ವಿಷಯಕ್ಕೆ ಹೋಗಿ

ಪ್ಯಾರಿಸ್ ತಲುಪಿದಾಗ...

ನಮ್ಮ ನೆಲದಿಂದ ಮತ್ತೊಂದು ನೆಲಕ್ಕೆ ನಮ್ಮೆಲ್ಲರನ್ನು ಸುರಕ್ಷಿತವಾಗಿ ತಂದಿಳಿಸಿದ ಏರ್ ಫ್ರಾನ್ಸ್ ವಿಮಾನ ಪ್ಯಾರಿಸ್ ನಿಲ್ದಾಣದಲ್ಲಿ...
ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ನನ್ನಮ್ಮನನ್ನು ವ್ಹೀಲ್ ಚೇರಿನಲ್ಲಿ ಕರೆತಂದು, ಅವಳ ಜತೆ ನಮ್ಮನ್ನೂ ಕನೆಕ್ಟಿಂಗ್ ಫ್ಲೈಟಿಗೆ ಸಾಗಿಸುತ್ತಿರುವ ಆಫ್ರಿಕನ್ ಯುವಕ ಮತ್ತು ಕಾರು ಓಡಿಸುತ್ತಿರುವ ಬಿಳಿ ಚೆಲುವೆ. ನನ್ನ ಅವ್ವ ಮತ್ತು ತಂಗಿಯ ಅತ್ತೆ, ಇಲ್ಲಿನ ಹೆಣ್ಣುಮಕ್ಕಳು ಭರ್ರನೇ ಕಾರು ಓಡಿಸುವದ ಕಂಡು ದಂಗಾಗಿದ್ದರು. ಆಕೆ ಭರ್ತಿ ಸ್ಪೀಡಿನಲ್ಲಿ ನಮ್ಮನ್ನು ಮುಂದಿನ ವಿಮಾನವಿರುವ ಟರ್ಮಿನಲ್ ಗೆ ಕರೆತಂದಳು. ಅಲ್ಲಿಗೆ ತಲುಪುತ್ತಿದ್ದಂತೆ ಆಕೆ ಹ್ಯಾಪಿ ಜರ್ನಿ ಎಂದಳು. ನಾನೊಂದು ಹೆಮ್ಮೆಯ ಸೆಲ್ಯುಟ್ ಹೇಳಿದೆ. ಆಕೆ ಸುಂದರ ಸ್ಮೈಲ್ ಕೊಟ್ಟಳು...
ಪ್ಯಾರಿಸ್ ವಿಮಾನ ನಿಲ್ದಾಣದ ಸೊಬಗನ್ನು ಸವಿಯುತ್ತಿರುವ ನನ್ನವ್ವ ಮತ್ತು ತಂಗಿಯ ಅತ್ತೆ...
ನಮ್ಮ ಮೆಜೆಸ್ಟಿಕ್ ನಲ್ಲಿ ಸಿಬಿಟಿ ಬಸ್ ಗಳ ಹಾಗೆ ಸಾಲಂಕೃತವಾಗಿ ನಿಂತ ಡೊಮೆಸ್ಟಿಕ್ ಫ್ಲೈಟ್ ಗಳು.
ಪ್ಯಾರಿಸ್ ವಿಮಾನ ನಿಲ್ದಾಣದ ಡೊಮೆಸ್ಟಿಕ್ ಟರ್ಮಿನಲ್ ಗಳಲ್ಲಿ ಒಂದು ಟರ್ಮಿನಲ್ ಇದು. ಇಲ್ಲಿಂದಲೇ ನಾವು ಒಸ್ಲೊ ಗೆ ಪ್ರಯಾಣ ಬೆಳೆಸಿದ್ದು. ಇಲ್ಲೂ ನಾವು ಸರಿ ನಾಲ್ಕು ಗಂಟೆ ಕಾಯಬೇಕಾಗಿ ಬಂತು. ಇಡೀ ಟರ್ಮಿನಲ್ ಸುತ್ತು ಹಾಕಿ ಬಂದೆ. ಕೆಲವೆಡೆ ಫೊಟೊಗ್ರಾಫ್ ತೆಗೆದುಕೊಳ್ಳಲು ಅನುಮತಿ ಇರಲಿಲ್ಲ. ಇಲ್ಲಿನ ಶಾಪ್ ಗಳಲ್ಲೂ ಒಂದು ಸುತ್ತುಹಾಕಿ ಬಂದೆ. ಎಲ್ಲವೂ ತುಂಬಾ ದುಬಾರಿ. ಒಂದು ಬಾಟಲ್ ನೀರು ಖರೀದಿಸಿದ್ದೇ ತಡ, ದುಬಾರಿ ಬೆಲೆ ಬಿಸಿ ತಟ್ಟಿತು. ಒಂದು ಬಾಟಲು ನೀರಿಗೆ 3.5 ಯೂರೋ! ಅಂದರೆ ಹೆಚ್ಚು ಕಮ್ಮಿ 250 ರೂಪಾಯಿ! ಹಾಯ್ ಹಾಯ್... ಬಾಟಲ್ ಪ್ರಿಸರ್ವ್ ಮಾಡಿಡೋಣ ಅನಿಸಿತು. ವಿಮಾನದಲ್ಲಿ ಬಾಟಲ್ ಗೆ ಅವಕಾಶವೇ ಇಲ್ಲ.!
ನೀರಿಗಿಂತ ವೈನ್, ವಿಸ್ಕಿ ಬೆಲೆಯೇ ಎಷ್ಟೋ ವಾಸಿ. ಏರ್ ಪೋರ್ಟಿನಲ್ಲಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಖರೀದಿಸಲೇಬಾರದು ಅಂದುಕೊಂಡೆ. ನಮ್ಮ ಬೆಂಗಳೂರು ಏರ್ ಪೋರ್ಟ್ ನಲ್ಲೂ ಹೀಗೆ ಆಯ್ತು. ನಾಲ್ಕು ಗಂಟೆ ಫ್ಲೈಟ್ ತಡವಾದ್ದರಿಂದ ಕಾದು ಸುಸ್ತಾಗಿತ್ತು. ಮೊದಲೇ ಬೋರು, ಮೇಲೆ ಆ ಬೆಳಗಿನ ಜಾವದ ಕೊರೆವ ಚಳಿ! ಅಬ್ಬಾ.. ಒಂದು ಲೋಟ ಕಾಫಿ-ಟೀ ಅನ್ನಾದರೂ ಕುಡಿಯೋಣ ಅಂದುಕೊಂಡೆ. ಉಡುಪಿ ಕ್ಯಾಂಟಿನ್ ನ ಒಂದು ಸಣ್ಣ ಗೂಡಂಗಡಿಯಂಥ ಚಹದಂಗಡಿ ಕಾಣಿಸಿತು. ಮಾಮೂಲಿ ದರಕ್ಕಿಂತ ಕೊಂಚ ಜಾಸ್ತಿ ಇರಬಹುದು ಅಂದುಕೊಂಡೆ. ಅಲ್ಲೂ ಒಂದು ಕಾಫಿಗೆ 60 ರೂಪಾಯಿ! ಹೋ ಏರ್ ಪೋರ್ಟ್ ಸಹವಾಸ...


 ಪ್ಯಾರಿಸ್ ವಿಮಾನ ನಿಲ್ದಾಣದ ಒಂದು ಡೊಮೆಸ್ಟಿಕ್ ಟರ್ಮಿನಲ್ ನ ಒಳಾಂಗಣ....
ಪ್ಯಾರಿಸ್ ಪತ್ರಿಕೆಗಳು... ಇಲ್ಲಿನ ಭಾಷಾ ಪತ್ರಿಕೆಗಳಿಗೇ ಮೊದಲ ಪ್ರಾಶಸ್ತ್ಯ. ಬಹುಸುಂದರ ವಿನ್ಯಾಸವುಳ್ಳ ಈ ಪತ್ರಿಕೆಗಳ ಸ್ವರೂಪವೇ ಅನನ್ಯವಾದುದು. ಇಷ್ಟದ ಯಾವ ಪತ್ರಿಕೆಗಳನ್ನು ಬೇಕಾದರೂ ಎತ್ತಿಕೊಂಡು ಬೋರ್ಡ್ ಆಗಬಹುದು. ಅತ್ಯಂತ ಆಕರ್ಷಕವಾದ ಇಲ್ಲಿನ ಪತ್ರಿಕೆಗಳು ಓದುಗನನ್ನು ಸೆಳೆಯುವಂಥವು. ನಾನೊಂದು ಇಂಗ್ಲಿಷ್ ಪತ್ರಿಕೆ ಎತ್ತಿಕೊಂಡಿದ್ದೆ. ಅದರಲ್ಲಿ ಕೇಸರಿ ಬಗ್ಗೆ ಒಂದು ವಿಶೇಷ ವರದಿ ಓದಿದೆ. ಕೇಸರಿಯನ್ನು ಎಲ್ಲಿ, ಹೇಗೆ ಬೆಳೆಯುತ್ತಾರೆ, ಅದರ ವಹಿವಾಟು ಹೇಗೆ, ಆರೋಗ್ಯದ ದೃಷ್ಟಿಯಿಂದ ಅದರ ಮಹತ್ವ ಏನು ಎನ್ನುವ ಅಂಶಗಳು ಅವತ್ತಿನ ಪತ್ರಿಕೆಯ ವಿಶೇಷ ಹೈಲೈಟ್ ಆಗಿತ್ತು. ವರದಿಯ ಬರವಣಿಗೆಗಿಂತ ಅದರ ಪ್ರಜೆಂಟೇಷನ್ ಮತ್ತು ವಿವರಗಳು ತುಂಬ ಆಪ್ತವಾಗಿದ್ದವು. ವಿನ್ಯಾಸ ಸಮಗ್ರತೆಯನ್ನು ಕಟ್ಟಿಕೊಟ್ಟಿತ್ತು. ಪ್ಯಾರಿಸ್ ನಿಂದ ಒಸ್ಲೊವರೆಗಿನ ಎರಡು ತಾಸಿನ ಸಮಯದಲ್ಲಿ ಬಹುತೇಕ ಸಮಯವನ್ನು ನಾನು ಆ ಪತ್ರಿಕೆಯ ಒಟ್ಟು ಸ್ವರೂಪ ಗಮನಿಸಲು ಬಳಸಿಕೊಂಡೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ