ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಗಡಿಯಾರ!

ಅದೊಂದು ಛೋಟೆಖಾನ್ ಸಾಹೇಬರ ಖಾನದಾನಿ ದುಕಾನು. ಅದರ ದರವಾಜಾದ ಮೇಲೆ ಅಜ್ಜನ ಕಾಲದ ದೊಡ್ಡದೊಂದು ಗಡಿಯಾರ. ಖಾನ್ ಸಾಹೇಬರು ಮುಂಜಾವಿನ ನಮಾಜಿಗೆ ಹೊರಡುವ ಹೊತ್ತಿಗೆ ಸರಿಯಾಗಿ,  ತನ್ನ ಪ್ರೇಯರ್ ಗೆಂದು ತೆರಳುತ್ತಿರುವ ಮತ್ತೊಬ್ಬ ವ್ಯಕ್ತಿ ಎದುರಾಗುತ್ತಿದ್ದ. ನಿತ್ಯ ದುಕಾನು ಮುಂದೆಯೇ ಹಾದುಹೋಗುತ್ತಿದ್ದ. ದುಕಾನಿನ ದೊಡ್ಡ ಗಡಿಯಾರ ನೋಡಿಕೊಂಡು ತನ್ನ ಕೈಗಡಿಯಾರ ಸೆಟ್ ಮಾಡಿಕೊಳ್ಳುತ್ತಿದ್ದ. ನಿತ್ಯವೂ ಇದನ್ನು ತಪ್ಪದೇ ಮಾಡುತ್ತಿದ್ದನಾತ. ಛೋಟೆಖಾನ್ ಸಾಹೇಬರು ಇದನ್ನು ತುಂಬ ದಿನಗಳಿಂದ ಗಮನಿಸುತ್ತಲೇ ಇದ್ದರು. ವಿಚಿತ್ರ ಕುತೂಹಲ ಇವರ ತಲೆ ತಿನ್ನತೊಡಗಿತ್ತು. ಇವನ್ನ ತಡೆದು ಒಮ್ಮೆ ವಿಚಾರಿಸಿಕೊಳ್ಳಲೇಬೇಕು ಎಂದು ತೀರ್ಮಾನಕ್ಕೆ ಬಂದುಬಿಟ್ಟರು.  ಎಂದಿನಂತೆ ಆ ವ್ಯಕ್ತಿ ದುಕಾನಿನೆದುರು ನಿಂತ. ಗಡಿಯಾರ ನೋಡಿ, ತನ್ನ ಕೈಗಡಿಯಾರ ಸೆಟ್ ಮಾಡಿಕೊಳ್ಳತೊಡಗಿದ. ಛೋಟೆಖಾನ್ ಸಾಹೇಬರು ಚಂಗನೆ ಆ ವ್ಯಕ್ತಿಯತ್ತ ನೆಗೆದು ಗಬಕ್ಕನೆ ಹಿಡಿದುಕೊಂಡುಬಿಟ್ಟರು. ಆತ ಗಾಬರಿಗೊಳ್ಳಲಿಲ್ಲ. ಸುಮ್ಮನೇ ನಿಂತುಬಿಟ್ಟ. ಅವನ ಸ್ಥಿತಪ್ರಜ್ಞೆಗೆ ಛೋಟೆಖಾನ್ ಸಾಹೇಬರು ದಂಗಾದರು.  ಅಲ್ಲ ಮೀಯಾ, ನಿತ್ಯ ನಮ್ಮ ದುಕಾನಿನ ಗಡಿಯಾರ ನೋಡಿಕೊಂಡೇ ನಿನ್ನ ಕೈಗಡಿಯಾರ ಸೆಟ್ ಮಾಡಿಕೊಳ್ಳುತ್ತಿಯಲ್ಲಾ ಯಾಕೆ? 'ಖಾನ್ ಸಾಹೇಬರೆ ನಾನು ಮಿಲ್ ನಲ್ಲಿ ಫೋರಮನ್ ಆಗಿದ್ದೆ. ನಿತ್ಯ ಇದೇ ಸಮಯಕ್ಕೆ ಸೈರನ್ ಮೊಳಗುವಂತೆ ನೋಡಿಕೊಳ್ಳುವುದು ನನ್ನ ಜವಾಬುದಾರಿಯಾಗಿತ್ತು. ಈಗಲೂ

ಈ ಬಂಧ, ಸಂಬಂಧ...

ಈಗ ಗಡಿಗಳೇ ಇಲ್ಲ. ಭಾವಸಮುದ್ರ ಎಲ್ಲೆಂದರಲ್ಲಿ ಆವರಿಸಿಕೊಂಡುಬಿಡುತ್ತದೆ. ಮಾಹಿತಿ ತಂತ್ರಜ್ಞಾನ ಇಡೀ ಜಗತ್ತನ್ನು ಒಂದು ಹಳ್ಳಿಯಂತಾಗಿಸಿದ್ದು ಹೌದು. ಆದರೆ, ಮನುಷ್ಯನ ಆಳದಲ್ಲೇ ಅಂತಃಕರಣ, ಬಂಧ, ಸಂಬಂಧ, ಸೆಳೆತಗಳ ಅಗಾಧ ಶಕ್ತಿ ಇದೆಯಲ್ಲ ಅದು ಎಂದಿನಿಂದ ಎಲ್ಲ ಮಿತಿ, ಬೇಲಿಗಳನ್ನು ಕಿತ್ತು ಬಿಸಾಕುತ್ತ ಸಾಗುತ್ತಿಲ್ಲವೇನು... ಭಾಷೆ, ಜಾತಿ, ಬಣ್ಣಗಳ ಮಿತಿಯಲ್ಲಿ ಅಷ್ಟು ಸುಲಭಕ್ಕೆ ಕರಗಿ ಹೋಗುವಂಥದಲ್ಲ ಮನುಷ್ಯ ಪ್ರೀತಿ. ಕರಗುವುದಾದರೂ ಯಾಕೆ? ಮಲೆಗಳಲ್ಲಿ, ಮರದ ಕೊಂಬೆಗಳಲ್ಲಿ ಅಲೆದಾಡಿ, ನಲಿದಾಡಿ ಬೆಳೆದುಬಂದ ಮನುಷ್ಯ ಜೀವ ಹೊಸ ಹೊಸ ನಾಗರಿಕತೆಯ ಹೊಳೆಯಲ್ಲಿ ಈಜುತ್ತಲೇ ಇದೆ. ಕಾಡಿಂದ ನೆಲ, ನೆಲದಿಂದ ನೀರು, ಆಕಾಶ, ಬಾಹ್ಯಾಕಾಶ, ಚಂದ್ರ, ಮಂಗಳ... ಮಿತಿಯುಂಟೇ ಈ ನೆಗೆತಕ್ಕೆ! ಸ್ವಿಜರಲ್ಯಾಂಡ್ ನ ಜ್ಯುರಿಚ್ ಗೆ ಪಯಣಿಸುತ್ತಿದ್ದೆ. ಸಹ ಪಯಣಿಗರಾಗಿ ನನ್ನ ಪಕ್ಕದ ಸೀಟ್ ನಲ್ಲಿ ನಾರ್ವೆ ದಂಪತಿ ಇದ್ದರು. ನಾನು ಆಕಾಶ ನೋಡುತ್ತಿದ್ದೆ. ಅಪರೂಪಕ್ಕೆ ಸೂರ್ಯ ಇಣುಕುತ್ತಿದ್ದ. ಕ್ಯಾಮೆರಾ ಕೊರಳಲ್ಲೇ ನೇತಾಡುತ್ತಿತ್ತು. ಎತ್ತಿಕೊಂಡು ಕ್ಲಿಕ್ಕಿಸುತ್ತಲೇ ಇದ್ದೆ. ಚಳಿ ಎನ್ನುವ ಛಿನಾಲಿಯಿಂದ ಬೇಸತ್ತ ದಿಲ್  ಸೂರ್ಯನ ಬಿಸಿಲಿಗೆ ಗುಲ್ ಮೊಹರಿನಂತೆ ಅರಳುತ್ತಿತ್ತು. ಆಕಾಶ ನಮ್ಮ ಮನಸುಗಳಂತೆ ತೆರಕೊಳ್ಳುತ್ತಲಿತ್ತು. ನಾನು ಮೋಡಗಳ ಜತೆ ಮೋಡವಾಗಿದ್ದೆ ಚಣ ಕಾಲ... ಪಕ್ಕದ ಸೀಟ್ ನಲ್ಲಿ ಕುಳಿತ ಮಹಿಳೆ ನನ್ನ ಭುಜದ ಮೇಲೆ ಕೈ ಇಟ್ಟು, ಅದೆಷ್ಟು ಮುಳುಗಿಹೋಗುತ

ಏಯ್ ಧೀರ ಅಮ್ಮನಿಗೊಂದು ಸೆಲ್ಯೂಟ್ ಹೊಡಿಯೋ, ನನ್ನ ಪರವಾಗಿ...

ಕಳೆದೆರಡು ದಿನ ಇಲ್ಲಿ ಜೀವ ಸಣ್ಣಗೆ ನಡುಗುತ್ತಿತ್ತು. ಹೆರಿಗೆಯ ನೋವುಗಳಲ್ಲಿ ಹೆಣ್ಣುಜೀವವೊಂದು ಚಡಪಡಿಸುತ್ತಿತ್ತು, ಬಿಕ್ಕುತ್ತಿತ್ತು, ಹೊಸ ಜೀವಕ್ಕೊಂದು ಜನ್ಮ ಕೊಡುವುದು ತಮಾಷೆಯಾ... ಮನೆ ತುಂಬ ನಂಬುಗೆಯ ದೀಪಗಳನ್ನಿಟ್ಟು ಹಾರೈಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದೆವು. ಕಾತರದಿಂದ ಕಾಯುತ್ತಿದ್ದ ಕ್ಷಣ ಬರುತ್ತಿದ್ದಂತೆ ಅವಕ್ಕೂ ಜೀವ ಬಂತು. ದೀಪಗಳು ಬೆಳಗತೊಡಗಿದವು. ನನ್ನವ್ವ ಮಾಡಿದ ಸಿಹಿ ಘಮ ಘಮಸತೊಡಗಿತು. ಅಮ್ಮನ ಒಡಲಿಂದ ಹೊರ ಬರುವ ಮುನ್ನ ಅವಳ ಲೋಕದಲ್ಲಿ ಬೆಚ್ಚಗಿದ್ದವ, ಈಗ ನಾರ್ವೆ ಚಳಿಗೆ ತೆರಕೊಂಡುಬಿಟ್ಟ. ಒಂಬತ್ತು ತಿಂಗಳು ಒಂಬತ್ತು ದಿನ ಒಡಲಲ್ಲೇ ಅದಾವ ಲೋಕ ಕಂಡನೋ, ಅದೆಷ್ಟು ಪ್ರೀತಿ ಉಂಡನೋ ಹೊರಕ್ಕೆ ಬರಲು ಒಲ್ಲೆ ಎನ್ನುವಂತೆ ವರ್ತಿಸಿದ. ವೈದ್ಯರು ಕೊಟ್ಟ ತಾರೀಕು ನವೆಂಬರ್ 24, 30... ಎಲ್ಲ ಕಳೆದುಹೋದವು. ವರ್ಷದ ಕ್ಯಾಲೆಂಡರ್  ಕಡೆಯ ತಿಂಗಳ ಹಾಳೆ ಬದಲಿಸುವುದಕ್ಕೆ ಇವನೇ ಬೇಕಿದ್ದನೆನ್ನುವಂತೆ ಹೊಸ ಜಗತ್ತಿಗೆ ದುತ್ತನೇ ಬಂದು ನಿಂತ. ಎಲಾ ಕಿಲಾಡಿ! ಆಗಲೇ ಹೊಕ್ಕಳುಹುರಿ ಕತ್ತರಿಸ ಹೊರಟ ವೈದ್ಯರ ಕತ್ತರಿ ಹಿಡಿಯನ್ನೆ ಗಟ್ಟಿ ಹಿಡಿದುಕೊಂಡಿದ್ದನಂತೆ! ಆ ಸಂದರ್ಭದಲ್ಲಿ ಅವರಪ್ಪ ಅಲ್ಲೇ ಇದ್ದರು. ವೈದ್ಯರ ತಂಡವೆಲ್ಲ ನಕ್ಕಿದ್ದೇ ನಕ್ಕಿದ್ದಂತೆ. ಆಸ್ಪತ್ರೆಯೊಳಗೆ ನನ್ನ ತಂಗಿಯನ್ನು ಕಾಣಲಾಗಲಿಲ್ಲ. ಒಳಕ್ಕೆ ಬಿಡಲಿಲ್ಲ. ಗಂಡನ ಬಿಟ್ಟರೆ ಅವಳ ಬಳಿ ಯಾರೂ ಇರುವಂತಿಲ್ಲ ಇಲ್ಲಿ. ಇಷ್ಟು ದಿನ ಇಲ್ಲಿ ಇದ್ದು ಅವಳ ಹೆರಿಗೆಯ ಮುಂಚೆ

ಹೊಸ ಬೆಳಕು ಹಬ್ಬಿಸಲು ಕಾದು ಕೂತ ದೀಪಗಳು...

ಈ ಜೀವಜಗತ್ತಿನ ಬಂಡಿ ಸಾಗಿಸುವ ಭಾರವೆಲ್ಲ ಹೆಣ್ಣಿಗೇ ಏಕೆ? ಹಟಕ್ಕೆ ಹೆಸರಾದ ಹೆಣ್ಣು ತಾಯಿಯಾಗುವಾಗ ನಮ್ಮನ್ನೆಲ್ಲ ಸಣ್ಣಗೆ ಅಲುಗಾಡಿಸಿಬಿಡುತ್ತಾಳೆ. ಅದಕ್ಕೇ ಜನಪದ ಮತ್ತು ಎಲ್ಲ ಧರ್ಮ ಗ್ರಂಥಗಳಲ್ಲೂ ತಾಯಿಗೆ ದೊಡ್ಡ ಸ್ಥಾನವಿದೆ. ಖುರಾನ್ ನಲ್ಲೂ. ಒಂದು ಉರ್ದು ಕವಿತೆ ಹೀಗೆ ಬಣ್ಣಿಸಿದೆ. ಈ ಜಗವ ರೂಪಿಸಿದವ ತಾಯಿಗೆಂಥಾ ಶ್ರೇಷ್ಠ ದರ್ಜೆ ಕೊಟ್ಟ ಅವಳ ಒಂದು ಪ್ರಾರ್ಥನೆಯಲ್ಲಿ ಎರಗಿದ ಕಂಟಕ ಪರಿಹರಿಸುವ ಶಕ್ತಿಯನಿತ್ತ! ಖುರಾನ್ ಇವಳ ಮಮತೆಯ ಹೀಗೆ ಬಣ್ಣಿಸಿದೆಯಲ್ಲಾ ದೇವರು ಸ್ವರ್ಗವನ್ನೇ ತಾಯ ಪಾದಕ್ಕೆಸೆದುಬಿಟ್ಟ!  ಅದೆಷ್ಟು ಬರಹಗಾರರು ಹೆಣ್ಣಿನ ತಾಯಿಗುಣ ಬಣ್ಣಿಸಿದ್ದು ಸುಮ್ಮನೇ ಅಲ್ಲ. ಈ ಉಪಖಂಡ ಕಂಡ ಅದ್ಭುತ ಕವಿ ಅಲ್ಲಾಮಾ ಇಕ್ಬಾಲ್ ತಮ್ಮ "ಮಾ ಕಾ ಖ್ವಾಬ್" ಕವಿತೆಯಲ್ಲಿ ತಾಯಿಯ ಕನಸು ಜೀವದ ಒಂದಿಡೀ ಪಯಣವನ್ನೇ ಬಿಚ್ಚಿಡುತ್ತದೆ. ಅಲ್ಲಿ ಜನ್ಮಭೂಮಿ, ದೇಶ, ಜಗತ್ತು ತಾಯಿಪಾದದ ಧೂಳಿನ ಕಣದಂತೆನಿಸಿಬಿಡುತ್ತದೆ. ಇದೇ ಜಾಡಿನಲ್ಲಿ ನಮ್ಮ ಲಂಕೇಶ್ ಕೂಡ... "ಅವ್ವ ನನ್ನವ್ವ ಫಲವತ್ತಾದ ಕಪ್ಪು ನೆಲ..." ಎಂದರಲ್ಲವೇ. ನೆಲವೆಂದರೆ ತಾಯ್ನೆಲವೂ ಹೌದು, ಜಗತ್ತೂ ಹೌದು. ಕೆಲವರಿಗದು ಭಾರತಮಾತೆ, ಕರ್ನಾಟಕಮಾತೆ....  ತಾಯಿ ಒಂದು ಸೀಮಿತ ವ್ಯಾಪ್ತಿಯಲ್ಲ. ಎಲ್ಲದರ ಮೂಲ. ಅದರ ಹರವು ಕ್ಷಿತಿಜದಾಚೆಗೂ....  ಆರ್ಕಿಮಿಡಿಸ್ ಹೇಳುತ್ತಿದ್ದನಂತೆ, ನಿಲ್ಲಲು ಜಾಗ ಮತ್ತು ಸೂಕ್ತ ಹಾರೆ ಸಿಕ್ಕರೆ ಜಗವನ್ನೇ ಅಲುಗಾಡಿಸಬಲ್ಲೆ!.. ನಿಸರ

ರೈಲ್ವೆ: ಕನಿಷ್ಠ ವ್ಯವಸ್ಥೆ ಮತ್ತು ಸೇವಾ ಕಮಿಟಮೆಂಟ್

ಇದು ನಾರ್ವೆ ರಾಜಧಾನಿ ಸೆಂಟ್ರಲ್ ರೈಲ್ವೆ ಸ್ಟೇಷನ್ನಿನ ಒಂದು ಪ್ಲ್ಯಾಟಫಾರ್ಮ್. ಹಳಿಯಗುಂಟ ಹುಡುಕಿದರೂ ಕಾಣದ ಒಂಚೂರು ಕೊಳೆ. ಇಲ್ಲಿ ಯಾರೂ ಗಲೀಜು ಮಾಡುವುದಿಲ್ಲ, ಉಗುಳುವುದಿಲ್ಲ. ಜನರೇ ಇಟ್ಟುಕೊಂಡ, ಕಾಯ್ದುಕೊಂಡ ವ್ಯವಸ್ಥೆ. ಆದರೆ ನಾವ್ಯಾಕೆ ಹೀಗೆ ಉಳಿಸಿಕೊಳ್ಳುತ್ತಿಲ್ಲ! ಇಲ್ಲಿ ಯಾರೂ ಯಾರಿಗೂ ತೊಂದರೆ ಮಾಡುವುದಿಲ್ಲ. ಜನರೇ ಕಮ್ಮಿ ಇರುವ ಈ ದೇಶದಲ್ಲಿ ಜನಜಂಗುಳಿ ಇರುವುದಿಲ್ಲ. ಈ ಮಾತು ಸತ್ಯವಾದರೂ ಟ್ರೈನ್  ಪ್ರತಿ ಐದು ನಿಮಿಷಗಳಿಗೊಮ್ಮೆ ಕರಾರುವಕ್ಕಾಗಿ ಬರುತ್ತಲೇ ಇರುವುದರಿಂದ ಹಾಗೆ ಜನಜಂಗುಳಿಯಾಗುವುದಕ್ಕೆ ಅವಕಾಶವಾಗುವುದಿಲ್ಲ ಎನ್ನುವುದು ಇಲ್ಲಿನ ವಾಸ್ತವ. ನಮ್ಮ ದೇಶಕ್ಕೆ ಇದನ್ನು ಕಂಪೇರ್ ಮಾಡುವುದಲ್ಲ. ನಾವು ಇಂಥದೊಂದು ವ್ಯವಸ್ಥೆಯನ್ನು ಹೊಂದಲು ಸಾಧ್ಯವಿದೆ ಎನ್ನುವುದಷ್ಟೇ ನನ್ನ ಕಾಳಜಿ. ಇದು ಜನರಲ್ ಟ್ರೈನ್. ನಗರದಿಂದ ದೇಶದ ಪ್ರತಿ ಪ್ರದೇಶಕ್ಕೆ ಇಂಥದೇ ಟ್ರೈನ್ ವ್ಯವಸ್ಥೆ ಇದೆ. ನಾನು ರಾಜಧಾನಿಯಿಂದ ದೂರದ ಸ್ಯಾಂಡ್ ವಿಕಾ ಎನ್ನುವ ಒಂದು ಪುಟ್ಟದಾದ ಸುಂದರ ಪ್ರದೇಶಕ್ಕೆ ಈ ಟ್ರೈನ್ ನಲ್ಲಿ ಪ್ರಯಾಣಿಸಿದೆ. ಅಲ್ಲಿರುವ ಮುರಳಿ ಶರ್ಮಾ, ಸುಜಾತಾ ಎನ್ನುವ ದಂಪತಿ ಮನೆಗೆ ಭೇಟಿ ನೀಡುವುದು ನನ್ನ ಪ್ರಯಾಣದ ಉದ್ದೇಶವಾಗಿತ್ತು. ಅದೊಂದು ಅದ್ಭುತ ಆತಿಥ್ಯ ಕಂಡ ಕ್ಷಣ. ಸ್ಯಾಂಡವಿಕಾ ಬಗ್ಗೆ ಮತ್ತೆ ಬರೆಯುತ್ತೇನೆ. ರಾಜಧಾನಿಯ ಸೆಂಟ್ರಲ್ ಸ್ಟೇಷನ್ ನಿಂದ ಪ್ರತಿಯೊಂದು ಪ್ಲ್ಯಾಟಫಾರ್ಮ್ ಗೆ ಹೀಗೆ ಕನೆಕ್ಟ್ ಮಾಡುವ ಎಸ್ಕೆಲೇಟರ್ ಗಳಿವೆ. ನಿ

ಇದು ನಾವು ಬದುಕುತ್ತಿರುವ ವ್ಯವಸ್ಥೆ... ನಮಗೇನು ಬೇಕು?

ನಮ್ಮದನ್ನು ಇನ್ನಾರೋ ಬಳಿಯಬೇಕು. ನಮ್ಮದಕ್ಕೆ ನಾವೇ ಮೂಗುಮುಚ್ಚಿಕೊಂಡರೂ ಅವರು ಮಾತ್ರ ಮೂಗು, ಬಾಯಿ ತೆರಕೊಂಡೇ ಎಲ್ಲ ಸಹಿಸಿಕೊಂಡು ಬಳಿಯಬೇಕು. ಹೇಲು, ಉಚ್ಚೆ ಬಳಿವ ಕೈಗಳಿಗೆ ಹಣ ದಕ್ಕುವುದಾದರೂ ಎಷ್ಟು? ಅದರ ವಾಸನೆ ಹೋಗುವಂತೆ ಕೈಗೆ ಬಳಿಯಬೇಕಾದ ಸಬಕಾರಕ್ಕೂ ಅದು ಸಾಲದು. ಇನ್ನು ಇವರ ನಂಬಿದವರ ಹೊಟ್ಟೆಗೆ? ಸಾರ್ವಜನಿಕ ಸ್ಥಳಗಳನ್ನು ನಾವು ಬಳಸಿಕೊಳ್ಳುವ ಮತ್ತು ಅದರ ಬಗ್ಗೆ ನಮಗಿರುವ ಕಾಳಜಿಯ ಪರಿ ಇದು. ರೈಲುಗಳಲ್ಲಿ ಹೇಲುವುದಕ್ಕೆ, ಉಚ್ಚೆ ಹೊಯ್ಯುವುದಕ್ಕೆ ಒಂದು ನಮ್ಮದೇ ಮಿತಿ, ರೀತಿ, ರಿವಾಜುಗಳಿರಬೇಕು ಎಂದೆನಿಸುವುದೇ ಇಲ್ಲ. ಅದು ಹೇಳಿ ಕೇಳಿ ಬರುತ್ತದೆಯೇ ಎನ್ನುವ ಮಾತಲ್ಲಿ ಇರುವುದು ನಮ್ಮ ಉಡಾಫೆ ಅಷ್ಟೇ ಅನ್ನೋದು ನಮ್ಮರಿವಿಗೇ ಬರುವುದಿಲ್ಲ. ಅಥವಾ ಇಲಾಖೆಗಳು ಅದರ ನಿರ್ವಹಣೆಯ ಬಗ್ಗೆ ಹೊಸದಾಗಿ ಯೋಚಿಸುವ ಗೋಜಿಗೂ ಹೋಗುವುದಿಲ್ಲ. ಅದನ್ನು ಒಂದೆರಡು ಬೋಗಿಗೆ ಹೋಗಿ ಶೇಖರಣೆಯಾಗುವಂತೆ ನೋಡಿಕೊಳ್ಳುವ ಪೈಪಿಂಗ್ ವ್ಯವಸ್ಥೆ ಮತ್ತು ಅದನ್ನು ಎನರ್ಜಿಯಾಗಿ ಪರಿವರ್ತಿಸುವ ತಂತ್ರಜ್ಞಾನವೂ ನಮಗೆ ಸಾಧ್ಯವಾಗುತ್ತಿಲ್ಲವೆಂದರೆ ಏನು? ಹಸಿದವನಿಗೆ ರಸ್ತೆಯಾದರೇನು ರೈಲ್ವೆ ಟ್ರ್ಯಾಕ್ ಆದರೇನು... ಜನ ಸುತ್ತುವ ಜಾಗವೊಂದಿದ್ದರೆ ಆತ ಭಿಕ್ಷೆ ಬೇಡಿಯಾದರೂ ತನ್ನ ದಿನದ ತೊತ್ತಿನ ಚೀಲ ತುಂಬಿಸಿಕೊಂಡಾನು.. ನಮ್ಮೊಳಗಿನ ಈ ಮಾನವೀಯ ತುಡಿತವನ್ನು ಕಡೆಗಣಿಸುವ ಅಗತ್ಯವೇ ಇಲ್ಲ. ಬಡವರು ಮತ್ತು ಭಿಕ್ಷಾಟನೆ ಇದನ್ನು ಸಮೀಕರಿಸುವುದು ಬೇಡ. ಭಿಕ್ಷಾಟನೆ ನಮ್ಮಲ್ಲಿ

ಹೊರ ನೋಟಕ್ಕೆ ಕಾಣುವ ಬದಲಾವಣೆ ಒಳನೋಟದಲ್ಲೂ ಕಾಣುವುದು ಯಾವಾಗ?

"ನಮ್ಮ ಮೆಟ್ರೊ" ಜನ ಒಪ್ಪಿದರೋ ಬಿಟ್ಟರೋ ಅಂತೂ ಹೊಸದೊಂದು ಅತ್ಯಾಧುನಿಕ (ನಮ್ಮ ಮಟ್ಟಿಗೆ) ಸಂಚಾರ ವ್ಯವಸ್ಥೆಗೆ ಇದೇ ಹೆಸರು ಬಂದುಬಿಟ್ಟಿತು. ಇದಕ್ಕೆ ಮೊದಲ ದಿನವೇ ದಕ್ಕಿದ ಸ್ಪಂದನೆ ನೋಡಿದರೆ ಈ ಹೆಸರು ನಿಜವಾದ ಅರ್ಥದಲ್ಲಿ ಅತ್ಯಂತ ಸೂಕ್ತವೆನಿಸಿತು. ಯುರೋಪ್ ಮತ್ತಿತರ ಮುಂದುವರಿದ ದೇಶದ ಜನರ ಹಾಗೆ ನಾವಿದನ್ನು ಎಷ್ಟರಮಟ್ಟಿಗೆ ಉಪಯೋಗಿಸಿಕೊಳ್ಳುತ್ತೇವೆ, ನಮ್ಮದಾಗಿಸಿಕೊಳ್ಳುತ್ತೇವೆ ಅನ್ನೋದು ನಮ್ಮ ಮುಂದಿರುವ ಪ್ರಶ್ನೆ. ಎಂಜಿ ರಸ್ತೆಯುದ್ದಕ್ಕೂ ಅವತ್ತು ಸೇರಿದ ಜನ ಅಬ್ಬಾ! ಟಿಕೆಟ್ ಗಾಗಿ ನಿಂತ ಕ್ಯೂ ಹನುಮಂತನ ಬಾಲದಂತೆ ಬೆಳೆದಿತ್ತು. ಅವತ್ತು ರಾಜಕೀಯ ಮೈಕ್ ಗಳ ಭರಾಟೆ, ಮಾರುಕಟ್ಟೆ ಶಕ್ತಿಗಳಿಗೆಲ್ಲ ಹಬ್ಬ! ಬಹುತೇಕ ಅಂಗಡಿಗಳು ತಮ್ಮನ್ನು ತಾವು ಸಿಂಗರಿಸಿಕೊಂಡು ಹರೆಯದ ಹುಡುಗಿ ಕಾಮದೇವನ ಕಾದುನಿಂತಂತೆ ಕಾಣಿಸುತ್ತಿದ್ದವು. ಅರ್ಧ ಕುಂಡೆ ಕಾಣಿಸುವಂತೆ ಜೀನ್ಸ್ ತೊಟ್ಟ ಲಟಪಟ ಸುತ್ತುತ್ತಿದ್ದ ಸುಂದರಿಯರಂತೆ ಕಾಣಿಸುವ ಹೆಣ್ಣುಗಳು, ಮತ್ತವರ ಹಿಂದೆ ಕಣ್ಣು ಮಿಟುಕಿಸದೇ ಸುತ್ತುವ ಹಪಾಹಪಿ ಹರೆಯದ ಗಂಡುಗಳು... ಏನ್ ಮಜಾ ಅವರದು. ಮತ್ತೆ, ಇದ್ದಬಿದ್ದ ಕೋಟು, ಸೂಟು ಹಾಕಿಕೊಂಡು ಎಂಜಿ ರಸ್ತೆಗಿಳಿದ ರಿಟೈರಮೆಂಟ್ ಹೊಸ್ತಿಲಲ್ಲಿರುವವರು , ಯೌವ್ವನದ ಬಿಡುಬೀಸನ್ನೆಲ್ಲ ಕಳಕೊಂಡರೂ ಚಮಕ್ ಬಿಟ್ಟುಕೊಡದ 40 ಪ್ಲಸ್ ಆಂಟಿಯರು ಮಗಳಿಗೂ ಕಾಂಪಿಟಿಷನ್ ಕೊಡುವವರಂತೆ ಸಿಂಗರಿಸಿಕೊಂಡು ಮೆಟ್ರೋ ರೈಲು ಟಿಕೆಟ್ ಗಾಗಿ ಕಾದಿದ್ದೇ ಕಾದಿದ್ದು. ಇನ್