್ಮ ಅಕ್ಕರೆಯ ಮಿತ್ರ. ಆತ ಬಹುಶಃ ಎಲ್ಲಾ ಇನ

ವೈಯಕ್ತಿಕವಾದದ ರಾಜಕೀಯ ಇನ್ನೂ ಅನಿವಾರ್ಯವೇ?

ಲೋಕಸಭೆ, ವಿಧಾನಸಭೆಗೆ ನಡೆವ ಚುನಾವಣೆಗಳಲ್ಲಿ ವೈಯಕ್ತಿಕವಾದವೇ ವಿಜೃಂಭಿಸುತ್ತಿದೆ. ಇಡೀ ದೇಶ ಸೋನಿಯಾ, ರಾಹುಲ್, ಅಡ್ವಾಣಿ... ಎನ್ನುವ ಹೆಸರುಗಳ ಆಧಾರದಲ್ಲಿ ಒಂದು ವ್ಯವಸ್ಥೆಯನ್ನು ರೂಪಿಸಿಕೊಳ್ಳುತ್ತಿದೆ. ಕಾಶ್ಮೀರದಲ್ಲಿ ಫಾರೂಕ್, ಓಮರ್ ಅಬ್ದುಲಾ. ಉತ್ತರ ಪ್ರದೇಶದಲ್ಲಿ ಮಾಯಾವತಿ, ಮುಲಾಯಂ. ಗುಜರಾತಿನಲ್ಲಿ ನರೇಂದ್ರ ಮೋದಿ. ಬಿಹಾರದಲ್ಲಿ ಲಾಲೂ ಯಾದವ್, ನಿತೀಶ್ ಕುಮಾರ್. ದಕ್ಷಿಣದ ತಮಿಳುನಾಡಿನಲ್ಲಿ ಕರುಣಾನಿಧಿ, ಜಯಲಲಿತಾ. ಆಂಧ್ರದಲ್ಲಿ ನಾಯ್ಡು, ಚಿರಂಜೀವಿ, ಜಗನ್ ಮತ್ತು ಕರ್ನಾಟಕದಲ್ಲಿ ಯಡಿಯೂರಪ್ಪ, ದೇವೇಗೌಡ, ಕುಮಾರಸ್ವಾಮಿ... ಮತ್ತಿತರರ ವೈಯಕ್ತಿಕ ಮಹತ್ವಾಕಾಂಕ್ಷೆ, ರಾಜಕೀಯ ಹಿತಾಸಕ್ತಿಗಳೇ ಈಗ ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿರುವುದನ್ನು ಪ್ರಾದೇಶಿಕ ಮಟ್ಟದಲ್ಲೂ ಕಾಣುತ್ತಿದ್ದೇವೆ. ವೈಯಕ್ತಿಕವಾದದ ಹಿತಾಸಕ್ತಿ ಕಾಪಾಡಲು ತಮ್ಮದೇ ಸಿದ್ಧಾಂತಗಳು, ಪಕ್ಷ ಮತ್ತು ಸಮೀಕರಣಗಳನ್ನು ಇವರು ರೂಪಿಸಿಕೊಳ್ಳುತ್ತಾರೆ. ಜಾತಿ, ಹಣ, ತೋಳ್ಬಲಗಳ ಬಳಕೆಯೂ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಇದೆಲ್ಲ ಪ್ರಜಾಪ್ರಭುತ್ವ ಹೆಸರಲ್ಲಿ ತತ್ವರಹಿತ ರಾಜಕೀಯ. ಅರಸೊತ್ತಿಗೆಯ ಮತ್ತೊಂದು ರೂಪದಂತಿದೆ. * * * ಗುಜರಾತಿನಲ್ಲಿ ಮೋದಿಯಿಂದಾಗಿ ಬಿಜೆಪಿ ಉಳಿದುಕೊಂಡಿದೆ. ಬಿಹಾರದಲ್ಲಿ ನಿತೀಶ್ ಕುಮಾರನಿಂದಾಗಿ ಎನ್ ಡಿ ಎ ಬದುಕುಳಿಯುತ್ತಿದೆ. ಉತ್ತರ ಪ್ರದೇಶದಲ್ಲಿ ಮಾಯಾವತಿಯಿಂದಾಗೇ ಬಿಎಸ್ಪಿ ಉಸಿರಾಡುತ್ತಿದೆ. ತಮಿಳುನಾಡಿನಲ್ಲಿ ಡಿಎಂಕೆ ಉಸಿರಾಡುತ್ತಿ