ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮೇ 20, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮಲೆಗಳಲ್ಲಿ ಮದುಮಗಳು: ಅದ್ಭುತ ರಂಗಾನುಭವ! ಆದರೆ...

ಮೈಸೂರು ರಂಗಾಯಣದಂಗಳದಲ್ಲಿ  ಸೃಷ್ಟಿಯಾಗಿದ್ದ 'ಮಲೆಗಳಲ್ಲಿ' ಮದುಮಗಳು  ಸಂಭ್ರಮಿಸಿದ ಪರಿಗೆ ರಂಗಪ್ರೇಕ್ಷಕರೆಲ್ಲ ಮೂಕವಿಸ್ಮಿತ! ಕನ್ನಡದ ಮಹಾಕಾದಂಬರಿ  "ಮಲೆಗಳಲ್ಲಿ ಮದುಮಗಳು" (ರಚನೆ: ಕುವೆಂಪು)  ಹೀಗೆ ಅಕ್ಷರಶಃ ಜೀವಪಡಕೊಂಡು ಒಂದಿಡೀ ರಾತ್ರಿ ಬದುಕಿತು! (ಮದುಮಗಳು ಈಗ ಹಲವು ರಾತ್ರಿಗಳನ್ನೂ ಕಾಣುತ್ತಿದ್ದಾಳೆ) ಭಾರತೀಯ ರಂಗಭೂಮಿ ಇತಿಹಾಸದಲ್ಲಿ ಕಾದಬಂಬರಿಯೊಂದು ಹೀಗೆ ರಂಗರೂಪ ಕಂಡಿದ್ದು ಬಹುಶಃ ಇದೇ ಮೊದಲಿರಬೇಕು. "ಮಲೆಗಳಲ್ಲಿ ಮದುಮಗಳು" ಹೆಸರಾಂತ ರಂಗಕರ್ಮಿ ಸಿ. ಬಸವಲಿಂಗಯ್ಯ ಅವರ ಮಹತ್ವಾಕಾಂಕ್ಷೆಯ ರಂಗಸಾಹಸ. ಪ್ರಯೋಗದಲ್ಲಿ ಬಹುವಾಗಿ ಸೆಳೆದಿದ್ದು ರಂಗವಿನ್ಯಾಸ (ವಿನ್ಯಾಸ: ದ್ವಾರ್ಕಿ). ಮಲೆನಾಡಿನ ಒಂದು ಭಾಗವನ್ನೇ ಕತ್ತರಿಸಿ ತಂದು ರಂಗಾಯಣದ ಆವರಣದಲ್ಲಿಟ್ಟಂತಿತ್ತು. ನಾಟಕದ ಜೀವಾಳವೇ ಈ ವಿನ್ಯಾಸ ಎಂದರೆ ತಪ್ಪಲ್ಲ. ಒಟ್ಟಾರೆಯ ಕಥೆಯ ಮೂಡ್ ಸೃಷ್ಟಿಯಾಗೋದೇ ಮಲೆನಾಡಿನ ಪರಿಸರದಿಂದ. ಪಾತ್ರಗಳನ್ನು ಇದರಿಂದ ಹೊರಕ್ಕಿಟ್ಟರೆ ಕಥೆಯೇ ನೀರಸ. ಹೀಗಾಗಿ ರಂಗದ ಮೇಲೆ ಕಾದಂಬರಿ ತರಲು ಇಂಥ ಪರಿಸರದ ಮರುಸೃಷ್ಟಿಯ ಸಾಹಸ ಅನಿವಾರ್ಯ. ಒಟ್ಟು ರಂಗವನ್ನು ನಾಲ್ಕು ಸ್ಥಳಗಳಲ್ಲಿ ವಿಂಗಡಿಸಿಕೊಳ್ಳಲಾಗಿತ್ತು. ಕಥೆಯ ಓಘ ಮತ್ತು ಅದು ಬಯಸುವ ಪರಿಸರ, ಮೂಡ್ ಗೆ ತಕ್ಕಂತೆ ರಂಗಸಜ್ಜಿಕೆ ಮಾಡಲಾಗಿತ್ತು. ಕಥೆಯ ಒಂದು ಭಾಗ ಮೊದಲ ರಂಗಸಜ್ಜಿಕೆಯಲ್ಲಿ ಕೊನೆಗೊಂಡರೆ ಮುಂದಿನದು ಮಿಕ್ಕ ರಂಗಸಜ್ಜಿಕೆಗಳಲ್ಲಿ... ಹೀಗೆ ದೃಶ್ಯಗ