ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಫೆಬ್ರವರಿ 6, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕನ್ನಡ ಸಾಹಿತ್ಯ ಸಮ್ಮೇಳನ ಬಿಜಾಪುರ: ಜವಾರಿ ಜನರ ದಿಲ್ ದಾರಿ ನಾಡಿಗೆ ಖುಶ್ ಆಮದೀದ್...

ಮನುಷ್ಯ ರೂಪಿಸುವ ಸಾಮ್ರಾಜ್ಯ, ಅಧಿಕಾರ, ಕ್ರೌರ್ಯ, ಹಿಂಸೆ... ಕಡೆಗೆ ಕಾಣುವ ಅಂತ್ಯ ಬರಿಯ ಮಣ್ಣು.  ಅದೇ ಪ್ರೀತಿ, ಮಾನವೀಯ ಅಂತಃಕರಣದ  ಗೋಲಗುಂಬಜ್ ಕಲೆಯಾಗಿ, ಸಂವೇದನೆಯಾಗರಳುವುದು ತೆರೆದಂತೆ ಒಳಗಣ್ಣು... ಖುಷ್ ಆಮದೀದ್/ಸ್ವಾಗತ. ಜವಾರಿ ಸೀಮೆಯ ಜನ ಬದುಕು ಅಂದ್ರ ಸ್ವಚ್ಛ ಆಕಾಶ, ಮಳೆ ತರುವ ಮೋಡಗಳ ಅರ್ಬಾಟು, ಸಿಡಿಲು ಮಿಂಚಿನ ಲಕ ಲಕ ಹೊಳಪು, ಸೂರ್ಯನ ಬೆಳಕಿನಂಥ ಹರವು, ನೆಲದೊಡಲಿಂದ ಕುಡಿಯೊಡೆದು ಮುಗಿಲಕಡೆ ಮಾರಿ ಮಾಡಿ ನಿಲ್ಲುವ ಸೂರ್ಯನಿಗೇ ನಿಷ್ಠ ಸೂರೆಪಾನ! ಮಾತು ಮನಂಗಳಲ್ಲಿ ಚಂದಪ್ಪನ ಬೆಳ್ಳಂಬೆಳದಿಂಗಳ ತಂಪು, ಮಲ್ಲಿಗೆಯ ಕಂಪು… ಮನಸು ಅನ್ನೋದು ಮಳೆ ಬರಲಿ, ಬಿರುಗಾಳಿ ಬರಲಿ ಅರಳಬೇಕೆಂದರೆ ಅರಳೇ ಬಿಡುವ ಕಾಡುಮಲ್ಲಿಗೆ! ಮೃದುವಾದರೂ ಅದರ ಅರಳುವ ಸೊಕ್ಕು ಅಬ್ಬಾ!… ಅಂಥ ಸೊಕ್ಕಿನ ಮನೋಧರ್ಮ ಮತ್ತು ಮೃದು ಮನದ ಜನಸಂಸ್ಕೃತಿ ವಿಜಾಪುರಿಗಳದು. * * * ಖ್ವಾಜಾ ಬಂದಾನವಾಜ್ ರಂಥ ಸೂಫಿ ಗಳು,  ಬಸವ ನಂಥ, ಹರಳಯ್ಯ , ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ ನಂಥ ಶರಣರು , ಪುರಂದರ, ಸರ್ವಜ್ಞನಂಥ ದಾಸರು, ಇಬ್ರಾಹಿಂ, ಆದಿಲ್ ಶಾಹಿಯಂಥ ದೊರೆಗಳು ನಡದಾಡಿದ ನೆಲದ ಮಣ್ಣ ತುಂಬ ಜೀವಪ್ರೀತಿ ಉಕ್ಕಿಸುವ ಮನುಷ್ಯ ಅಂತಃಕರಣ. ಕತ್ತಿ, ಗುರಾಣಿ ಹಿಡಕೊಂಡು ಈ ನೆಲದ ಮ್ಯಾಲ ಸಾಮ್ರಾಜ್ಯ ಕಟ್ಟ ಬಂದ ಬಹಮನಿ ಸುಲ್ತಾನರು, ಆದಿಲ್ ಶಾಹಿಗಳು ಇಲ್ಲಿನ ನೆಲದ ಮಣ್ಣಿಗೆ ಕರಗಿಹೋಗಿ ನಿಷ್ಠರಾಗಿಬಿಟ್ರು. ಜಗತ್ತೇ ಬೆರಗುಗೊಳ