ವಿಷಯಕ್ಕೆ ಹೋಗಿ

ಸ್ಕಾಯಲಾರ್ಕ್ ಹಕ್ಕಿಯಂತಾಗಿದ್ದಳು ನನ್ನಮ್ಮಾ...

ಮೊದಲ ಬಾರಿಗೆ ಸ್ಕಾಯಲಾರ್ಕ್ ಹಕ್ಕಿಯಾಗಿದ್ದಳು ನನ್ನಮ್ಮಾ... ವಿಮಾನದ ಗುಂಯ್ ಗುಡುವ ಸದ್ದಿಗೆ, ಒಳಗಿನ ಚಳಿಗೆ, ತಣ್ಣನೆಯ ಟೀಗೆ, ಸಪ್ಪೆ ಊಟಕ್ಕೆ ಸುಸ್ತಾಗಿ ಹೋಗಿದ್ದಳು... ಮೊದಲ ಸಲ ಆಕಾಶಕ್ಕೆ ನೆಗೆದಾಗ ಅಮ್ಮಾ ಎಂದು ದಂಗಾದವಳು... ಮಗಳ ಕಾಣುವ ತವಕದಲ್ಲಿ ವಿಮಾನದ ಸಂಭ್ರಮವನ್ನೂ ಲೆಕ್ಕಿಸದವಳು.. ಮಗಳ ಮಡಿಲಲ್ಲಿ ಹೊಸ ಜೀವವೊಂದು ನಲಿದಾಡುವುದನ್ನು ಕಾಣುವ ಕನಸಲ್ಲಿ ಮುಳುಗಿಹೋದಾಕೆ... ಅಮ್ಮನನ್ನು ನೋಡಿದಾಗೆಲ್ಲ ಒಂದು ಮುಗ್ಧ ಮಗುವನ್ನು ನೋಡಿದ ಹಾಗೆನಿಸುತ್ತಿತ್ತು... ನಾನದರ ತಾಯಿ ಅನಿಸುತ್ತಿತ್ತು...

ಇಬ್ಬರೂ ಮಕ್ಕಳಂತಾಗಿದ್ದರು. ಯಾವುದನ್ನೂ ತಿನ್ನದ ಮತ್ತು ಕುಡಿಯದ ಇಬ್ಬರಿಗೂ ಬರಿಯ ಬಿಸಿನೀರು ಮಾತ್ರ ಆಹಾರವಾಗಿತ್ತು. ಅದನ್ನು ನೀಡುತ್ತಿದ್ದ ಪರಂಗಿ ಹೆಣ್ಣುಗಳು ಮಾತ್ರ ಇವರಿಗೆ ಅಚ್ಚುಮೆಚ್ಚಾಗಿದ್ದರು. ಇವರನ್ನು ಕಂಡರೆ ಅವರಿಗೂ ಬಲು ಅಕ್ಕರೆ... ಅವರ ನಗೆ, ನಯ, ವಿನಯ, ವೈಯ್ಯಾರ ಇಬ್ಬರಿಗೂ ಇಷ್ಟವಾಗಿತ್ತು. ಇವರ ವೇಷಭೂಷಣ, ಮುಗ್ಧತೆ ಅವರಿಗೂ ಅಚ್ಚುಮೆಚ್ಚಾಗಿತ್ತು. ಕಂಡಾಗೆಲ್ಲ ತಲೆಬಾಗಿ ನಮಸ್ತೆ ಎನ್ನುತ್ತಿದ್ದುದು ಅಪ್ಯಾಯಮಾನವೆನಿಸುತ್ತಿತ್ತು..
ಕಿಟಕಿಯಿಂದ ತೂರಿ ಬಂದ ಬೆಳಕು ಇಬ್ಬರನ್ನು ಸುಸ್ತು ಮಾಡಿಹಾಕಿತ್ತು. ಪ್ಯಾರಿಸ್ ಬಂದಾಗಲೇ ಕಣ್ಣು ತೆರೆದದ್ದು...
ಏರ್ ಫ್ರಾನ್ಸ್ ವಿಮಾನದ ಒಳನೋಟ...
ವಿಮಾನದ ಕ್ಯಾಮೆರಾ ಭೂಮಿಯ ಚಿತ್ರಣ ಕಟ್ಟಿಕೊಡುತ್ತಿತ್ತು...
ವಿಮಾನ ಹಾರುವ ಸ್ಥಿತಿ ಗತಿ ಮುಂದಿನ ಸೀಟಿಗಂಟಿಸಿದ ಪರದೆಯ ಮೇಲೆ ಸ್ಪಷ್ಟವಾಗಿ ವಿವರಿಸುತ್ತಲೇ ಇತ್ತೊಂದು ಗ್ರಾಫಿಕ್ ರೂಪದ ಚಿತ್ರಣ 
ವಿಮಾನದ ಒಳಗಡೆ ನಾನು ನೋಡಿದ ಅವತಾರ್ ಸಿನಿಮಾದ ಒಂದು ದೃಶ್ಯ...

ಪ್ಯಾರಿಸ್ ಅಂಗಳದಲ್ಲಿ ಬಾಲಿವುಡ್ ತಾರೆಯರಂತೆ ಇಬ್ಬರೂ ಕಂಗೊಳಿಸುತ್ತಿದ್ದರು! ಪ್ಯಾರಿಸ್ ನಲ್ಲೂ ನಾಲ್ಕು ಗಂಟೆಗಳ ಕಾಲ ವಿಳಂಬವಾಯ್ತು. ಅಷ್ಟೂ ಸಮಯ ನಿಲ್ದಾಣದಲ್ಲಿ ಕುಳಿತೇ ಇದ್ದೆವು. ಬರುವ ಹೋಗುವವರೆಲ್ಲ ಇಬ್ಬರನ್ನು ಬಲು ಕುತೂಹಲ ಮತ್ತು ಪ್ರೀತಿಯಿಂದ ನೋಡುತ್ತಿದ್ದರು. ಸ್ಮೈಲ್ ಕೊಡುತ್ತಿದ್ದರು. ವಿದೇಶದ ಮಕ್ಕಳಿಗಂತೂ ಇವರಿಬ್ಬರೂ ಬಲು ಇಷ್ಟವಾಗಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ...

'ಅನಭಿಜ್ಞ ಶಾಕುಂತಲ': ನೆನಪು ಮರೆವಿನಾಟ

 ಜೀವನವೇ ಒಂದು ನಾಟಕವೆಂದಾದರೆ. ಸಂಬಂಧ ಅನ್ನೋದು ಕಟ್ಟಿಕೊಂಡ ಆಟ. ಅಂದರೆ ನಾಟಕದಂತೆ ಬದುಕು ಕೂಡ ಆಟ ಕಟ್ಟುವ ಕ್ರಿಯೆ. ಇಲ್ಲಿ ಗುರಿ ಎಂದರೆ ಸುಖದ ಅಥವಾ ಸಾರ್ಥಕತೆಯ ದಡ ಸೇರುವುದು. ಈ ಆಟದ ಒಂದು ಹಂತದಲ್ಲಿ ಕಷ್ಟದ ಅಡವಿ ಸೇರುವುದೂ ಇದೆ! 'ಆಡಾಡ್ತ ಅಡವಿ ಸೇರುವುದು' ಅಂತಾರಲ್ಲ ಹಾಗೆ. ಅಡವಿ ಅಂದರೆ ಇಲ್ಲಿ ಸಂಕೀರ್ಣತೆ, ಸಂಕಷ್ಟ ಅವಘಡ, ಸಂದಿಗ್ಧತೆ ಎಂದು ಭಾವಿಸಿಕೊಳ್ಳಬಹುದು. ಬದುಕಿನ ದಾರಿಯಲ್ಲಿ ಒಮ್ಮೆ ಈ 'ಅಡವಿ' ಎದುರಾಗೇ ಆಗುತ್ತದೆ ಎನ್ನುವುದು ವಿಧಿಲಿಖಿತವೇ? ಗೊತ್ತಿಲ್ಲ. ಪ್ರೀತಿ-ಪ್ರೇಮ-ಕಾಮ ಎನ್ನುವ ಬದುಕಿನ ಒಟ್ಟಾರೆ ಆಟ- ಕೂಟದಲ್ಲಿ ಪಡಕೊಳ್ಳುವುದೆಲ್ಲ ಜೀವಕಾರುಣ್ಯವಷ್ಟೇ ಅಲ್ಲ. ಸಂಕಷ್ಟ ಮತ್ತು ಸಂದಿಗ್ಧತೆಯೂ ಜತೆಯಲ್ಲಿರುತ್ತದೆ ಎನ್ನುವುದು ಸಹಜ ಮನೋಧರ್ಮ.  ಬದುಕಿನ ಆಟಕ್ಕೆ ತೆರಕೊಂಡವರಲ್ಲಿ ಹಲವರು ಅನುಭವಿಸಿದ ಮಧುರ ಘಳಿಗೆಗಳನ್ನು ಕಡೆತನಕ ನೆನಪಿಟ್ಟುಕೊಳ್ಳುತ್ತಾರೆ. ಕೆಲವರು ಮರೆತೇ ಬಿಡುತ್ತಾರೆ!?..  ಕಾಳಿದಾಸನ ಮಹಾಕಾವ್ಯ ಶಾಕುಂತಲೆಯಲ್ಲಿ ಈ ಬದುಕು, ಮನುಷ್ಯ ಪ್ರೀತಿ ಪಯಣದ ನೆನಪು ಮತ್ತು ಮರೆವಿನಾಟ ಮನಮಿಡಿಯುವಂತೆ ಚಿತ್ರಣಗೊಂಡಿದೆ. ಈ ಕಾವ್ಯದಲ್ಲಿ ಎಲ್ಲವನ್ನು ವಿಧಿಯೇ ನಿರ್ಧರಿಸಿದಂತೆನಿಸುತ್ತದೆ. ಫೇಟಲಿಸಂ ವಾದಕ್ಕೆ ಪೂರಕವಾದ ಚಿಂತನೆ ಇದೆನ್ನಬಹುದು. ಆಧುನಿಕ ಯುಗದ ಶೇಕ್ಸಪಿಯರ್ ನ ಹಲವು ನಾಟಕಗಳಲ್ಲಿಯೂ ಈ ಫೇಟಲಿಸಂ ಪ್ರಧಾನ ಪಾತ್ರದಂತೆ ವರ್ತಿಸುವುದನ್ನು ಗಮನಿಸಬಹುದು. * ...

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರ...