ವಿಷಯಕ್ಕೆ ಹೋಗಿ

ಇದು ನಾವು ಬದುಕುತ್ತಿರುವ ವ್ಯವಸ್ಥೆ... ನಮಗೇನು ಬೇಕು?

ನಮ್ಮದನ್ನು ಇನ್ನಾರೋ ಬಳಿಯಬೇಕು. ನಮ್ಮದಕ್ಕೆ ನಾವೇ ಮೂಗುಮುಚ್ಚಿಕೊಂಡರೂ ಅವರು ಮಾತ್ರ ಮೂಗು, ಬಾಯಿ ತೆರಕೊಂಡೇ ಎಲ್ಲ ಸಹಿಸಿಕೊಂಡು ಬಳಿಯಬೇಕು. ಹೇಲು, ಉಚ್ಚೆ ಬಳಿವ ಕೈಗಳಿಗೆ ಹಣ ದಕ್ಕುವುದಾದರೂ ಎಷ್ಟು? ಅದರ ವಾಸನೆ ಹೋಗುವಂತೆ ಕೈಗೆ ಬಳಿಯಬೇಕಾದ ಸಬಕಾರಕ್ಕೂ ಅದು ಸಾಲದು. ಇನ್ನು ಇವರ ನಂಬಿದವರ ಹೊಟ್ಟೆಗೆ?
ಸಾರ್ವಜನಿಕ ಸ್ಥಳಗಳನ್ನು ನಾವು ಬಳಸಿಕೊಳ್ಳುವ ಮತ್ತು ಅದರ ಬಗ್ಗೆ ನಮಗಿರುವ ಕಾಳಜಿಯ ಪರಿ ಇದು. ರೈಲುಗಳಲ್ಲಿ ಹೇಲುವುದಕ್ಕೆ, ಉಚ್ಚೆ ಹೊಯ್ಯುವುದಕ್ಕೆ ಒಂದು ನಮ್ಮದೇ ಮಿತಿ, ರೀತಿ, ರಿವಾಜುಗಳಿರಬೇಕು ಎಂದೆನಿಸುವುದೇ ಇಲ್ಲ. ಅದು ಹೇಳಿ ಕೇಳಿ ಬರುತ್ತದೆಯೇ ಎನ್ನುವ ಮಾತಲ್ಲಿ ಇರುವುದು ನಮ್ಮ ಉಡಾಫೆ ಅಷ್ಟೇ ಅನ್ನೋದು ನಮ್ಮರಿವಿಗೇ ಬರುವುದಿಲ್ಲ. ಅಥವಾ ಇಲಾಖೆಗಳು ಅದರ ನಿರ್ವಹಣೆಯ ಬಗ್ಗೆ ಹೊಸದಾಗಿ ಯೋಚಿಸುವ ಗೋಜಿಗೂ ಹೋಗುವುದಿಲ್ಲ. ಅದನ್ನು ಒಂದೆರಡು ಬೋಗಿಗೆ ಹೋಗಿ ಶೇಖರಣೆಯಾಗುವಂತೆ ನೋಡಿಕೊಳ್ಳುವ ಪೈಪಿಂಗ್ ವ್ಯವಸ್ಥೆ ಮತ್ತು ಅದನ್ನು ಎನರ್ಜಿಯಾಗಿ ಪರಿವರ್ತಿಸುವ ತಂತ್ರಜ್ಞಾನವೂ ನಮಗೆ ಸಾಧ್ಯವಾಗುತ್ತಿಲ್ಲವೆಂದರೆ ಏನು?
ಹಸಿದವನಿಗೆ ರಸ್ತೆಯಾದರೇನು ರೈಲ್ವೆ ಟ್ರ್ಯಾಕ್ ಆದರೇನು... ಜನ ಸುತ್ತುವ ಜಾಗವೊಂದಿದ್ದರೆ ಆತ ಭಿಕ್ಷೆ ಬೇಡಿಯಾದರೂ ತನ್ನ ದಿನದ ತೊತ್ತಿನ ಚೀಲ ತುಂಬಿಸಿಕೊಂಡಾನು.. ನಮ್ಮೊಳಗಿನ ಈ ಮಾನವೀಯ ತುಡಿತವನ್ನು ಕಡೆಗಣಿಸುವ ಅಗತ್ಯವೇ ಇಲ್ಲ. ಬಡವರು ಮತ್ತು ಭಿಕ್ಷಾಟನೆ ಇದನ್ನು ಸಮೀಕರಿಸುವುದು ಬೇಡ. ಭಿಕ್ಷಾಟನೆ ನಮ್ಮಲ್ಲಿ ಒಂದು ದಂಧೆಯಾಗಿದೆ ಎನ್ನುವುದು ವಾಸ್ತವ. ಯಾರದೋ ಅಸಹಾಯಕತೆಯನ್ನು ಇನ್ನಾರೋ ಎನಕ್ಯಾಶ್ ಮಾಡಿಕೊಳ್ಳುವ ಅಸಹ್ಯಕರ ಪ್ರವೃತ್ತಿಯನ್ನು ಮೊದಲು ಡೀಲ್ ಮಾಡಬೇಕೇನೋ... "ನಾನ್ ಕಡವುಳ್" ಎನ್ನುವ ತಮಿಳು ಸಿನಿಮಾ ಕೊಂಚ ಈ ಸಬ್ಜೆಕ್ಟ್ ಅನ್ನು ಡೀಲ್ ಮಾಡಿದ್ದನ್ನು ನಾನು ಚಿತ್ರದಲ್ಲಿ ಗಮನಿಸಿದೆ.
ಇದಕ್ಕಿಂತ ಮುಖ್ಯವಾಗಿ ಈ ಫೊಟೊಗ್ರಾಪ್ ನಲ್ಲಿ ಗಮನಿಸಬೇಕಾದ್ದು, ರೈಲ್ವೆ ಕ್ರಾಸಿಂಗ್ ವ್ಯವಸ್ಥೆಯನ್ನು ನಾವು ಕಾಣುತ್ತಿರುವುದು ಎಷ್ಟು ಅಪಾಯಕಾರಿ ಮತ್ತು ಅಸಹನೀಯವೆನ್ನುವುದು. ರಾತ್ರೋರಾತ್ರಿ ಊರ ತುಂಬ ಫ್ಲೈ ಓವರ್ ಮಾಡಿಟ್ಟುಕೊಂಡ ನಾವು ಅದರ ಕೆಳಗಿನ ಪರಿಸ್ಥಿತಿಯನ್ನು ಅಸಹನೀಯಗೊಳಿಸಿಬಿಟ್ಟೆವು. ಕಾರು, ಮೋಟಾರು ಬೈಕುಗಳಿಗೆ ರಹದಾರಿ ಮಾಡಿಕೊಂಡ ನಾವು, ಸಾಮಾನ್ಯನ ಕೈಕಾಲುಗಳ ಬಗ್ಗೆ ಗಮನವನ್ನೇ ಕೊಡಲಿಲ್ಲ. ಅವರು ದೈತ್ಯ ಟ್ರೈನ್ ಮೇಲೆರಗುವ ಅಪಾಯವಿದ್ದರೂ ಅಂಗೈಯಲ್ಲಿ ಜೀವ ಹಿಡಕೊಂಡು ಹಳಿ ದಾಟಬೇಕು. ಬೈಕ್, ಕಾರ್, ಬಸ್ ಹಾರ್ನ್ ಗಳ ಧಿಮಾಕು ಸಹಿಸಿಕೊಂಡು, ಅದಕ್ಕೆ ಹೆದರಿಕೊಂಡೇ ರಸ್ತೆ, ಫ್ಲೈ ಓವರ್ ಕೆಳಕ್ಕೆ ಸಾಗಬೇಕು. ಈಗೀಗ ನಡೆದುಕೊಂಡು ಹೋಗುವುದೆಂದರೆ ಅತ್ಯಂತ ಅಸಹ್ಯಕರ ಮತ್ತು ಅವಮಾನದ ಸಂಗತಿಯಾಗಿ ನಮಗೆ ಕಾಣಿಸುತ್ತಿದೆ.

ನಮಗೆಲ್ಲ ವ್ಯವಸ್ಥೆ ಇದ್ದರೂ ಅದರ ನಿರ್ವಹಣೆಯಲ್ಲಿ ನಾವು ಸೋಲುತ್ತಿರುವುದಾದರು ಏಕೋ! ನಾವು ನಿತ್ಯ ಬಳಸುವ ಸಾರ್ವಜನಿಕ ವ್ಯವಸ್ಥೆ ನಮ್ಮ ಪಡಸಾಲೆಯಂತೆ ಒಪ್ಪವಾಗಿರುವಂತೆ ನೋಡಿಕೊಳ್ಳುವುದು ನಮ್ಮ ಹೊಣೆ ಎಂದೆನಿಸುವುದೇ ಇಲ್ಲ. ಅದನ್ನು ಹಿತ್ತಲ ತಿಪ್ಪೆಗುಂಡಿಯಂತೆ ಕಂಡರೆನೇ ನಮಗೆ ಸಮಧಾನವೇನೋ...
ಯುರೋಪಿನಲ್ಲಿ ಕಂಡಲ್ಲೆಲ್ಲ ಸಾರ್ವಜನಿಕ ಸ್ಥಳಗಳು ಅತ್ಯಂತ ಸ್ವಚ್ಛ ಮತ್ತು ಸೂಕ್ತ ನಿರ್ವಹಣಾ ವಿಧಾನಗಳನ್ನು ಹೊಂದುವ ಮೂಲಕ ಜನರೇ ರೂಪಿಸಿಕೊಂಡಂಥ ಜನೋಪಯೋಗಿ ವ್ಯವಸ್ಥೆಯಾಗಿ ಕಾಣಿಸುತ್ತವೆ. ಅದನ್ನು ಜನರೇ ಅತ್ಯಂತ ಗೌರವಾದರದಿಂದ ಮತ್ತು ಜವಾಬ್ದಾರಿಯುತವಾಗಿ ಕಾಣುತ್ತಾರೆ. ತಮ್ಮೊಂದಿಗೆ ತರುವ ನಾಯಿ ಹೇತರೆ, ಗಲೀಜು ಮಾಡಿದರೆ ಅದನ್ನು ಅವರೇ ಬಳಿದುಕೊಂಡು, ಆ ಜಾಗವನ್ನು ನೀರಿನಿಂದ, ವೇಸ್ಟ್ ಪೇಪರಿನಿಂದ ಸ್ವಚ್ಛಗೊಳಿಸಿ, ಅದನ್ನೆಲ್ಲ ಕಚರಾ ಡಬ್ಬದಲ್ಲಿ ಭದ್ರವಾಗಿ ತುಂಬಿ ಮುಂದಕ್ಕೆ ಸಾಗುತ್ತಾರೆ. ನಾನಿದನ್ನು ಎಷ್ಟೋ ಕಡೆ ಕಣ್ಣಾರೆ ಕಂಡಿದ್ದೇನೆ.
ನಮಗೆ ಬೇಕಿರುವುದು ಇಂಥ ಮನೊಧರ್ಮದ ಪ್ರಗತಿ ಅಥವಾ ಅಭಿವೃದ್ಧಿ ಅಲ್ಲವೇ ಅಲ್ಲ.  ನಮ್ಮ ಸಾರ್ವಜನಿಕ ಸ್ಥಳಗಳು, ನಗರ ಸಾರಿಗೆ, ಲೋಕಲ್ ಟ್ರೈನ್ ವ್ಯವಸ್ಥೆ ಹೇಗಾದರೂ ಇದ್ದುಕೊಳ್ಳಲಿ ನಮಗೇನಿದ್ದರೂ ದಿಢೀರ್ ಆದೊಂದು "ಮೆಟ್ರೋ" ತರಹದ ಚಮತ್ಕಾರಿಕ ಬದಲಾವಣೆ, ಕಾಸ್ಮೆಟಿಕ್ ಚೇಂಜ್ ಬೇಕು ಅಷ್ಟೇ.

ಕಾಮೆಂಟ್‌ಗಳು

Ramakrishna hulikunteಹೇಳಿದ್ದಾರೆ…
e deshada katta kadeya manushanige nittusiru biduva kaala bandaga e deshada vyvastege onedu artha barutte

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ