ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸೆಪ್ಟೆಂಬರ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಜಾತಿ ಆಧಾರಿತ ತಾರತಮ್ಯ: ಭಾರತಕ್ಕೆ ಸಮ್ಮತ ಸಿದ್ಧಾಂತ?

ಜಾತಿ ಆಧಾರಿತ ತಾರತಮ್ಯವನ್ನು ಮಾನವ ಹಕ್ಕು ಉಲ್ಲಂಘನೆ ಎಂದು ಪರಿಗಣಿಸುವ ಮಹತ್ವದ ಚಿಂತನೆ ಈಗ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವುದು ಮಹತ್ವದ ಬೆಳವಣಿಗೆ. ಮಾನವೀಯ ಮೌಲ್ಯಗಳ ದೃಷ್ಟಿಯಿಂದ ಇದೊಂದು ಅತ್ಯಂತ ಶ್ರೇಷ್ಠ ಹೆಜ್ಜೆ. ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ ಸಮ್ಮೇಳನ ಇಂಥದೊಂದು ದಿಟ್ಟ ಕ್ರಮಕ್ಕೆ ಯೋಚಿಸುತ್ತಿರುವುದು ಇಡೀ ವಿಶ್ವವನ್ನು ಆರೋಗ್ಯಕರ ಬದುಕಿನತ್ತ ಕೊಂಡೊಯ್ಯುವಂಥದು. ಹಿಂದೂ ರಾಷ್ಟ್ರವೆಂದು ಗುರುತಿಸಲಾಗುತ್ತಿರುವ ನೇಪಾಳ ಇದನ್ನು ಸ್ವಾಗತಿಸಿದೆ. ಸೆಪ್ಟೆಂಬರ್ 16ರಂದು ನಡೆದ ಸಮ್ಮೇಳನದ ಕಲಾಪದಲ್ಲಿ ನೇಪಾಳದ ಸಚಿವ ಜೀತ್ ಬಹಾದ್ದೂರ್ ದಾರ್ಜಿ ಗೌತಂ ಅವರು 'ಜಾತಿ ತಾರತಮ್ಯದ ವಿರುದ್ಧ ಹೋರಾಡಲು ವಿಶ್ವಸಂಸ್ಥೆ ಹಾಗೂ ಅಂಗ ಸಂಸ್ಥೆಗಳು ಮುಂದಿಟ್ಟಿರುವ ಇಂಥದೊಂದು ಮಹತ್ವದ ಕ್ರಮಕ್ಕೆ ನೇಪಾಳ ಸ್ವಾಗತಿಸುತ್ತದೆ' ಎಂದು ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ ತಮಿಳು ಮೂಲದ ನವನೀತಾ ಪಿಳ್ಳೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಾಯಭಾರಿಯಾಗಿ ನೇಪಾಳದ ಕ್ರಮವನ್ನು ಸ್ವಾಗತಿಸಿದ್ದಾರೆ. ಜಾತೀಯತೆಯಿಂದ ಜರ್ಜರಿತಗೊಂಡ ದೇಶವೊಂದರ ದಿಟ್ಟ ಹೆಜ್ಜೆ ಇದಾಗಿದೆ, ಉಳಿದ ದೇಶಗಳೂ ಇದನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ. ಇದಕ್ಕೆ ಮತ್ತಷ್ಟು ಬಲ ಬಂದಿದ್ದು ಸ್ವಿಡನ್ ವ್ಯಕ್ತಪಡಿಸಿದ ಬೆಂಬಲದಿಂದ. ಐರೋಪ್ಯ ರಾಷ್ಟ್ರಗಳು ಇದನ್ನು ಆದ್ಯತೆ ನೆಲೆಯಲ್ಲಿ ಪರಿಗಣಿಸಲಿವೆ ಎನ್ನುವ ಮೂಲಕ ಅದು ಯುರೋಪ್ ಬದಲಾವಣೆ

ನಾವೆಷ್ಟು ನಾಮರ್ದಗಳಾಗಿದ್ದೇವೆ?

ನಮ್ಮೆಲ್ಲ ಕನಸು, ಆಶಯಗಳ ಪ್ರತೀಕವಾಗಬೇಕಿದ್ದ ನಾವೇ ಆಯ್ಕೆ ಮಾಡಿದ ಸರ್ಕಾರಗಳು 'ಸೆಟ್-ಅಪ್' ಕಲ್ಚರಿಗೆ ಸರಿದು ನಿಂತಿವೆ. ಒಂದು ನಿರ್ಧಿಷ್ಟ ಕೋಮು, ಕಲ್ಟ್, ಜಾತಿ, ಧರ್ಮಕ್ಕೆ ಸೇರಿದವರು ಒಂದು ಗ್ಯಾಂಗ್ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಹೆಸರಲ್ಲಿ ಬಲಿಷ್ಠ ಕೋಮುಗಳ ಸ್ವಯಂಘೋಷಿತ ರಾಜ್ಯ-ರಾಷ್ಟ್ರೀಯ ಲೀಡರ್ ಗಳು ಪವರ್ ಡೀಲರ್ ಗಳಾಗಿದ್ದಾರೆ. ಅವರನ್ನೆಲ್ಲಾ ನಾವು ಜನನಾಯಕರೆಂದು ನಂಬುತ್ತೇವೆ. ಬಾಟಾ ಬಾಟಿಯ ವ್ಯಾಪಾರಿ ಬುದ್ಧಿ ಇಂದಿನ ಪಾಲಿಟಿಕಲ್ ಕ್ವಾಲಿಫಿಕೇಷನ್ ಆಗಿಹೋಗಿದೆ. ಜಾತಿವಾರು ಲೆಕ್ಕಾಚಾರ, ಸಂಖ್ಯಾಬಲದ ಜೋಡಣೆಗೆ ಫ್ರಂಟ್ ಲೈನ್ ಲೀಡರ್ ಗಳು ಬ್ರೋಕರ್ ಕೆಲಸದಲ್ಲಿ ತೊಡಗಿದ್ದಾರೆ. ಧರ್ಮ ಎನ್ನುವುದು ಇವರು ತೊಡುವ ಹವಾಯಿ ಚಪ್ಪಲಿಗಿಂತ ಕಡೆಯಾಗಿ ಹೋಗಿದೆ. ಯೂಸ್ ಅಂಡ್ ಥ್ರೋ ವಸ್ತುವಾಗಿದೆ. ಧಾರ್ಮಿಕ ನಾಯಕರೆಲ್ಲ ತಮ್ಮ ಅನುಯಾಯಿಗಳನ್ನು ರಾಜಕಾರಣಿಗಳ ಗುಲಾಮರನ್ನಾಗಿ ಪರಿವರ್ತಿಸತೊಡಗಿದ್ದಾರೆ. ಹೀಗೆ ರಾಜಕಾರಣಿಗಳು ಮತ್ತು ಧಾರ್ಮಿಕ ನಾಯಕರ ನಡುವೆ ಒಡಂಬಡಿಕೆಗಳು ಯಾವ ಎಗ್ಗಿಲ್ಲದೆ ನಡೆಯುತ್ತಿವೆ. ಯಾವ ಆಶಾಭಾವದಿಂದ ಇದನ್ನೆಲ್ಲ ಸಹಿಸಿಕೊಂಡಿರಬೇಕೋ... ಇಂಥದೊಂದು ಸಾತ್ವಿಕ ಆಕ್ರೋಶ ಬಹುತೇಕ ಪ್ರಜ್ಞಾವಂತರಲ್ಲಿಯೂ ಮೂಡುತ್ತಿದೆ. ಮತಾಂತರ ವಿರೋಧಿಸುವ ಪಕ್ಷದ ಸರ್ಕಾರ ಪಕ್ಷಾಂತರವನ್ನು ಆಪರೇಷನ್ ಕಮಲ್ ಎನ್ನುವ ಸೋಗಿನಲ್ಲಿ ನಡೆಸುತ್ತಿದೆ. ಯಾವ ನೈತಿಕ ನೆಲೆಯಲ್ಲಿ ಇದನ್ನು ಸಮರ್ಥಿಸಿಕೊಳ್ಳುತ್ತೊ...