ನನ್ನ ತಂಗಿಯ ಮನೆಯಿಂದ ಹೊರಕ್ಕೆ ಕಾಲಿಟ್ಟರೆ ಸಾಕು ಒಂದು ಹೊಸ ಲೋಕವೇ ತೆರೆದುಕೊಳ್ಳುತ್ತದೆ. ನಗರದ ಹೃದಯ ಭಾಗವಾಗಿರುವ ಈ ಪ್ರದೇಶದಲ್ಲೇ ಅರಮನೆ ಇದೆ. ಕೂಗಳತೆ ದೂರದಲ್ಲೇ ನೊಬೆಲ್ ಇನಸ್ಟಿಟ್ಯೂಟ್, ಇಬ್ಸೆನ್ ಬಾಳಿ ಬದುಕಿದ ಮನೆ, ನ್ಯಾಷನಲ್ ಥಿಯೇಟರ್ ಇದೆ. ತಂಗಿ ನೆಲೆಸಿರುವ ಅಪಾರ್ಟಮೆಂಟಿನ ಹಿಂದೆ ಬೃಹತ್ ನ್ಯಾಷನಲ್ ಲೈಬ್ರರಿ ಇದೆ. ನಡೆದುಕೊಂಡೇ ಸೆಂಟ್ರಲ್ ಸ್ಟೇಷನ್ ಹೋಗಬಹುದು. ಹಾರ್ಬರ್ ಹತ್ತಿರದಲ್ಲೇ ಇದೆ. ನಡೆದಷ್ಟು ದೂರ ಕಾಣುವುದೆಲ್ಲ ರಮ್ಯ. ಕಣ್ಣಿಗೆ ಬೀಳುವವರೆಲ್ಲ ಬಿಳಿಯ ಚೆಲುವೆಯರು, ಬಿಳಿ ಮೂತಿಗಳು... ಇದಕ್ಕೆ ಸೊಳ್ಳಿ ಎಂದು ಹೆಸರು. ಎಸ್ ಒ ಎಲ್ ಎಲ್ ಐ... ಇಲ್ಲಿನವರು ಸೋಳ್ಳಿ ಎಂದು ಉಲಿದಾಗ ಬಲು ಮಜವೆನಿಸುತ್ತದೆ.
ಜೀವನವೇ ಒಂದು ನಾಟಕವೆಂದಾದರೆ. ಸಂಬಂಧ ಅನ್ನೋದು ಕಟ್ಟಿಕೊಂಡ ಆಟ. ಅಂದರೆ ನಾಟಕದಂತೆ ಬದುಕು ಕೂಡ ಆಟ ಕಟ್ಟುವ ಕ್ರಿಯೆ. ಇಲ್ಲಿ ಗುರಿ ಎಂದರೆ ಸುಖದ ಅಥವಾ ಸಾರ್ಥಕತೆಯ ದಡ ಸೇರುವುದು. ಈ ಆಟದ ಒಂದು ಹಂತದಲ್ಲಿ ಕಷ್ಟದ ಅಡವಿ ಸೇರುವುದೂ ಇದೆ! 'ಆಡಾಡ್ತ ಅಡವಿ ಸೇರುವುದು' ಅಂತಾರಲ್ಲ ಹಾಗೆ. ಅಡವಿ ಅಂದರೆ ಇಲ್ಲಿ ಸಂಕೀರ್ಣತೆ, ಸಂಕಷ್ಟ ಅವಘಡ, ಸಂದಿಗ್ಧತೆ ಎಂದು ಭಾವಿಸಿಕೊಳ್ಳಬಹುದು. ಬದುಕಿನ ದಾರಿಯಲ್ಲಿ ಒಮ್ಮೆ ಈ 'ಅಡವಿ' ಎದುರಾಗೇ ಆಗುತ್ತದೆ ಎನ್ನುವುದು ವಿಧಿಲಿಖಿತವೇ? ಗೊತ್ತಿಲ್ಲ. ಪ್ರೀತಿ-ಪ್ರೇಮ-ಕಾಮ ಎನ್ನುವ ಬದುಕಿನ ಒಟ್ಟಾರೆ ಆಟ- ಕೂಟದಲ್ಲಿ ಪಡಕೊಳ್ಳುವುದೆಲ್ಲ ಜೀವಕಾರುಣ್ಯವಷ್ಟೇ ಅಲ್ಲ. ಸಂಕಷ್ಟ ಮತ್ತು ಸಂದಿಗ್ಧತೆಯೂ ಜತೆಯಲ್ಲಿರುತ್ತದೆ ಎನ್ನುವುದು ಸಹಜ ಮನೋಧರ್ಮ. ಬದುಕಿನ ಆಟಕ್ಕೆ ತೆರಕೊಂಡವರಲ್ಲಿ ಹಲವರು ಅನುಭವಿಸಿದ ಮಧುರ ಘಳಿಗೆಗಳನ್ನು ಕಡೆತನಕ ನೆನಪಿಟ್ಟುಕೊಳ್ಳುತ್ತಾರೆ. ಕೆಲವರು ಮರೆತೇ ಬಿಡುತ್ತಾರೆ!?.. ಕಾಳಿದಾಸನ ಮಹಾಕಾವ್ಯ ಶಾಕುಂತಲೆಯಲ್ಲಿ ಈ ಬದುಕು, ಮನುಷ್ಯ ಪ್ರೀತಿ ಪಯಣದ ನೆನಪು ಮತ್ತು ಮರೆವಿನಾಟ ಮನಮಿಡಿಯುವಂತೆ ಚಿತ್ರಣಗೊಂಡಿದೆ. ಈ ಕಾವ್ಯದಲ್ಲಿ ಎಲ್ಲವನ್ನು ವಿಧಿಯೇ ನಿರ್ಧರಿಸಿದಂತೆನಿಸುತ್ತದೆ. ಫೇಟಲಿಸಂ ವಾದಕ್ಕೆ ಪೂರಕವಾದ ಚಿಂತನೆ ಇದೆನ್ನಬಹುದು. ಆಧುನಿಕ ಯುಗದ ಶೇಕ್ಸಪಿಯರ್ ನ ಹಲವು ನಾಟಕಗಳಲ್ಲಿಯೂ ಈ ಫೇಟಲಿಸಂ ಪ್ರಧಾನ ಪಾತ್ರದಂತೆ ವರ್ತಿಸುವುದನ್ನು ಗಮನಿಸಬಹುದು. * ...
ಕಾಮೆಂಟ್ಗಳು