ವಿಷಯಕ್ಕೆ ಹೋಗಿ

ಮೊದಲ ವಿದೇಶ ಪಯಣ ಆರಂಭದ ಕ್ಷಣಗಳು...

ನಾರ್ವೆ ದೇಶಕ್ಕೆ ಹೊರಡುವ ನನ್ನ ತಯಾರಿ ಏನ್ ಕೇಳ್ತಿರಾ... ಚಂದ್ರಲೋಕಕ್ಕೆ ರಾಕೇಶ್ ಶರ್ಮಾ ಹೊರಡುವಾಗಲೂ ಇಷ್ಟು ಚಡಪಡಿಕೆ, ಹಿಂಜರಿಕೆ ಅನುಭವಿಸಿರಲಿಕ್ಕಿಲ್ಲ! ಜತೆಯಲ್ಲಿ ಅಮ್ಮ ಮತ್ತು ನನ್ನ ತಂಗಿಯ ಅತ್ತೆ ಕೂಡ ಹೊರಡಲಿದ್ದರು. ಚಳಿಗಾಲದಲ್ಲಿ ಯುರೋಪ ಹೊರಟುನಿಂತ ನಮ್ಮ ಸಾಹಸಕ್ಕೆ ಗೆಳೆಯರೂ ಬೆಚ್ಚಿದ್ದರು. ಪಾಸಪೋರ್ಟ್ ತೆಗೆಯಿಸಿಕೊಳ್ಳುವುದಕ್ಕೂ ಹಿಂಜರಿದಿದ್ದ ನಾನು ವಿಸಾ, ಟಿಕೆಟ್ ಅಂತೆಲ್ಲಾ ಹೆಣಗಾಡುವುದನ್ನು ನೆನೆದರೆ ನನಗೇ ನಗು ಬರುತ್ತಿತ್ತು. ವಿಮಾನ ಹತ್ತುವ ಮುಂಚಿನ ಕೆಲ ಕ್ಷಣಗಳಿವು...


ಎಷ್ಟೋ ವರ್ಷಗಳ ನಂತರ ನನ್ನ ಕೇಶರಾಶಿ ಅಂತೂ ಒಂದು ಸಲೂನಿನ ಕತ್ತರಿ ರುಚಿ ಕಂಡಿತು...
ನವದೆಹಲಿಯಲ್ಲಿನ ನಾರ್ವೆ ಕಾನ್ಸುಲೇಟ್ ಆಫೀಸಿನಲ್ಲಿ ವೀಸಾ ಸ್ಟ್ಯಾಂಪ್ ಮಾಡಿಸಿಕೊಂಡು ಪಾಸಪೋರ್ಟ್ ಪಡೆದುಕೊಂಡ ಕ್ಷಣ... ಅಯ್ಯೋ ಅದೊಂದು ಅತ್ಯಂತ ಕಠಿಣ ಸಮಯ!
ಯುರೋಪ ಚಳಿಗೆ ಇಲ್ಲಿಂದಲೇ ತಯಾರಿ! ಕನ್ನಡಿ ಮುಂದೆ ನನ್ನ ಮೇಲೆ ನಾನೇ ಜೋಕು ಮಾಡಿಕೊಂಡು ನಕ್ಕಿದ್ದೇ ನಕ್ಕಿದ್ದು.

ವೈಯಕ್ತಿಕವಾಗಿ ನಾನೆಂದೂ ವಿದೇಶದ ಸೊಲ್ಲೆತ್ತಿದವನಲ್ಲ. ಈ ಹಿಂದೆ ಒಂದು ಸಾರಿ ಪ್ಯಾರಿಸ್ ಮತ್ತು ದುಬೈ ಹೋಗುವ ಬಗ್ಗೆ ಆಫೀಸಿನ ಮೇಲಧಿಕಾರಿಯಾಗಿದ್ದ ಆರ್ ಪಿ ಜಗದೀಶ್ ಆಹ್ವಾನ ನೀಡಿದಾಗ ಪಾಸಪೋರ್ಟ್ ಇಲ್ಲ ಎನ್ನುವ ನೆವ ಹೇಳಿ ಬಚಾವಾಗಿದ್ದೆ. ಹಾಗೂ ಬೈಸಿಕೊಂಡಿದ್ದೆ. ಈಗ ನಾನು ವಿದೇಶಕ್ಕೆ ತೆರಳಲೇಬೇಕಾದ ಪ್ರಸಂಗ ಬಂದೇಬಿಟ್ಟಿತು. ಜತೆಯಲ್ಲಿ ಹೋಗೋಣ ಎಂದು ಗೆಳೆಯರು ಕೂಡ ಮನಸು ಮಾಡಿದ್ದರು. ಕಡೆ ಘಳಿಗೆಯಲ್ಲಿ ಕೈಕೊಟ್ಟರು. ಅಂತೂ ಅಮ್ಮ, ತಂಗಿಯ ಅತ್ತೆ ಇಬ್ಬರನ್ನು ಕಟ್ಟಿಕೊಂಡು ವಿದೇಶಕ್ಕೆ ಹೊರಡಲು ಸಿದ್ಧನಾದೆ. ಅದರ ಕೆಲ ಆರಂಭದ ಉತ್ಸಾಹ ಹೀಗಿತ್ತು....

 ನಾರ್ವೆ ಹೊರಡಲು ಆರ್ಥಿಕ ವ್ಯವಸ್ಥೆ ಮಾಡಿಕೊಳ್ಳಬೇಕಲ್ಲ! ನೆರವಾದ ಗೆಳೆಯ, ಸಹೋದ್ಯೋಗಿ ಬಿ ಎನ್ ಶ್ರೀಧರ್ ನನ್ನ ಪುಟ್ಟ ಮನೆಯವರೆಗೂ ಕುಟುಂಬ ಸಮೇತ ಬಂದು ಹಾರೈಸಿ ಹೋದ. ಥ್ಯಾಂಕ್ಸ್ ಶ್ರೀಧರ್... ಮತ್ತೊಬ್ಬ ಗೆಳೆಯ ವಸೀಂ ಖಾನ್ ನನಗೆ ಚೆನ್ನೈನಲ್ಲಿ ತುಂಬ ಸಹಾಯ ಮಾಡಿದ್ದ. ಅವನಿಗೈ ಥ್ಯಾಂಕ್ಸ್...
 ಜತೆಯಲ್ಲಿ ಹೋಗೋಣ ಎಂದು ಪುಸಲಾಯಿಸಿ ನನ್ನ ಕುದುರೆ ಹತ್ತಿಸಿದವರು... ಶ್ರೀಕಾಂತ, ತಿಪ್ಪಣ್ಣ ಸರ್, ಗಂಗಾಧರಯ್ಯ... ಮನೆವರೆಗೂ ಬಂದು ಹಾರೈಸಿದರು. 25ಕ್ಕೆ ಹೊರಡುವ ನಿರ್ಧಾರವಾಗಿತ್ತು. ಕಡೆ ಕ್ಷಣ ನನ್ನ ಪ್ರೋಗ್ರಾಂ ಚೇಂಜ್ ಆಗಿತ್ತು. ಆದರೂ ಇವರೆಲ್ಲ 24ರ ರಾತ್ರಿ ವಿಶ್ ಮಾಡಲೆಂದು ಮನೆಗೆ ಬಂದೇಬಿಟ್ಟರು. ನಾವೆಲ್ಲ ನಾಲ್ವರು ಶ್ರೀ ಕಾರಿನಲ್ಲಿ ಏರಪೋರ್ಟ್ ಹೋಗಿ ಬಂದೆವು. ಅದೊಂಥರ ರಿಹರ್ಸಲ್ ಅನ್ನಿ. ಏರಪೋರ್ಟಿನಿಂದ ವಾಪಸ್ ಬಂದಾಗ ಸರಿ ರಾತ್ರಿ ಆಗಿತ್ತು. ಅವರೆಲ್ಲ ರಾತ್ರಿ ತಿಪಟೂರಿಗೆ ಪ್ರಯಾಣಿಸಿದರು. ನಾನು ಅಂತೂ 27ರ ರಾತ್ರಿ ನಾರ್ವೆ ಹೊರಟು ನಿಂತೆ.
ನಮ್ಮ ಕುಟುಂಬದ ಎಲ್ಲ ಸದಸ್ಯರು ಏರಪೋರ್ಟ್ ವರೆಗೂ ಬೀಳ್ಕೊಡಲು ಬಂದ ಕ್ಷಣ...


ಏರಪೋರ್ಟ್ ನಲ್ಲಿ ನನ್ನ ಅಣ್ಣ ರಫೀಕ್ ತಮ್ಮಂದಿರಾದ ಶಮ್ಮು, ಝಕೀರ್, ತಂಗಿ ಷಹನಾಜ್, ಭಾವ ರಶೀದ್ ಅವರೆಲ್ಲರ ಮಕ್ಕಳು ಮತ್ತಿತರ ಸಂಬಂಧಿಕರು ಅತ್ಯಂತ ಹೃದಯಸ್ಪರ್ಶಿ ಬೀಳ್ಕೊಡುಗೆ ಕೊಟ್ಟರು. ನನ್ನ ಕಣ್ಣಲ್ಲೂ ನೀರಿತ್ತು. ಮಕ್ಕಳಂತೂ ನನ್ನ ಅಮ್ಮನ ತಬ್ಬಿಕೊಂಡು ಅಳುತ್ತಿದ್ದವು. ಓಹ್ ಅದೊಂದು ನಿಜಕ್ಕೂ ಹೃದಯಸ್ಪರ್ಶಿ ಕ್ಷಣ...
ಅನಾರೋಗ್ಯ ಕಾರಣದಿಂದ ನನ್ನ ತಂದೆ ಬಂದಿರಲಿಲ್ಲ .
ಚೆಕ್ ಇನ್ ಆಗುವ ಹೊತ್ತಿನಲ್ಲಿ ನನ್ನ ಅಮ್ಮ ಮತ್ತು ತಂಗಿಯ ಅತ್ತೆ...
ಅದೆಷ್ಟು ಹೊತ್ತು ನನ್ನ ತಮ್ಮಂದಿರು, ತಂಗಿ, ಭಾವ ಮತ್ತವರ ಕುಟುಂಬ, ಮಕ್ಕಳು ಅಳುತ್ತ ಕೈಬೀಸುತ್ತಲೇ ಇದ್ದರು...
ಇಮಿಗ್ರೇಷನ್, ಫಾರಂ ಫಿಲಪ್ ಮತ್ತಿತರ ಫಾರ್ಮಾಲಿಟಿ ನಂತರ ನಮ್ಮ ವಿಮಾನ ಪ್ರವೇಶದ ಗೇಟ್ ತಲುಪಿದಾಗ ಮಧ್ಯರಾತ್ರಿ ಕಳೆದಿತ್ತು. ವಿಮಾನ ನಾಲ್ಕು ಗಂಟೆ ತಡ ಎಂದು ಅನೌನ್ಸ್ ಮಾಡಿದರು. ಆ ಕೊರೆವ ಚಳಿಯಲ್ಲಿ ನಾಲ್ಕು ಗಂಟೆ ಹೋ... ನರಕಯಾತನೆ! ನೋಡಬೇಕಿತ್ತು ನನ್ನ ಅಮ್ಮ ಮತ್ತು ನನ್ನ ತಂಗಿ ಅತ್ತೆಯ ಸ್ಥಿತಿ... ಬೆಂಗಳೂರು ವಿಮಾನ ನಿಲ್ದಾಣದ ಚಳಿಗೇ ಹೀಗೆ ಇನ್ನು ಯುರೋಪಿನ ಚಳಿಗೆ ಏನು ಗತಿ ಎಂದು ಬೆಚ್ಚಿದ್ದೆ...
ಅಂತೂ ಬೆಳಗಿನಜಾವ 5 ಗಂಟೆಗೆ ಏರ್ ಫ್ರಾನ್ಸ್ ವಿಮಾನ ಹತ್ತುವ ಕ್ಷಣ ಬಂತು... ನಮ್ಮನ್ನು ಪ್ಯಾರಿಸ್ ತನಕವಷ್ಟೇ ಕೊಂಡೊಯ್ಯುವ ವಿಮಾನ ಹತ್ತಿದೆವು. ಪ್ಯಾರಿಸ್ ನಿಂದ ನಾರ್ವೆ ರಾಜಧಾನಿ ಒಸ್ಲೊಗೆ ಮತ್ತೊಂದು ವಿಮಾನ ಹತ್ತಬೇಕಿತ್ತು... ವಿಮಾನದೊಳಗಿನ ಕೆಲ ಚಿತ್ರಗಳು ಮುಂದಿನ ಪೋಸ್ಟಿನಲ್ಲಿ ....

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ