ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಆಗಸ್ಟ್ 7, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಬಳ್ಳಾರಿ ಕೆ ಶೋಲೆ!

ರೆಡ್ಡಿ/ಶ್ರೀರಾಮುಲು ಫೈಲ್: ಖಾಸಗಿ ಫೈನಾನ್ಸ್ (Ennoble Savings and Investment India Pvt. Ltd) ಕಂಪೆನಿ ತೆಗೆದು ಬಳ್ಳಾರಿ ತುಂಬ ರೆಡ್ಡಿ (ಗಾಲಿ ಜನಾರ್ಧನ ರೆಡ್ಡಿ, ಕರುಣಾಕರ ರೆಡ್ಡಿ) ಶ್ರೀಮಂತಿಕೆಯ ಧೂಳು ಎಬ್ಬಿಸಿದ್ದರು. 200 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಇಕ್ಕಟ್ಟಿಗೂ ಸಿಕ್ಕಿತ್ತು. ಈಗದು ಇತಿಹಾಸ. ಯಾವಾಗ ಚೀನಾಗೆ ಬಳ್ಳಾರಿಯ ಅದಿರು ಸಾಗತೊಡಗಿತೋ ಇವರ ನಸೀಬೇ ಚೇಂಜ್ ಆಯ್ತು. ಬಿಸಿಲು ನಾಡಿನ ರಸ್ತೆಯ ಮೇಲೇಳುತ್ತಿದ್ದ ಧೂಳು ಆಕಾಶಕ್ಕೆ ಟ್ರಾನ್ಸಫರ್ ಆಯ್ತು. ಅಕ್ರಮ ಅದಿರು ಸಾಗಾಣಿಕೆಯ ಆರೋಪದ ಹಿನ್ನೆಲೆಯಲ್ಲಿ ಇವರನ್ನು 'ಅದಿರುಗಳ್ಳರು' ಎಂದು ಟೀಕಿಸಲಾಗುತ್ತಿದೆ. * * * ಶ್ರೀರಾಮುಲು: ಬಳ್ಳಾರಿ ಚುನಾವಣೆ ಸಂದರ್ಭದಲ್ಲಿ ಶ್ರೀರಾಮುಲು ಅವರನ್ನು ಪೊಲೀಸರು ಎರಡು ಬಾರಿ ಬಂಧಿಸಿದ್ದರು. ಪ್ರಕರಣಗಳು: 1 ಕಾಂಗ್ರೆಸ್ ಅಭ್ಯರ್ಥಿ ಲಾಡ್ ಕಾರುಗಳನ್ನು ಸುಟ್ಟು ಹಾಕಿದ್ದು. 2 ಕಾಂಗ್ರೆಸ್ ಕಾರ್ಯಕರ್ತನನ್ನು ಪ್ರಜ್ಞೆತಪ್ಪುವಂಥ ಸ್ಥಿತಿಗೆ ಬರುವ ಹಾಗೆ ಥಳಿಸಿದ್ದು. ಇವೆರಡೂ ಪ್ರಕರಣಗಳಲ್ಲಿ ಗಾಲಿ ಜನಾರ್ಧನ ರೆಡ್ಡಿ , ಶ್ರೀರಾಮುಲು ಬೆನ್ನಿಗೆ ನಿಂತುಕೊಂಡರು. ಗಣಿ ವ್ಯವಹಾರದಲ್ಲೂ ಇಬ್ಬರೂ ಸಾಥಿ. ಶ್ರೀರಾಮುಲು ಹಿಂದುಳಿದ ವರ್ಗಕ್ಕೆ ಸೇರಿದವರು. ರೆಡ್ಡಿ ಪ್ರಬಲ ಕೋಮಿನವರು. ಒಂದೇ ಪರಿವಾರದ ಸದಸ್ಯರಂತಿದ್ದಾರೆ. "ಶೋಲೆ" ಸಿನಿಮಾದ ಧರ್ಮೆಂದ್ರ ಮತ್ತು ಅಮಿತಾಬ್ ಜೋಡಿಯಂ