ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಆಗಸ್ಟ್ 31, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪಾವಿತ್ರ್ಯ ಮತ್ತು ನಿಷೇಧ

ಇಡೀ ಪ್ರಕೃತಿ ದೇವತೆ. ಗೋಮಾತೆಯಂತೆ, ನೆಲವೂ ದೇವತೆ. ಗೋಹತ್ಯೆ ನಿಷೇಧಿಸುವುದಾದರೆ, ಗಣಿಗಾರಿಕೆಯನ್ನೂ ನಿಷೇಧಿಸಲೇಬೇಕು. ಗೋವು ಪವಿತ್ರವಾದರೆ ಅದರ ಹಾಲೂ ಪವಿತ್ರ. ಗೋ'ಮಾತೆ' ಕೆಚ್ಚಿಲಿಗೆ ಕೈಹಾಕಿ ಹಿಸುಕಿ ಹಿಸುಕಿ ಹಾಲು ಕರೆಯುವುದು ಅದರ ಜತೆಗೆ ನಡೆಸುವ ಚೆಲ್ಲಾಟವೂ ಆಗುತ್ತದೆ. ಹಾಲಿನ ತಣ್ಣಗಿನ ಭಾವಕ್ಕೆ ಅಗ್ನಿ ಸ್ಪರ್ಶ ಮಾಡಿ ಕಾಯಿಸಿ, ಆರಿಸಿ, ಮಥಿಸಿ ಮೊಸರು, ಮಜ್ಜಿಗೆ, ಬೆಣ್ಣೆ ಮಾಡುವುದು  ನಂತರ ಬೆಣ್ಣೆಯ ಅತ್ಯಂತ ಮೃದು ಭಾವಕ್ಕೆ ಮತ್ತೆ ಅಗ್ನಿ ಕಾವು ಕೊಟ್ಟು ತುಪ್ಪವಾಗಿಸಿ, ಕಡೆಗೆ ಅದನ್ನು ಹೋಮದ ಅಗ್ನಿಕುಂಡಕ್ಕೆ ಎಸೆದೆಸೆದು ಧಗ ಧಗಿಸುವಂತೆ ಸುಡುವುದೂ ಹಿಂಸೆ ಅಷ್ಟೇ ಅಲ್ಲ ಚಿತ್ರಹಿಂಸೆಯಾಗುತ್ತದೆ. ಹೀಗಾಗಿ ಮೊಸರು, ಮಜ್ಜಿಗೆ, ಬೆಣ್ಣೆ, ತುಪ್ಪ ಮಾಡುವುದರ ಮೇಲೂ ನಿಷೇಧ ಹೇರಬೇಕು. ಗೋವು ಪವಿತ್ರ. ಅದರ ಉಚ್ಚೆಯೂ ಪವಿತ್ರವೇ. ಪವಿತ್ರವಾದ್ದನ್ನು ತಿಪ್ಪೆಗೆಸೆಯುವುದೇ? ಸೆಗಣಿಯೂ ಪವಿತ್ರವೇ. ಮನೆ ಮುಂದೆ ಚಂದಕ್ಕೆ ರಂಗೋಲಿಗೆಂದು ಸೆಗಣಿಯನ್ನು ನೀರಲ್ಲಿ ಮನಸೋ ಇಚ್ಛೆ ಕಿವುಚಿ ನೆಲಕ್ಕೆ ಸಾರಿಸುವುದು, ತಟ್ಟಿ ಬಿಸಿಲಿಗೆ ಒಣಗಿಸಿ ಕುಳ್ಳಾಗಿಸಿ ಒಲೆಗಿಟ್ಟು ಧಗ ಧಗಿಸುವಂತೆ ಮಾಡುವುದೂ ಹಿಂಸೆಯೇ. ಸೆಗಣಿ ಬಳಕೆ ಕೂಡ ನಿಷೇಧಿಸಬೇಕು. ಹಂದಿ, ಕೋಳಿ, ಕುರಿ, ಮೇಕೆಗಳಂತೆ ಜೀವವಿರುವ ಎಲ್ಲವೂ ಪವಿತ್ರ ಜೀವಗಳೇ. ಅವುಗಳ ವಧೆಯನ್ನೂ ನಿಷೇಧಿಸಬೇಕು! ಸಸ್ಯಕ್ಕೂ ಜೀವ ಇದೆ, ಅವೂ ಉಸಿರಾಡುತ್ತವೆ ಎಂದು ಭಾರತ ಮೂಲದ ವಿಜ್ಞಾನಿ ಸರ್