ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜನವರಿ 29, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಜರ್ನಲಿಸಂ ಅಧ್ಯಯನ- ಅಲುಮ್ನಿ ಮೀಟ್., ತೋಬತೇಕ ಸಿಂಗ್ ನಾಟಕ. ಮಧುರ ನೆನಪುಗಳು ಮತ್ತು ಮಡುಗಟ್ಟಿರುವ ನೋವು

ವಿಶ್ವವಿದ್ಯಾಲಯ... ಅರಿವಿನ (ಜ್ಞಾನ) ದೊಡ್ಡ ವಿಶ್ವವೇ ತೆರಕೊಳ್ಳುವ ತಾಣ. ನಾವು ಆಯ್ದುಕೊಂಡ ವಿಷಯದ ಸಮಗ್ರ ವಿಶ್ವವೇ ಅಲ್ಲಿ ದರ್ಶನವಾಗಬೇಕು. ಹೀಗಾಗುವುದುಂಟೆ!(?) ಪತ್ರಿಕೋದ್ಯಮ ಎಂದರೆ ಪತ್ರಿಕೆಗೆ ಕೆಲಸ ಮಾಡುವುದು... ಅದನ್ನು ಹೇಗೆ ಮಾಡಬೇಕು? ಇದನ್ನು ಕಲಿಸುವುದೇ ವಿಶ್ವವಿದ್ಯಾಲಯ! ಹೀಗೆಂದುಬಿಟ್ಟರೆ... ಬರವಣಿಗೆ, ವರದಿ, ಎಡಿಟಿಂಗ್... ಬಗ್ಗೆ ಟಿಪ್ಸ್ ಕೊಡುವ ಕೆಲಸ ಮಾತ್ರ ವಿವಿಗಳದ್ದಾಗಿಬಿಡುತ್ತದೆ. ಸುಮಾರು ವರ್ಷಗಳ ಹಿಂದೆ ವಿವಿಗಳ ಸ್ಥಿತಿ (ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನಕ್ಕೆ ಸಂಬಂಧಿಸಿ) ಇದಕ್ಕೂ ಭಿನ್ನವೇನಿರಲಿಲ್ಲ. ಇದೇ ಸ್ಥಿತಿ ಈಗಲೂ ಇರಬಹುದು. ಕಾಲೇಜುಗಳಲ್ಲೂ... ಆದರೆ, ಇದೆಲ್ಲ ಮಿತಿಗಳನ್ನು ಮೀರಿ ಎಂಎ ಮಾಸ್ ಕಮ್ಯುನಿಕೇಷನ್ ಅಂಡ್ ಜರ್ನಲಿಸಂ ಅನ್ನು ತುಂಬ ಆಸ್ಥೆಯಿಂದ, ಆಸಕ್ತಿಯಿಂದ ಮತ್ತು ಅರ್ಥಪೂರ್ಣವಾಗಿ ಅಧ್ಯಯನ ಮಾಡುವ ಉಮೇದಿಯ ನನ್ನಂಥ ಹುಡುಗರು ಅನೇಕರಿದ್ದರು. ಸಮೂಹ ಮಾದ್ಯಮ ಅಥವಾ ಒಟ್ಟಾರೆ ಮಾಧ್ಯಮ ಪರಿಕಲ್ಪನೆಯ ಬಗ್ಗೆ ನನಗಂತೂ ಚೆನ್ನಾಗಿ ತಿಳಿದಿತ್ತು. ಥಿಯೇಟರ್, ಸಿನಿಮಾ, ಟಿವಿ, ಡಾಕ್ಯುಮೆಂಟರಿ, ಬೀದಿನಾಟಕ, ಸಾಕ್ಷರತಾ ಚಳವಳಿ, ಜಾಥಾ, ಶಿಬಿರ... ಹೀಗೆ ಮಾಧ್ಯಮದ ಹಲವು ಆಯಾಮಗಳಲ್ಲಿ ನಾನಾಗಲೇ ಸಕ್ರಿಯನಾಗಿ ತೊಡಗಿಕೊಂಡಿದ್ದವ. ಸಮೂಹ ಮಾದ್ಯಮದ ಕೆಲಸ, ಪಾತ್ರ ಮತ್ತು ಅದರ ಪರಿಣಾಮ, ಫಲಿತಾಂಶಗಳ ಬಗ್ಗೆಯೂ ಚೆನ್ನಾಗಿ ಅರಿವಿಟ್ಟುಕೊಂಡೇ ವಿವಿ ಶಿಕ್ಷಣದ ಹೊಸ್ತಿಲು ತುಳಿದಿದ್ದೆ (ಈ ವಿಭಾಗಕ್ಕೆ