ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ-2

ಕೆಎಲ್ ನುಡಿದ ಭವಿಷ್ಯ ನಿಜವಾಗಲು ಹೆಚ್ಚೆನೂ ಸಮಯ ಹಿಡಿಯಲಿಲ್ಲ. ಗಾಯನ ಮತ್ತು ಸಂಗೀತ ಅಬ್ಬಾ ಬದುಕಿನ  ಉಸಿರೇ ಆಗಿ ಹೋಗಿತ್ತು.  ಹಿಂದಿರುಗಿ ನೋಡುವ ಪ್ರಶ್ನೆಯೇ ಇರಲಿಲ್ಲ. ಅವಕಾಶಗಳು ಅವರನ್ನು ಅರಸಿ ಬರತೊಡಗಿದವು. ಲಾಹೋರಿನ ಆಲ್ ಇಂಡಿಯಾ ರೇಡಿಯೋದಲ್ಲಿ ಹಾಡುವ ಅವಕಾಶ ಒದಗಿ ಬಂದಿತು. 'ಜನ ನನ್ನ ಬಗ್ಗೆ ಏನೇನೋ ಕೇಳುತ್ತಿರುತ್ತಾರೆ. ನಾನವರಿಗೆ ಏನು ಹೇಳಲಿ? ಬಾಲ್ಯದಿಂದಲೇ ಸಂಗೀತ ನನ್ನನ್ನಾವರಿಸಿಕೊಂಡಿತ್ತು. ನನ್ನ ಮನಸು ಸಂಗೀತಕ್ಕೆ ಮಾತ್ರ ಹಾತೊರೆಯುತ್ತಿತ್ತು ಎಂದಷ್ಟೇ ಹೇಳಿ ಸುಮ್ಮನಾಗಿಬಿಡುತ್ತೇನೆ. ನಾನೀ ಹಂತಕ್ಕೆ ಬರಲು ತುಂಬ ಶ್ರಮ ಪಟ್ಟಿದ್ದೇನೆ. ಈ ಶ್ರಮದ ಗುರಿಯನ್ನು ನಾನು ಮುಟ್ಟಲೇಬೇಕು. ಎಲ್ಲವೂ ಅಲ್ಲಾಹುವಿನ ಕೃಪೆ. ನಾನು ಸರಿಯಾದ ವ್ಯಕ್ತಿಗಳನ್ನು ಸರಿಯಾದ ಸಮಯದಲ್ಲಿ ಭೇಟಿ ಮಾಡಿದೆ. ಎಲ್ಲವೂ ಸುಸೂತ್ರವಾಗಿ ಸಾಗಿತು..’ ಅಬ್ಬಾ ಆಗಾಗ ಹೇಳುತ್ತಿದ್ದ ಈ ಮಾತು ನನಗೀಗಲೂ ನೆನಪಿದೆ.  ಹಲವಾರು ಕಷ್ಟ, ಸಂಕಷ್ಟಗಳ ನಡುವೆಯೂ ಹಗಲು ರಾತ್ರಿ ಅವರಲ್ಲಿ ಒಂದೇ ತುಡಿತ. ಅದು ಸಂಗೀತ. ರಫೀ ತಮ್ಮ ಹದಿಮೂರನೇ ವಯಸ್ಸಿನಲ್ಲಿ ಸಂಬಂಧಿ ಬಶೀರನ್ ಬೇಗಂ (ತಂದೆಯ ಸಹೋದರನ ಮಗಳು) ಅವರನ್ನು ಮದುವೆಯಾಗಬೇಕಾಗಿ ಬಂದಿತು. ಅವರ ಹಿರಿಯ ಮಗ ಸಯೀದ್ ಈ ಸಂಬಂಧದಿಂದ ಹುಟ್ಟಿದ್ದು. ಈ ಮದುವೆ ತುಂಬ ಕಾಲ ಬಾಳಲಿಲ್ಲ. ಅಬ್ಬಾ ಬೇಗ ವಿವಾಹ ವಿಚ್ಛೇದನ ಪಡೆದುಕೊಂಡರು. ಅಬ್ಬಾ ಮೊದಲ ಮದುವೆಯ ವಿಷಯ ಮನೆಯ ಎಲ್ಲರಿಗೂ ಗೊತ್ತಿದ್ದ ವಿಚಾರವೇ ಆಗಿತ್ತು.

ಸಾವು...

ಕವಿ ಜಿ.ಎಸ್. ಶಿವರುದ್ರಪ್ಪ ಕಾವ್ಯ ಕಟ್ಟಿದರು. ಅದನ್ನು ಎದೆ ತುಂಬಿ ಹಾಡಿದವರೆಷ್ಟೋ. ಅವರು ಪ್ರೇಮ, ಪ್ರೀತಿಯ ಮಾತು ಹೇಳಿದರು. ಅದೆಷ್ಟೋ ಮಾನವ ಪ್ರೇಮಿಗಳು ಎದೆಗಿಳಿಸಿಕೊಂಡರು. ಕಾವ್ಯ, ಹಾಡು, ಪ್ರೇಮ ... ನಿರಂತರ.   ಇವು ಎಂದೂ ನಿಲ್ಲದ ಧಾರೆಗಳು. ಕವಿತೆಗೆ ಸಾವಿಲ್ಲ, ಕವಿಗೂ... * * *  ಬದುಕಿನೊಟ್ಟಿಗಿನ ಸಂಬಂಧವನ್ನು ಪದ್ಯ, ಗದ್ಯಗಳಲ್ಲಿ ಹಿಡಿದಿಡುವ ಯತ್ನ ಮನುಷ್ಯ ಸೂಕ್ಷ್ಮದ ಸಹಜ ನಡೆ. ಅವನಿಟ್ಟ ಹೆಜ್ಜೆ, ಆಡಿದ ನುಡಿ, ಕನಸಿದ ಭಾವ  ಎಲ್ಲದರ ಪಡಿನೆರಳನ್ನು ಪದ ಪದಗಳಲ್ಲೂ ವಿಸ್ಮಯದಂತೆ ಮೂಡಿಸುವುದು ಕಾವ್ಯಕ್ಕೆ ಸಾಧ್ಯವಿದೆ. ಸಾಲು, ಸಾಲುಗಳ ನಡುವಿನುಸಿರು, ಪಸೆ ಮತ್ತು ಎಲ್ಲ ಎಲ್ಲದರ ಗುಟ್ಟನ್ನು ಒಡಲಲ್ಲಿಟ್ಟುಕೊಂಡ ಕುತೂಹಲ ಧಾರೆಯಂತೆ ಹರಿದು ನಮ್ಮೊಳಗೂ ಇಳಿದಾಗ ಆಗುವ ಅನುಭೂತಿ ... ಭಾವುಕ ಜಗತ್ತನ್ನು ಕಲಾತ್ಮಕಗೊಳಿಸಿದ ಕವಿ ಜಿಎಸ್ಎಸ್ ಜೀವಪ್ರೀತಿಯನ್ನೇ ನೆಚ್ಚಿಕೊಂಡಿದ್ದರು. ಅಂತಃಕರಣ, ಸಹಜತೆ, ಸರಳತೆ ಮತ್ತು ಮುಗ್ಧತೆಯನ್ನು ಕಾವ್ಯಕ್ಕಿಳಿಸಿ ಮಾನವ ಪ್ರೇಮದ ಹೊನಲಾಗಿಸಿದರು. ಕಾವ್ಯ ಒಳಗಿನದೆಲ್ಲವನು ಬಟಾಬಯಲುಗೊಳಿಸಿಕೊಳ್ಳುವ ಕ್ರಿಯೆಯೂ ಹೌದು. ತಮ್ಮ ಮನದಾಳದ ಮಾನವ ಪ್ರೇಮವನ್ನು ಅವರೆಂದೂ ಬಚ್ಚಿಟ್ಟುಕೊಂಡವರಲ್ಲ. ಧಾರೆ ಎರೆದವರು. 'ಪ್ರೀತಿ ಇಲ್ಲದ ಮೇಲೆ...' ಇಲ್ಲಾವುದೂ, ಏನೂ ಇಲ್ಲ  ಎನ್ನುವುದರಲ್ಲಿ ದೊಡ್ಡ ನಂಬಿಕೆ ಇಟ್ಟುಕೊಂಡೇ ಮೊನ್ನೆ ಹೊರಟು ಹೋದರು. ಕಾಣದ ಕಡಲಿನತ್ತ... * * * ವಿಷಾದವೆಂದರೆ ಅ

ಹಾಡುಹಕ್ಕಿಗೆ ಬೇಕೆ ಬಿರುದು ಸನ್ಮಾನ...

ಉಪಖಂಡದ ಮಹಾನ್ ಗಾಯಕನ ಬಗ್ಗೆ ಅವರ ಸೊಸೆ ಬರೆದ ಪುಸ್ತಕ ಓದಿದೆ.  ಅಬ್ಬಾ (ತಂದೆ ಎಂದರ್ಥ. ಸೊಸೆಗೆ ಮಾವ, ತಂದೆಯಾಗೋದು ಎಂಥ ಅದ್ಭುತ ಭಾವನೆ..) ಎಂದೇ  ಆ ಗಾಯಕನನ್ನು ಗೌರವಿಸುವ ಸೊಸೆಯ ಅಭಿಮಾನ, ಅಂತಃಕರಣದ ಮಾನವೀಯ ಪರಿ ನನಗಂತೂ ಖುಷಿಕೊಟ್ಟಿತು. ಇಡೀ ಪುಸ್ತಕದ ತುಂಬ ಅಬ್ಬಾ ನಸುನಕ್ಕಿದ್ದಾರೆ. ಹೆಮ್ಮೆಯ ಭಾವದಲ್ಲಿ ಕಾಣುತ್ತಾರೆ. ನನ್ನ ಅಮ್ಮೀಗೂ ಈ ಗಾಯಕನ ಹಾಡುಗಳೆಂದರೆ ಪ್ರಾಣ. ಆಕೆಯ ಬಾಯಿಂದ ಹಲವು ಹಾಡುಗಳನ್ನು ಕೇಳಿಸಿಕೊಂಡಿದ್ದೇನೆ. ಕಲಿತಿದ್ದೇನೆ. ನನ್ನ ದೊಡ್ಡ ಮಾಮ (ಮಾಸ್ಟರ್ ಮೊಹಮ್ಮದ್ ಅಲೀ ಮುದ್ನಾಳ್) ಇವರನ್ನು ಹತ್ತಿರದಿಂದ ಕಂಡಿದ್ದರ ಬಗ್ಗೆ ಕೇಳಿ ರೋಮಾಂಚಿತಗೊಂಡಿದ್ದೆ.  ಆ ಅಪ್ರತಿಮ ಗಾಯಕನ ಹಳೆಯ ಹಾಡು ಹಾಡುತ್ತ, ಅನುವಾದ ಮಾಡುತ್ತ ಅಂತೂ ಆತನ ಒಂದಿಡೀ ಚರಿತ್ರೆಯನ್ನು ಕಣ್ಮುಂದೆ ಕಂಡೆ. ಆನಂದಿಸಿದೆ. ಅವಾಕ್ಕಾದೆ. ಅಭಿಮಾನಪಟ್ಟೆ. ಅದನ್ನು ಹೀಗೆ ಬರೆದು ಬಿಟ್ಟೆ. ಇಡೀ ಪುಸ್ತಕದ ಅನುವಾದ ಮಾಡುತ್ತಿದ್ದೇನೆ. ಅದರ ಆಯ್ದ ಭಾಗಗಳನ್ನು ಇಲ್ಲಿ ನೀಡುತ್ತಿದ್ದೇನೆ. ಇಂದು ಗಾಯಕನ ಜನ್ಮದಿನ (ಡಿಸೆಂಬರ್ 24). ಅಬ್ಬಾ... ದೇಶ ವಿಭಜನೆಗೂ ಮುನ್ನ ಅಬ್ಬಾ ಕುಟುಂಬ ಲಾಹೋರಿನಲ್ಲಿತ್ತು. ಸ್ಥಿತಿವಂತ ಮತ್ತು ಧಾರ್ಮಿಕ ಸಂಪ್ರದಾಯಸ್ಥ ಕುಟುಂಬ ಅವರದ್ದಾಗಿತ್ತು. ಅಬ್ಬಾ ಹೊಂದಿದ್ದ ಲೈಫ್ ಸ್ಟೈಲ್ ಮತ್ತು ಗತ್ತು ಇದಕ್ಕೆ ಸಾಕ್ಷಿಯಂತೇ ಇತ್ತು. ತಂದೆ ಹಾಜಿ ಮೊಹಮ್ಮದ್ ಅಲೀ ಮತ್ತು ತಾಯಿ ಅಲ್ಲಾರಖೀ. ಈ ದಂಪತಿಗೆ ಒಟ್ಟು ಎಂ

ಮುಸ್ಸಂಜೆಯ ಮುಲುಕು...

ರವೀಂದ್ರ ಕಲಾಕ್ಷೇತ್ರ-50, ಸುವರ್ಣ ಸಂಭ್ರಮ ನಾಟಕೋತ್ಸವ ಸೋಮವಾರ, 2 ಡಿಸೆಂಬರ್ 2013, ಸಂಜೆ 7.00 ನಾಟಕ: ಮುಸ್ಸಂಜೆ ಕಥಾಪ್ರಸಂಗ (ಪಿ. ಲಂಕೇಶ್ ಕೃತಿ ಆಧಾರಿತ)  ಟಿಕೆಟ್: ರೂ. 50 ರಂಗರೂಪ: ಬಸವರಾಜ್ ಸೂಳೇರಿಪಾಳ್ಯ ಅಭಿನಯ: ರೂಪಾಂತರ ತಂಡ, ಬೆಂಗಳೂರು ನಿರ್ದೇಶನ: ಕೆ.ಎಸ್.ಡಿ.ಎಲ್ ಚಂದ್ರು ಬರ್ತೊಲ್ಟ ಬ್ರೆಕ್ಟನ 'ಎ ಗುಡ್ ವುಮನ್ ಆಫ್ ಶೇಜುವಾನ್', 'ಮದರ್ ಕರೇಜ್' ಹಾಗೂ ಮೆಕ್ಸಿಂ ಗೋರ್ಕಿಯ 'ತಾಯಿ'... ಈ ಎಲ್ಲ ಕೃತಿಗಳ ತಾಯಿ ಜೀವವನ್ನು ನೆನಪಿಸುವ "ಮುಸ್ಸಂಜೆಯ ಕಥಾಪ್ರಸಂಗ" ಪಿ.ಲಂಕೇಶ್ ಅವರ ಅದ್ಭುತ ಕೃತಿ. ಅದು ರಂಗದ ಮೇಲೆ ಪಾತ್ರಗಳಾಗಿ ಹರಡಿಕೊಂಡಾಗ ಒಂದರೆಕ್ಷಣ ಮನಸು ವಾವ್ ಅಂದಿತು. . * * * ಕೃತಿಯ ಪ್ಲಾಟ್ ನಲ್ಲಿ ಬಹುಮುಖ್ಯವಾಗಿ ಧ್ವನಿಸುವ ಬ್ಯಾಡರ ಹುಡುಗ ಮಂಜ, ಲಿಂಗಾಯತರ ಹುಡುಗಿಯ ಪ್ರೇಮ ಪ್ರಕರಣ, ಸಮುದಾಯವನ್ನು ರೊಚ್ಚಿಗೆಬ್ಬಿಸುವುದು ಇಂಡಿಯನ್ ಸೋಶಿಯಲ್ ಪರಿಸ್ಥಿತಿಯಲ್ಲಿ ಸಹಜ. ಹುಂಬತನದ ಕ್ರಾಂತಿಯಿಂದ ಇದನ್ನು ಎದುರಿಸುವುದು ಅನಗತ್ಯ ಹಿಂಸೆಗೆ ಇಂಬುಕೊಟ್ಟಂತಾಗುತ್ತದೆ. ಬದಲಾಗಿ ಜೀವಪರ ಆಶಯಕ್ಕೆಆರೋಗ್ಯಕರ ಭವಿಷ್ಯ ಕಟ್ಟಿಕೊಡಲು ಕ್ರಾಂತಿಕಾರಕ ಪ್ರಜ್ಞೆಯಿಂದ ದಿಟ್ಟ ಹೆಜ್ಜೆ ಇಡಬೇಕಾಗುತ್ತದೆ. ನಿರ್ಣಾಯಕ ಹಂತದಲ್ಲಿ ಜೀವಪರ ನಿಲುವನ್ನು ತಾಳಬೇಕಾಗುತ್ತದೆ. ಸಾಮುದಾಯಿಕ ಜವಾಬ್ದಾರಿಯಿರುವುದು ಇಂಥ ಮನುಷ್ಯ ಸಹಜ ಪ್ರೇಮ ನಡೆಯಲ್ಲಿ. ಧ

ಬನ್ಸಾಲಿಯ ಬದ್‌ಬೂ ಗುಜರಾತ್ ಕೀ...

ಚಿತ್ರ: ಗೋಲಿಯೋಂಕಾ ರಾಸಲೀಲಾ: ರಾಮ್-ಲೀಲಾ ನಿರ್ದೇಶನ: ಸಂಜಯಲೀಲಾ ಬನ್ಸಾಲಿ. ಶೇಕ್ಸ್‌ಪಿಯರ್‌ನ ರೋಮಿಯೋ ಜ್ಯೂಲಿಯಟ್ ನಾಟಕದ ಅಡಾಪ್ಟೇಷನ್ ಸಿನಿಮಾ ಇತಿಹಾಸದಲ್ಲಿ  ಮುಗಿಯದ ಅಧ್ಯಾಯ. ರಾಮಲೀಲಾ ಎನ್ನುವ ನಾಟಕ ನಾರ್ತ್ ಇಂಡಿಯಾದಲ್ಲಿ ಜನಜನಿತ. ಇದು ಪಶ್ಚಿಮೀ ಕ್ಲಾಸಿಕ್ ಪ್ರಜ್ಞೆ ಮತ್ತು ರಾಮಾಯಣ ’ಮಹಾಕಾವ್ಯ’ವನ್ನು ಜನಮಾನಸದಲ್ಲಿ ಶಾಶ್ವತ ಬೀಜವಾಗಿ ಬಿತ್ತುವ ವ್ಯವಸ್ಥಿತ ಸಾಂಸ್ಕೃತಿಕ ರಾಜಕಾರಣದ ಒಂದು ಭಾಗ. ಸಂಜಯಲೀಲಾ ಬನ್ಸಾಲಿ ನಿರ್ದೇಶನದ ‘ಗೋಲಿಯೊಂಕಾ ರಾಸಲೀಲಾ: ರಾಮಲೀಲಾ‘ ಸಿನಿಮಾ ಈ ಎರಡೂ ರಾಜಕೀಯ ನಾಟಕಗಳ ಸಮ್ಮಿಶ್ರಣವನ್ನು ಬೇರೆಯದೇ ನೆಲೆಯಲ್ಲಿ ಕಾಣಲೆತ್ನಿಸಿದೆ. ನನ್ನ ಅಭಿಪ್ರಾಯದಲ್ಲಿ ಇದು ಇಂಡಿಯಾದ ಸಮಾಜೋ-ರಾಜಕೀಯ ಸಂದರ್ಭದಲ್ಲಿ ಬಹುಮುಖ್ಯವಾದ ಪ್ರತಿಕ್ರಿಯಾತ್ಮಕ ಧೋರಣೆಯ  ಸಿನಿಮಾ.  ಅಭಿನಂದನೆಗಳು ಬನ್ಸಾಲಿ.  ಗುಜರಾತ್ ನೆಲಸಂಸ್ಕೃತಿಯೊಳಗಿನ ಅಸಹಿಷ್ಣುತೆ, ವೈಷಮ್ಯ ಮತ್ತು  ಮನುಷ್ಯ ಮತ್ಸರದ ಭಯಾನಕ ಚಿತ್ರಣದೊಂದಿಗೆ ಆರಂಭಗೊಳ್ಳುವ ಸಿನಿಮಾ ಕುತೂಹಲಕಾರಿ. ಗುಜರಾತಿನ ಕೆಲ ಪ್ರದೇಶ, ಮುಖ್ಯವಾಗಿ ಅಲ್ಲಿನ ಕರಾವಳಿಯ ವೈಬ್ರೆನ್ಸಿ ಅಸಹಿಷ್ಣುತೆಯಿಂದ ಕೂಡಿರುವುದರ ಸಂಕೇತದಂತೆ ಚಿತ್ರದಲ್ಲಿ ಧ್ವನಿಸಿದೆ. ಬಂದೂಕು, ಬುಲ್ಲೆಟ್‌ ಎನ್ನುವ ಕೊಲ್ಲುವ ವಸ್ತುಗಳ ವ್ಯಾಪಾರ ನಡೆಸುವ ಅಲ್ಲಿನ ಮಾರುಕಟ್ಟೆ ಸಂಸ್ಕೃತಿ ಮತ್ತು ರಾಜಕೀಯ ಚಿಂತನೆ ಚಿತ್ರದ ವಸ್ತುವಿಗೆ ವಿಶಾಲ ತಳಹದಿಯ ಸಮಾಜೋ-ಆರ್ಥಿಕ ಅಡಿಪಾಯವನ್ನೂ ಒದಗಿಸಿದೆ. ಈ ಅಡಿಪಾಯದ

ಬಂದ್ ದರವಾಜಾ

ಸೂರ್ಯ ಕ್ಷಿತಿಜದ ಬಗಲಿನಿಂದ ಬಿಡಿಸಿಕೊಂಡ. ಮಗುವಿನ ಲಾಲನೆ ಪಾಲನೆ, ಆಹಾ... ಅದೊಂದು ಸ್ನಿಗ್ಧತೆ, ಲಾಲಿ, ಒಂದರ್ಥದ ಅಮಲು ಮತ್ತು ಬೆಳಕು. ನಾನು ಮುಖಮಂಟಪದಲ್ಲಿ ವಿರಾಜಮಾನನಾಗಿದ್ದೆ. ಮಗು ಬಾಗಿಲಿನಿಂದ ಇಣುಕಿತು.  ಮುಗುಳ್ನಕ್ಕು ಬಾ ಎಂದು ಸನ್ನೆ ಮಾಡಿದೆ. ಬಳಿ ಬಂದ ಮಗು ತೊಡೆಯೇರಿ ಕುಳಿತುಕೊಂಡಿತು. ಜೇಬಿನಿಂದ ಪೆನ್ನು ಜಗ್ಗೋದು, ಕಾಗದಕ್ಕೆ ಕೈಹಾಕೋದು.. ಹೀಗೆ ಅದರ ತಮಾಷೆಗಳು ಗರಿಗೆದರತೊಡಗಿದವು. ಮಗುವನ್ನು ಕೆಳಕ್ಕಿಳಿಸಿಬಿಟ್ಟೆ. ಪಾಪ ಅದು ಮೇಜಿನ ಒಂದು ಕಾಲು ಹಿಡಿದುಕೊಂಡು ನನ್ನನ್ನೇ ದಿಟ್ಟಿಸುತ್ತ ನಿಂತುಕೊಂಡಿತು. ಮನೆಯೊಳಕ್ಕೆ ಹೋಗಲಿಲ್ಲ. ಬಾಗಿಲು ತೆರೆದೇ ಇತ್ತು!... ಚಿಂವ್ ಚಿಂವ್ ಎನ್ನುತ್ತಾ ಗುಬ್ಬಿಯೊಂದು ಎದುರಿನ ಕಿಟಕಿ ಸರಳಿಗೆ ಹಾರಿ ಬಂತು. ಮಗುವಿಗೆ ಮನರಂಜನೆಯ ಹೊಸ ಆಟಿಗೆಯೊಂದು ಬಂದಂತೆ. ಖುಷಿಗೊಂಡ ಮಗು ಗುಬ್ಬಚ್ಚಿಯತ್ತ ಜೋರಾಗಿ ಕೈಬೀಸಿತು. ಗುಬ್ಬಚ್ಚಿ ಕೊಂಚವೂ ವಿಚಲಿತಗೊಳ್ಳಲಿಲ್ಲ. ಆಹಾ... ಗರಿಯಂಥ ಈ ಆಟಿಕೆ ವಸ್ತು ಇನ್ನು ನನ್ನ ಕೈಸೇರಿದಂತೆಯೇ ಎಂದುಕೊಂಡಿತು ಮಗು. ತನ್ನೆರಡೂ ಕೈಗಳನ್ನೆತ್ತಿ ಬ್ಬಾ ಬ್ಭಾ ಎಂದು ಗುಬ್ಬಚ್ಚಿಯನ್ನು ಹತ್ತಿರಕ್ಕೆ ಕರೆಯಲೆತ್ನಿಸಿತು. ಗುಬ್ಬಚ್ಚಿ ಚಿಂವ್ ಗುಟ್ಟುತ್ತ ಪುರ್ ಎಂದು ಹಾರಿ ಹೋಯಿತು. ನಿರಾಶಗೊಂಡ ಮಗು ಅಳತೊಡಗಿತು. ಬಾಗಿಲಿನತ್ತ ತಿರುಗಿಯೂ ನೋಡಲಿಲ್ಲ. ಬಾಗಿಲು ತೆರೆದೇ ಇತ್ತು!... * * * ಹಲ್ವಾದ ತಾಜಾ ತಾಜಾ ಸಿಹಿಗಾಳಿ ತೇಲಿ ಬಂತು. ಮಗುವಿನ ಮುಖ ಅರಳತೊಡಗಿತು

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ

'ಅನಭಿಜ್ಞ ಶಾಕುಂತಲ': ನೆನಪು ಮರೆವಿನಾಟ

 ಜೀವನವೇ ಒಂದು ನಾಟಕವೆಂದಾದರೆ. ಸಂಬಂಧ ಅನ್ನೋದು ಕಟ್ಟಿಕೊಂಡ ಆಟ. ಅಂದರೆ ನಾಟಕದಂತೆ ಬದುಕು ಕೂಡ ಆಟ ಕಟ್ಟುವ ಕ್ರಿಯೆ. ಇಲ್ಲಿ ಗುರಿ ಎಂದರೆ ಸುಖದ ಅಥವಾ ಸಾರ್ಥಕತೆಯ ದಡ ಸೇರುವುದು. ಈ ಆಟದ ಒಂದು ಹಂತದಲ್ಲಿ ಕಷ್ಟದ ಅಡವಿ ಸೇರುವುದೂ ಇದೆ! 'ಆಡಾಡ್ತ ಅಡವಿ ಸೇರುವುದು' ಅಂತಾರಲ್ಲ ಹಾಗೆ. ಅಡವಿ ಅಂದರೆ ಇಲ್ಲಿ ಸಂಕೀರ್ಣತೆ, ಸಂಕಷ್ಟ ಅವಘಡ, ಸಂದಿಗ್ಧತೆ ಎಂದು ಭಾವಿಸಿಕೊಳ್ಳಬಹುದು. ಬದುಕಿನ ದಾರಿಯಲ್ಲಿ ಒಮ್ಮೆ ಈ 'ಅಡವಿ' ಎದುರಾಗೇ ಆಗುತ್ತದೆ ಎನ್ನುವುದು ವಿಧಿಲಿಖಿತವೇ? ಗೊತ್ತಿಲ್ಲ. ಪ್ರೀತಿ-ಪ್ರೇಮ-ಕಾಮ ಎನ್ನುವ ಬದುಕಿನ ಒಟ್ಟಾರೆ ಆಟ- ಕೂಟದಲ್ಲಿ ಪಡಕೊಳ್ಳುವುದೆಲ್ಲ ಜೀವಕಾರುಣ್ಯವಷ್ಟೇ ಅಲ್ಲ. ಸಂಕಷ್ಟ ಮತ್ತು ಸಂದಿಗ್ಧತೆಯೂ ಜತೆಯಲ್ಲಿರುತ್ತದೆ ಎನ್ನುವುದು ಸಹಜ ಮನೋಧರ್ಮ.  ಬದುಕಿನ ಆಟಕ್ಕೆ ತೆರಕೊಂಡವರಲ್ಲಿ ಹಲವರು ಅನುಭವಿಸಿದ ಮಧುರ ಘಳಿಗೆಗಳನ್ನು ಕಡೆತನಕ ನೆನಪಿಟ್ಟುಕೊಳ್ಳುತ್ತಾರೆ. ಕೆಲವರು ಮರೆತೇ ಬಿಡುತ್ತಾರೆ!?..  ಕಾಳಿದಾಸನ ಮಹಾಕಾವ್ಯ ಶಾಕುಂತಲೆಯಲ್ಲಿ ಈ ಬದುಕು, ಮನುಷ್ಯ ಪ್ರೀತಿ ಪಯಣದ ನೆನಪು ಮತ್ತು ಮರೆವಿನಾಟ ಮನಮಿಡಿಯುವಂತೆ ಚಿತ್ರಣಗೊಂಡಿದೆ. ಈ ಕಾವ್ಯದಲ್ಲಿ ಎಲ್ಲವನ್ನು ವಿಧಿಯೇ ನಿರ್ಧರಿಸಿದಂತೆನಿಸುತ್ತದೆ. ಫೇಟಲಿಸಂ ವಾದಕ್ಕೆ ಪೂರಕವಾದ ಚಿಂತನೆ ಇದೆನ್ನಬಹುದು. ಆಧುನಿಕ ಯುಗದ ಶೇಕ್ಸಪಿಯರ್ ನ ಹಲವು ನಾಟಕಗಳಲ್ಲಿಯೂ ಈ ಫೇಟಲಿಸಂ ಪ್ರಧಾನ ಪಾತ್ರದಂತೆ ವರ್ತಿಸುವುದನ್ನು ಗಮನಿಸಬಹುದು. *

ಜನತಾ ಪರಿವಾರದ ಸಿದ್ದರಾಮಯ್ಯ ಈಗ ಕಾಂಗ್ರೆಸ್ ಸಿಎಂ...

ಸಿದ್ದರಾಮಯ್ಯ ಈಗ ಕಾಂಗ್ರೆಸ್ ಸಿಎಂ. ಹಿಂದುಳಿದ ವರ್ಗಕ್ಕೆ ಸೇರುವ ಗೌಡಕುರುಬ ಜನಾಂಗದಿಂದ ಉದಯಿಸಿದ ನಾಯಕ. ಜನತಾ ಪರಿವಾರ ಇವರ ರಾಜಕೀಯ ತಾಯಿ ಬೇರು. 1983ರಿಂದ 2006ರವರೆಗೆ  23 ವರ್ಷಗಳ ಕಾಲ ಪ್ರಭಲ ಕಾಂಗ್ರೆಸ್ ವಿರೋಧಿ ನೆಲೆಯಿಂದಲೇ ರಾಜಕೀಯದ ಕೆರಿಯರ್ ರೂಪಿಸಿಕೊಂಡು ಬಂದವರು.   ಪಕ್ಷದ ಉನ್ನತ ಪದಾಧಿಕಾರಿಯಾಗಿ, ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ (ಎರಡು ಬಾರಿ) ಅಧಿಕಾರದ ಎಲ್ಲ ಮೇಲ್ ಸ್ತರಗಳನ್ನು ಏರಿದ್ದು ಜನತಾ ಪರಿವಾರದಲ್ಲಿದ್ದಾಗಲೇ. ಆಗ ಬಾಕಿ ಉಳಿದದ್ದು ಮುಖ್ಯಮಂತ್ರಿ ಪಟ್ಟ. ಅದನ್ನು ಕಾಂಗ್ರೆಸ್ ನಲ್ಲಿದ್ದುಕೊಂಡು ಸಾಧ್ಯವಾಗಿಸಿಕೊಂಡಿದ್ದಾರೆ. ಸತ್ಯದ ಹೆಸರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದಾರೆ.  ಸತ್ಯವೆಂದರೆ ಮುಖ್ಯಮಂತ್ರಿ ಆಗುವ ಒಂದಂಶದ ಕಾರ್ಯಕ್ರಮ ಇಟ್ಟುಕೊಂಡೇ ಅವರು ಕಾಂಗ್ರೆಸ್ ಸೇರಿದ್ದು. ಅಲ್ಪ ಅವಧಿಯಲ್ಲೇ (7ವರ್ಷ) ಅದು ಸಾಕಾರಗೊಂಡಿದ್ದು ಗಮನಾರ್ಹ ಅಂಶ. ಇದನ್ನು ರಾಜಕೀಯ ಚತುರತೆ ಅನ್ನಬೇಕೋ, ಅದೃಷ್ಟ ಅನ್ನಬೇಕೋ, ಪಟ್ಟದ ಹೋರಾಟಗಾರನೊಬ್ಬನಿಗೆ (ಮುಖ್ಯಮಂತ್ರಿ ಪಟ್ಟಕ್ಕೆ) ಸಂದ ಜಯ ಅನ್ನಬೇಕೋ?... ಏನೇ ಭಾವಿಸಿಕೊಂಡರೂ ಸಿದ್ದರಾಮಯ್ಯ ದಕ್ಷ ಆಡಳಿತಗಾರ, ಮುಖ್ಯಮಂತ್ರಿ ಪಟ್ಟಕ್ಕೆ ಈ ಸಂದರ್ಭದ ಸೂಕ್ತ ಅಭ್ಯರ್ಥಿ ಎನ್ನುವುದು ಸತ್ಯ.  ಸಿದ್ದರಾಮಯ್ಯ 2006ರಿಂದ ಈಚೆಗಷ್ಟೇ ಪಕ್ಷ ಸೇರಿಕೊಂಡು, ಅತ್ಯಂತ ಕಡಿಮೆ ಅವಧಿಯಲ್ಲಿ ಕಾಂಗ್ರೆಸ್ ನಿಂದ ಸಿಎಂ ಪಟ್ಟ ಏರಿದ್ದು ರಾಜ್ಯದ ಮಟ್ಟಿಗೊಂ