ವಿಷಯಕ್ಕೆ ಹೋಗಿ

ನಾರ್ವೆ ರಾಜಧಾನಿ ಒಸ್ಲೊ ನೆಲಕ್ಕಿಳಿದಾಗ...

ನಾರ್ವೆ ರಾಜಧಾನಿ ಒಸ್ಲೊಗೆ ಪ್ಯಾರಿಸ್ ನಿಂದ ಪಯಣ ಶುರುವಾಯ್ತು. ಈ ಸಲ ನನ್ನವ್ವನಿಗೆ ಕಿಟಕಿ ಇರುವ ಸೀಟು ಸಿಕ್ಕಿತು. ಫ್ಲೈಟ್ ಟೇಕಾಫ್ ಆಗುವ ಮಜಾ ಅವಳಿಗೆ ಮೊದಲ ಸಲ ಸಿಕ್ಕಿರಲಿಲ್ಲ. ಈ ಸಲ ಅವಳು ಥ್ರಿಲ್ ಆದಳು. ಭೂಮಿಯಿಂದ ಮೇಲಕ್ಕೆ ಹಾರುವ ಹಕ್ಕಿಯಂಥ ಅನುಭವ ಆಕೆಗೆ ಆಗಿರಲೇಬೇಕು. ಅಮ್ಮಾ! ಜಮೀನ್, ರಸ್ತಾ, ಘರ್ ಕಿತನೆ ಛೋಟೆ ಲಗ ರಹೇ ಹೈ, ವೋ ದೇಖೋ ಆಸ್ಮಾನ್, ಬಾದಲ್, ಸೂರಜ್... ಗಾಂವ್ ಮೇ ಉಡತಾ ಹುವಾ ಹವಾಯಿಜಹಾಜ್ ಸಿರ್ಫ್ ದೇಖತೆ ಥೇ, ಆಜ್ ಅಸಲಿ ಎಹಸಾಸ್ ಹುವಾ, ಹಮಾರಿ ಬೇಟಿ ಸಪನಾ ಸಚ್ ಕರ್ ದೀ... 
ನನ್ನವ್ವನ ಮಾತುಗಳಿವು. ಭೂಮಿ, ಆಕಾಶ, ರಸ್ತೆ, ಮನೆ... ಎಲ್ಲ ಎಷ್ಟು ಸಣ್ಣ ಜಗತ್ತು! ಎಲ್ಲ ಅದೆಷ್ಟು ಹತ್ತಿರ! ನಮ್ಮೂರ ಆಕಾಶದಲ್ಲಿ ಹಾರುತ್ತಿದ್ದ ವಿಮಾನವನ್ನು ದೂರದಿಂದಲೇ ನೋಡಿ ದಂಗಾಗುತ್ತಿದ್ದೆವು... ಅದರಲ್ಲಿ ಹತ್ತುವ ಕನಸು ಮೂಡುತ್ತಿತ್ತು...  ಆ ಕನಸನ್ನು ಮಗಳು ಈಗ ನನಸು ಮಾಡಿಬಿಟ್ಟಳು...
ಅವಳ ಕೈಗೆ ಕ್ಯಾಮೆರಾ ಕೊಟ್ಟೆ. ಸಂಕೋಚದಿಂದಲೇ ಕ್ಲಿಕ್ ಮಾಡಲೆತ್ನಿಸಿದಳು. ಅವಳು ತಡಕಾಡುತ್ತಿರುವುದನ್ನೆಲ್ಲ ಅವಳ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಯುರೋಪ್ ಹುಡುಗಿ ಗಮನಿಸಿ ನಗುತ್ತಿದ್ದಳು. ನನ್ನತ್ತ ನೋಡಿ ದೊಡ್ಡದಾಗಿ ನಕ್ಕಳು. ಮೈ ಮಾಮ್ ಎಂದೆ, ಯಾ ಐ ಕ್ಯಾನ್ ಅಂಡರಸ್ಟ್ಯಾಂಡ್ ಎಂದು ನಕ್ಕಳು. ನನ್ನವ್ವನನ್ನೇ ನೋಡುತ್ತಿದ್ದಳು, ಕಡೆಗೂ ಆಕೆ ಒಂದಷ್ಟು ಕ್ಲಿಕ್ಕಿಸಿದಳು... ಯಾ ಸೀ ಗಾಟ್ ದಿ ಪಿಕ್ಸ್ ಅಂದಳಾಕೆ... ಅವಳಿಗೆ ಕ್ಯಾಮೆರಾದ ಮಾನಿಟಾರ್ ನಲ್ಲಿ ಪ್ರಿವೀವ್ ತೋರಿಸಿದೆ. ಯಾ ವ್ಹೇರಿ ವ್ಹೇರಿ ನೈಸ್ ಅಂದಳು. ಒಸ್ಲೊ ಬರುವತನಕ ಆಕೆ ನಮ್ಮನ್ನೇ ಗಮನಿಸುತ್ತಿದ್ದಳು. ನಾನು ಪೇಪರ್ ವಿನ್ಯಾಸದಲ್ಲಿ ಮುಳುಗಿದ್ದೆ. ಇಳಿಯುವ ಮುನ್ನ ಆಕೆ, ಯಾ ನೈಸ್ ಮೀಟಿಂಗ್ ಯು, ಹ್ಯಾವ್ ಅ ನೈಸ್ ಟ್ರಿಪ್, ಸಿ ಯು ಬಾಯ್ ಎಂದು ಕೈಕುಲುಕಿದಳು. ಲಗೇಜ್ ತೆಗೆದುಕೊಳ್ಳುವ ಭರಾಟೆಯಲ್ಲಿ ಅವಳನ್ನು ಮತ್ತೆ ಕಾಣುವಷ್ಟೊತ್ತಿಗೆ ಆಕೆ ಮುಂದೆ ಸಾಗಿದ್ದಳು, ಆದರೂ ಒಮ್ಮೆ ಹಿಂತಿರುಗಿ ಕೈ ಮಾಡಿ, ಸ್ಮೈಲ್ ಕೊಡುವುದ ಮರೆಯಲಿಲ್ಲ. ಲಗೇಜ್ ತೆಗೆದುಕೊಳ್ಳುವ ಸಂದರ್ಭ ಮತ್ತೆ ಆಕೆಯೇ ನೋಡಿ ಮಾತನಾಡಿಸಿದಳು. ಏನು ಇಲ್ಲಿ ಬಂದಿದ್ದು ಅಂದಳು, ನಾನವಳಿಗೆ ವಿವರಿಸಿದೆ. ಆಕೆ ಇಲ್ಲೇ ಒಸ್ಲೊದಲ್ಲಿ ಅಧ್ಯಯನಕ್ಕಾಗಿ ದೂರದ ಚೀನಾದಿಂದ ಬಂದವಳು ಎನ್ನುವುದು ಗೊತ್ತಾಯಿತು. ನಿಮ್ಮನ್ನು ಯುರೋ ಹುಡುಗಿ ಅಂದುಕೊಂಡಿದ್ದೆ ಅಂದೆ. ಯಾ ಐ ಆ್ಯಮ್ ಫ್ರಾಮ್ ಯುರೋಪ್ ಒನ್ಲಿ, ಬಟ್ ಮೈ ಪೇರೆಂಟ್ಸ್ ಮೈಗ್ರೆಟೆಡ್ ಟು ಚೈನಾ... ಎಂದಳು. ಆಕೆಗೊಂದು ವಿಸಿಟಿಂಗ್ ಕಾರ್ಡ್ ಕೊಡೋಣ ಎಂದರೆ ಜೇಬಲ್ಲಿ ವಿಸಿಟಿಂಗ್ ಕಾರ್ಡ್ ಸಿಕ್ಕಲೇ ಇಲ್ಲ. ವಿಲ್ ಮೀಟ್ ಇನ್ ಒಸ್ಲೊ ಇಫ್ ಪಾಸಿಬಲ್ ಎಂದೆ. ಶೂರ್ ಎಂದಳಾಕೆ.  ನನ್ನವ್ವ ಕ್ಲಿಕ್ಕಿಸಿದ ಮೊದಲ ಚಿತ್ರಗಳಿವು...
ಒಸ್ಲೊ ಏರ್ ಪೋರ್ಟ್ ತಲುಪಿದಾಗ!... ತುಂಬ ನೀಟಾದ ವಿಮಾನ ನಿಲ್ದಾಣವಿದು. ಅಚ್ಚುಕಟ್ಟಾದ ವ್ಯವಸ್ಥೆ. ಪ್ಯಾರಿಸ್ ನಷ್ಟು ದೊಡ್ಡ ಏರ್ ಪೋರ್ಟ್ ಅಲ್ಲವಾದರೂ, ಸುಸಜ್ಜತೆ ಮತ್ತು ನೀಟನೆಸ್ ದೃಷ್ಟಿಯಲ್ಲಿ ಅದಕ್ಕೂ ಕಮ್ಮಿ ಏನಲ್ಲ.  ಇಲ್ಲಿಂದಲೂ ಯುರೋಪ್ ಮತ್ತಿತರ ಕಡೆಗೆ ಸಾಕಷ್ಟು ವಿಮಾನಗಳು ಹಾರಾಡುತ್ತವೆ. ನಿಲ್ದಾಣದಲ್ಲಿ ಎಲ್ಲಿ ನೋಡಿದಲ್ಲಿ ಸ್ವಚ್ಛತೆ, ಸಭ್ಯತೆ, ಇನಫ್ರಾಸ್ಟ್ರಕ್ಚರ್ ಮನ ಸೆಳೆಯುತ್ತಿತ್ತು.
ಅಂತೂ ನಾವು ಸೇರಬೇಕಿದ್ದ ಜಾಗ ಸೇರಿಕೊಂಡೆವು. ಒಸ್ಲೊ ಏರ್ ಪೋರ್ಟ್ ನಲ್ಲಿ ನಮ್ಮನ್ನು ಸ್ವಾಗತಿಸಲು ಭಾವ ಖಾನ್ ಕಾದು ಕುಳಿತಿದ್ದರು. ಅವರ ಕೈಯಲ್ಲೊಂದು ಸುಂದರ ಹೂಗುಚ್ಛವಿತ್ತು. ಮುಖದಲ್ಲಿ ಸಮಾಧಾನದ ನಗುವಿತ್ತು. ನಾವು ಸುರಕ್ಷಿತವಾಗಿ ಬಂದು ತಲುಪಿದ್ದು ಅವರಿಗೂ ಖುಷಿ ತಂದಿತ್ತು. ಅಂತೂ ಎರಡು ಹಿರಿಯ ಜೀವಗಳನ್ನು ಸುರಕ್ಷಿತವಾಗಿ ಒಸ್ಲೊ ತಲುಪಿಸಿದ ಸಮಾಧಾನ ನನಗೂ. ನನ್ನ ಮೊದಲ ವಿದೇಶ ಪಯಣದ ಒಂದು ಹಂತದ ಕೆಲಸ ಅತ್ಯಂತ ಯಶಸ್ವಿಯಾಗಿತ್ತು.
ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗುವುದೊಂದೇ ಪಯಣ ಅನಿಸುವುದೇ?... ಒಂದು ವಾತಾವರಣದಿಂದ ಮತ್ತೊಂದು ವಾತಾವರಣಕ್ಕೆ, ಒಂದು ಸಂಸ್ಕೃತಿಯಿಂದ ಮತ್ತೊಂದು ಸಂಸ್ಕೃತಿಗೆ, ಒಂದು ಭಾವ ತೀರದಿಂದ ಮತ್ತೊಂದು ಭಾವ ತೀರಕ್ಕೆ ಬಂದು ನಿಲ್ಲುವ ಮತ್ತು ಒಂದಷ್ಟು ಬೆರೆಯುವ, ಕೊಡಕೊಳ್ಳುವ ಹಾಗೂ ಆಮೂಲಕ ಒಂದಷ್ಟು ಅನುಭವದ ಹರವು ಹಬ್ಬಿಸಿಕೊಳ್ಳುವ ಪರಿಯೇ ಒಂದು ಪುಟ್ಟ ಪಯಣವಾದೀತು! ಅಥವಾ ಒಟ್ಟು ಬದುಕೆಂಬ ಪಯಣದಲ್ಲಿ ಇದೊಂದು ಪುಟ್ಟ ನೆನಪಾಗುಳಿದೀತು ಅಷ್ಟೇ... ಅಲ್ಲವೇ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ