ವಿಷಯಕ್ಕೆ ಹೋಗಿ

ಸ್ಕಾಯಲಾರ್ಕ್ ಹಕ್ಕಿಯಂತಾಗಿದ್ದಳು ನನ್ನಮ್ಮಾ...

ಮೊದಲ ಬಾರಿಗೆ ಸ್ಕಾಯಲಾರ್ಕ್ ಹಕ್ಕಿಯಾಗಿದ್ದಳು ನನ್ನಮ್ಮಾ... ವಿಮಾನದ ಗುಂಯ್ ಗುಡುವ ಸದ್ದಿಗೆ, ಒಳಗಿನ ಚಳಿಗೆ, ತಣ್ಣನೆಯ ಟೀಗೆ, ಸಪ್ಪೆ ಊಟಕ್ಕೆ ಸುಸ್ತಾಗಿ ಹೋಗಿದ್ದಳು... ಮೊದಲ ಸಲ ಆಕಾಶಕ್ಕೆ ನೆಗೆದಾಗ ಅಮ್ಮಾ ಎಂದು ದಂಗಾದವಳು... ಮಗಳ ಕಾಣುವ ತವಕದಲ್ಲಿ ವಿಮಾನದ ಸಂಭ್ರಮವನ್ನೂ ಲೆಕ್ಕಿಸದವಳು.. ಮಗಳ ಮಡಿಲಲ್ಲಿ ಹೊಸ ಜೀವವೊಂದು ನಲಿದಾಡುವುದನ್ನು ಕಾಣುವ ಕನಸಲ್ಲಿ ಮುಳುಗಿಹೋದಾಕೆ... ಅಮ್ಮನನ್ನು ನೋಡಿದಾಗೆಲ್ಲ ಒಂದು ಮುಗ್ಧ ಮಗುವನ್ನು ನೋಡಿದ ಹಾಗೆನಿಸುತ್ತಿತ್ತು... ನಾನದರ ತಾಯಿ ಅನಿಸುತ್ತಿತ್ತು...

ಇಬ್ಬರೂ ಮಕ್ಕಳಂತಾಗಿದ್ದರು. ಯಾವುದನ್ನೂ ತಿನ್ನದ ಮತ್ತು ಕುಡಿಯದ ಇಬ್ಬರಿಗೂ ಬರಿಯ ಬಿಸಿನೀರು ಮಾತ್ರ ಆಹಾರವಾಗಿತ್ತು. ಅದನ್ನು ನೀಡುತ್ತಿದ್ದ ಪರಂಗಿ ಹೆಣ್ಣುಗಳು ಮಾತ್ರ ಇವರಿಗೆ ಅಚ್ಚುಮೆಚ್ಚಾಗಿದ್ದರು. ಇವರನ್ನು ಕಂಡರೆ ಅವರಿಗೂ ಬಲು ಅಕ್ಕರೆ... ಅವರ ನಗೆ, ನಯ, ವಿನಯ, ವೈಯ್ಯಾರ ಇಬ್ಬರಿಗೂ ಇಷ್ಟವಾಗಿತ್ತು. ಇವರ ವೇಷಭೂಷಣ, ಮುಗ್ಧತೆ ಅವರಿಗೂ ಅಚ್ಚುಮೆಚ್ಚಾಗಿತ್ತು. ಕಂಡಾಗೆಲ್ಲ ತಲೆಬಾಗಿ ನಮಸ್ತೆ ಎನ್ನುತ್ತಿದ್ದುದು ಅಪ್ಯಾಯಮಾನವೆನಿಸುತ್ತಿತ್ತು..
ಕಿಟಕಿಯಿಂದ ತೂರಿ ಬಂದ ಬೆಳಕು ಇಬ್ಬರನ್ನು ಸುಸ್ತು ಮಾಡಿಹಾಕಿತ್ತು. ಪ್ಯಾರಿಸ್ ಬಂದಾಗಲೇ ಕಣ್ಣು ತೆರೆದದ್ದು...
ಏರ್ ಫ್ರಾನ್ಸ್ ವಿಮಾನದ ಒಳನೋಟ...
ವಿಮಾನದ ಕ್ಯಾಮೆರಾ ಭೂಮಿಯ ಚಿತ್ರಣ ಕಟ್ಟಿಕೊಡುತ್ತಿತ್ತು...
ವಿಮಾನ ಹಾರುವ ಸ್ಥಿತಿ ಗತಿ ಮುಂದಿನ ಸೀಟಿಗಂಟಿಸಿದ ಪರದೆಯ ಮೇಲೆ ಸ್ಪಷ್ಟವಾಗಿ ವಿವರಿಸುತ್ತಲೇ ಇತ್ತೊಂದು ಗ್ರಾಫಿಕ್ ರೂಪದ ಚಿತ್ರಣ 
ವಿಮಾನದ ಒಳಗಡೆ ನಾನು ನೋಡಿದ ಅವತಾರ್ ಸಿನಿಮಾದ ಒಂದು ದೃಶ್ಯ...

ಪ್ಯಾರಿಸ್ ಅಂಗಳದಲ್ಲಿ ಬಾಲಿವುಡ್ ತಾರೆಯರಂತೆ ಇಬ್ಬರೂ ಕಂಗೊಳಿಸುತ್ತಿದ್ದರು! ಪ್ಯಾರಿಸ್ ನಲ್ಲೂ ನಾಲ್ಕು ಗಂಟೆಗಳ ಕಾಲ ವಿಳಂಬವಾಯ್ತು. ಅಷ್ಟೂ ಸಮಯ ನಿಲ್ದಾಣದಲ್ಲಿ ಕುಳಿತೇ ಇದ್ದೆವು. ಬರುವ ಹೋಗುವವರೆಲ್ಲ ಇಬ್ಬರನ್ನು ಬಲು ಕುತೂಹಲ ಮತ್ತು ಪ್ರೀತಿಯಿಂದ ನೋಡುತ್ತಿದ್ದರು. ಸ್ಮೈಲ್ ಕೊಡುತ್ತಿದ್ದರು. ವಿದೇಶದ ಮಕ್ಕಳಿಗಂತೂ ಇವರಿಬ್ಬರೂ ಬಲು ಇಷ್ಟವಾಗಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ