ವಿಷಯಕ್ಕೆ ಹೋಗಿ

ಈ ಬಂಧ, ಸಂಬಂಧ...

ಈಗ ಗಡಿಗಳೇ ಇಲ್ಲ. ಭಾವಸಮುದ್ರ ಎಲ್ಲೆಂದರಲ್ಲಿ ಆವರಿಸಿಕೊಂಡುಬಿಡುತ್ತದೆ. ಮಾಹಿತಿ ತಂತ್ರಜ್ಞಾನ ಇಡೀ ಜಗತ್ತನ್ನು ಒಂದು ಹಳ್ಳಿಯಂತಾಗಿಸಿದ್ದು ಹೌದು. ಆದರೆ, ಮನುಷ್ಯನ ಆಳದಲ್ಲೇ ಅಂತಃಕರಣ, ಬಂಧ, ಸಂಬಂಧ, ಸೆಳೆತಗಳ ಅಗಾಧ ಶಕ್ತಿ ಇದೆಯಲ್ಲ ಅದು ಎಂದಿನಿಂದ ಎಲ್ಲ ಮಿತಿ, ಬೇಲಿಗಳನ್ನು ಕಿತ್ತು ಬಿಸಾಕುತ್ತ ಸಾಗುತ್ತಿಲ್ಲವೇನು...
ಭಾಷೆ, ಜಾತಿ, ಬಣ್ಣಗಳ ಮಿತಿಯಲ್ಲಿ ಅಷ್ಟು ಸುಲಭಕ್ಕೆ ಕರಗಿ ಹೋಗುವಂಥದಲ್ಲ ಮನುಷ್ಯ ಪ್ರೀತಿ. ಕರಗುವುದಾದರೂ ಯಾಕೆ? ಮಲೆಗಳಲ್ಲಿ, ಮರದ ಕೊಂಬೆಗಳಲ್ಲಿ ಅಲೆದಾಡಿ, ನಲಿದಾಡಿ ಬೆಳೆದುಬಂದ ಮನುಷ್ಯ ಜೀವ ಹೊಸ ಹೊಸ ನಾಗರಿಕತೆಯ ಹೊಳೆಯಲ್ಲಿ ಈಜುತ್ತಲೇ ಇದೆ. ಕಾಡಿಂದ ನೆಲ, ನೆಲದಿಂದ ನೀರು, ಆಕಾಶ, ಬಾಹ್ಯಾಕಾಶ, ಚಂದ್ರ, ಮಂಗಳ... ಮಿತಿಯುಂಟೇ ಈ ನೆಗೆತಕ್ಕೆ!
ಸ್ವಿಜರಲ್ಯಾಂಡ್ ನ ಜ್ಯುರಿಚ್ ಗೆ ಪಯಣಿಸುತ್ತಿದ್ದೆ. ಸಹ ಪಯಣಿಗರಾಗಿ ನನ್ನ ಪಕ್ಕದ ಸೀಟ್ ನಲ್ಲಿ ನಾರ್ವೆ ದಂಪತಿ ಇದ್ದರು. ನಾನು ಆಕಾಶ ನೋಡುತ್ತಿದ್ದೆ. ಅಪರೂಪಕ್ಕೆ ಸೂರ್ಯ ಇಣುಕುತ್ತಿದ್ದ. ಕ್ಯಾಮೆರಾ ಕೊರಳಲ್ಲೇ ನೇತಾಡುತ್ತಿತ್ತು. ಎತ್ತಿಕೊಂಡು ಕ್ಲಿಕ್ಕಿಸುತ್ತಲೇ ಇದ್ದೆ. ಚಳಿ ಎನ್ನುವ ಛಿನಾಲಿಯಿಂದ ಬೇಸತ್ತ ದಿಲ್  ಸೂರ್ಯನ ಬಿಸಿಲಿಗೆ ಗುಲ್ ಮೊಹರಿನಂತೆ ಅರಳುತ್ತಿತ್ತು. ಆಕಾಶ ನಮ್ಮ ಮನಸುಗಳಂತೆ ತೆರಕೊಳ್ಳುತ್ತಲಿತ್ತು. ನಾನು ಮೋಡಗಳ ಜತೆ ಮೋಡವಾಗಿದ್ದೆ ಚಣ ಕಾಲ...
ಪಕ್ಕದ ಸೀಟ್ ನಲ್ಲಿ ಕುಳಿತ ಮಹಿಳೆ ನನ್ನ ಭುಜದ ಮೇಲೆ ಕೈ ಇಟ್ಟು, ಅದೆಷ್ಟು ಮುಳುಗಿಹೋಗುತ್ತೀರಿ ಮೋಡಗಳಲ್ಲಿ ನಮ್ಮ ನಾಡಿನ ಸೂರ್ಯನ ಹಾಗೆ... ಎಂದಳು. ಹೋ... ನಮಸ್ತೆ ಎಂದೆ. ಹಾಯ್ ಹಾಯ್ ಎಂದಳಾಕೆ. ಆರ್ ಯು ಗೋಯಿಂಗ್ ಟು ಇಂಡಿಯಾ... ಎಂದಳು. ನೋ.. ಐ ಆ್ಯಮ್ ಗೋಯಿಂಗ್ ಇನ್ ದಿ ನೆಕ್ಸ್ಟ್ ಮಂಥ್, ಸಿನ್ಸ್ ಫ್ರಾಮ್ ಲಾಸ್ಟ್ ಮಂಥ್ ಟ್ರಾವೆಲಿಂಗ್ ಸಮ್ ಪಾರ್ಟ್ಸ್ ಆಫ್ ಯುವರ್ ಯುರೋಪ್ ಎಂದೆ. ಇಟ್ಸ್ ನಾಟ್ ಮೈ ಯುರೋಪ್, ಇಟ್ಸ್ ಆಫ್ ಎವರಿ ಒನ್, ದಿಸ್ ವ್ಹೋಲ್ ವರ್ಲ್ಡ್ ಬಿಲಾಂಗ್ಸ್ ಟು ಎವೆರಿ ಒನ್... ಹಾ ಹಾ ಎಂದು ಮನಸು ತುಂಬಿ ನಕ್ಕಳು...
ನಾನು ಚಣ ಹೊತ್ತು ದಂಗಾದೆ. ಯುರೋಪಿಯನ್ನರಲ್ಲಿ ಈ ಪರಿಯ ಹೃದಯ ವಿಶಾಲ ಮನೋಭಾವನೆ ಇರುತ್ತಾ ಅನ್ನೋದು ನನ್ನ ಕುತೂಹಲವಾಗಿತ್ತು. ಹೇ ಡೋಂಟ್ ಮಿಸ್ಟೇಕ್ ಮಿ... ತಾನು ಮತ್ತು ತನ್ನ ಪತಿ ಇಂಡಿಯಾಕ್ಕೆ ಇದೇ ಮೊದಲ ಬಾರಿಗೆ ಹೋಗುತ್ತಿದ್ದದೇವೆ. ಐ ಆ್ಯಮ್ ಗೋಯಿಂಗ್ ಟು ಕೋಚಿ (ಕೇರಳದ ಕೊಚ್ಚಿ) ಟು ಅಟೆಂಡ್ ದಿ ಮ್ಯಾರೇಜ್ ಸೆರೆಮಾನಿ ಎಂದಳು. ಪಕ್ಕದಲ್ಲೇ ಒಬ್ಬನನ್ನು ತೋರಿಸಿ ಈತ ನನ್ನ ಚೈಲ್ಡಹುಡ್ ಫ್ರೆಂಡ್ ಎಂದು ಪರಿಚಯಿಸಿದಳು. ಅವರಿಬ್ಬರೂ ನಲವತ್ತು ವರ್ಷಗಳ ನಂತರ ಇದೇ ಮೊದಲ ಸಲ ಭೇಟಿ ಆಗುತ್ತಿರುವದಂತೆ! ಸ್ಕೂಲಿನಲ್ಲಿ ಅಕ್ಕಪಕ್ಕದ ಬೆಂಚು ಈಗ ಕಾಕತಾಳೀಯ ಎನ್ನುವಂತೆ ನಮ್ಮ ಪಕ್ಕದ ಸಾಲಿನ ಸೀಟೇ ಇವನಿಗೆ ಸಿಕ್ಕಿದ್ದು. ಅವನೇ ನನ್ನ ಗುರುತು ಹಿಡಿದು ಮಾತನಾಡಿಸಿದ. ಹೋ ದಿಸ್ ವರ್ಲ್ಡ ಈಸ್ ಸೋ ಸ್ಮಾಲ್ ಯು ನೋ... ಎಂದಳು.
ಇಂಡಿಯಾ ಎನ್ನುವಾಗಲೆಲ್ಲ ಅವಳು ಸಂಭ್ರಮಿಸುತ್ತಿದ್ದಾಳೆ ಎನಿಸುತ್ತಿತ್ತು.
ಇಂಡಿಯಾದ ಬಗ್ಗೆ ತುಂಬ ಕೇಳಿದ್ದೇನೆ, ಅದೊಂದು ಅದ್ಭುತ ಜಗತ್ತು ಎಂದೆಲ್ಲ ಮಗ ಹೇಳುತ್ತಿರುತ್ತಾನೆ. ಆತ ನವದೆಹಲಿಯಲ್ಲಿ ಎಕಾನಾಮಿಕ್ಸ್ ನಲ್ಲಿ ಪಿಜಿ ಓದುತ್ತಿದ್ದಾನೆ. ದೆಹಲಿ, ವಾರಾಣಸಿ, ಹಿಮಾಲಯ, ಕೇರಳದ ಬಗ್ಗೆ ತುಂಬ ಹೇಳಿದ್ದಾನೆ. ಅವನಿಗೆ ವಾರಾಣಸಿ ಅಂದರೆ ತುಂಬ ಇಷ್ಟವಂತೆ ನಮಗೆ ಅದನ್ನೇ ಮೊದಲಿಗೆ ತೋರಿಸಲಿದ್ದಾನೆ, ಆನಂತರವೇ ಕೇರಳಕ್ಕೆ ಹೋಗುವುದಂತೆ ಎಂದು ಟ್ರಿಪ್ ಪ್ಲಾನ್ ಹೇಳಿದಳು ನಗು ನಗುತ್ತ.
ಯಾಕೆ ವಾರಾಣಸಿ? ಎಂದೆ.
ಅವನಿಗೆ ಅಲ್ಲೇ ಮೊದಲ ಸಲ ತನ್ನ ಮನದ ಮಾತನ್ನು ಅವಳಿಗೆ ಹೇಳಿಬಿಡುವ ಧೈರ್ಯ ಬಂದಿದ್ದಂತೆ. ವಾರಾಣಸಿಯ ಆ ಸುಂದರ ಬೆಟ್ಟಗಳ ಇಳಿಜಾರಿನಲ್ಲಿ ಹೆಜ್ಜೆ ಹಾಕುತ್ತಿರುವಾಗ ತುಂಬ ಗಟ್ಟಿ ಮನಸು ಮಾಡಿ ಅವಳ ಕೈಹಿಡಿದು ಒಂದುಸುರಿನಲ್ಲಿ ಐ ಲವ್ ಯು, ಐ ವಾಂಟ್ ಟು ಮ್ಯಾರಿ ಯು ಎಂದು ಹೇಳಿಯೇಬಿಟ್ಟನಂತೆ. ಆಕೆ ನಾಚಿ ನೀರಾದಳಂತೆ... ಮೌನದಲೇ ಮಾತು ಗಟ್ಟಿಗೊಳಿಸಿಬಿಟ್ಟಳಂತೆ ಎಂದು ಅದೆಷ್ಟು ಸಂಭ್ರಮದಿಂದ ಹೇಳಿದಳು.
ಪ್ರೀತಿ ಅಲ್ಲಿಂದ ಬೆಳೆದು ಕೇರಳದ ಕಾಡು ಸೇರಿತಾ ಎಂದೆ ನಾನು.
ಆಕೆ ಮತ್ತೆ ಜೋರಾಗಿ ನಕ್ಕಳು.
ಕೇರಳದ ಕನ್ಯೆಯರು ಇಂಥ ಚಾನ್ಸ್ ಬಿಡುವುದುಂಟಾ...  ಎಂದೆ ಮೆಲ್ಲಗೆ.
ವ್ಹಾಟ್... ಎನ್ನುತ್ತಿರುವಾಗಲೇ, ಕೇರಳಾ ಗರ್ಲ್ಸ್ ಆರ್ ನೈಸ್ ಎಂದು ನಾನೂ ನಕ್ಕೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ