ವಿಷಯಕ್ಕೆ ಹೋಗಿ

ಬಂದ್ ದರವಾಜಾ



ಸೂರ್ಯ ಕ್ಷಿತಿಜದ ಬಗಲಿನಿಂದ ಬಿಡಿಸಿಕೊಂಡ. ಮಗುವಿನ ಲಾಲನೆ ಪಾಲನೆ, ಆಹಾ... ಅದೊಂದು ಸ್ನಿಗ್ಧತೆ, ಲಾಲಿ, ಒಂದರ್ಥದ ಅಮಲು ಮತ್ತು ಬೆಳಕು. ನಾನು ಮುಖಮಂಟಪದಲ್ಲಿ ವಿರಾಜಮಾನನಾಗಿದ್ದೆ. ಮಗು ಬಾಗಿಲಿನಿಂದ ಇಣುಕಿತು.  ಮುಗುಳ್ನಕ್ಕು ಬಾ ಎಂದು ಸನ್ನೆ ಮಾಡಿದೆ. ಬಳಿ ಬಂದ ಮಗು ತೊಡೆಯೇರಿ ಕುಳಿತುಕೊಂಡಿತು. ಜೇಬಿನಿಂದ ಪೆನ್ನು ಜಗ್ಗೋದು, ಕಾಗದಕ್ಕೆ ಕೈಹಾಕೋದು.. ಹೀಗೆ ಅದರ ತಮಾಷೆಗಳು ಗರಿಗೆದರತೊಡಗಿದವು. ಮಗುವನ್ನು ಕೆಳಕ್ಕಿಳಿಸಿಬಿಟ್ಟೆ. ಪಾಪ ಅದು ಮೇಜಿನ ಒಂದು ಕಾಲು ಹಿಡಿದುಕೊಂಡು ನನ್ನನ್ನೇ ದಿಟ್ಟಿಸುತ್ತ ನಿಂತುಕೊಂಡಿತು. ಮನೆಯೊಳಕ್ಕೆ ಹೋಗಲಿಲ್ಲ. ಬಾಗಿಲು ತೆರೆದೇ ಇತ್ತು!...
ಚಿಂವ್ ಚಿಂವ್ ಎನ್ನುತ್ತಾ ಗುಬ್ಬಿಯೊಂದು ಎದುರಿನ ಕಿಟಕಿ ಸರಳಿಗೆ ಹಾರಿ ಬಂತು. ಮಗುವಿಗೆ ಮನರಂಜನೆಯ ಹೊಸ ಆಟಿಗೆಯೊಂದು ಬಂದಂತೆ. ಖುಷಿಗೊಂಡ ಮಗು ಗುಬ್ಬಚ್ಚಿಯತ್ತ ಜೋರಾಗಿ ಕೈಬೀಸಿತು. ಗುಬ್ಬಚ್ಚಿ ಕೊಂಚವೂ ವಿಚಲಿತಗೊಳ್ಳಲಿಲ್ಲ. ಆಹಾ... ಗರಿಯಂಥ ಈ ಆಟಿಕೆ ವಸ್ತು ಇನ್ನು ನನ್ನ ಕೈಸೇರಿದಂತೆಯೇ ಎಂದುಕೊಂಡಿತು ಮಗು. ತನ್ನೆರಡೂ ಕೈಗಳನ್ನೆತ್ತಿ ಬ್ಬಾ ಬ್ಭಾ ಎಂದು ಗುಬ್ಬಚ್ಚಿಯನ್ನು ಹತ್ತಿರಕ್ಕೆ ಕರೆಯಲೆತ್ನಿಸಿತು. ಗುಬ್ಬಚ್ಚಿ ಚಿಂವ್ ಗುಟ್ಟುತ್ತ ಪುರ್ ಎಂದು ಹಾರಿ ಹೋಯಿತು. ನಿರಾಶಗೊಂಡ ಮಗು ಅಳತೊಡಗಿತು. ಬಾಗಿಲಿನತ್ತ ತಿರುಗಿಯೂ ನೋಡಲಿಲ್ಲ. ಬಾಗಿಲು ತೆರೆದೇ ಇತ್ತು!...
* * *
ಹಲ್ವಾದ ತಾಜಾ ತಾಜಾ ಸಿಹಿಗಾಳಿ ತೇಲಿ ಬಂತು. ಮಗುವಿನ ಮುಖ ಅರಳತೊಡಗಿತು. ಮಿಠಾಯಿ ಗಾಡಿಯವ ಹತ್ತಿರದ ಹಾದಿಯಲ್ಲಿ ಸಾಗುತ್ತಿದ್ದ. ಮಗು ವಿನಯದ ಕಂಗಳಲ್ಲಿ ನನ್ನನ್ನೇ ನೋಡತೊಗಿತು. ಮಿಠಾಯಿ ಗಾಡಿಯವ ದೂರ ದೂರ ಸಾಗುತ್ತಿದ್ದಂತೆ ಮಗುವಿನ ವಿನಯದ ಕಂಗಳು ರೋಷಕ್ಕೆ ತಿರುಗತೊಡಗಿದವು. ಮಿಠಾಯಿ ಗಾಡಿ ಮರೆಯಾಗುತ್ತಿದ್ದಂತೆ ಮಗುವಿನ ರೋಷದ ಕಂಗಳು ಸಿಡಿಯತೊಡಗಿದವು. ಮುಖದಲ್ಲಿ ಗಟ್ಟಿ ದನಿಯ ಬೇಡಿಕೆಯೊಂದು ಮಾರ್ದನಿಸತೊಡಗಿತು.
ಆದರೆ, ಹ್ಞೂ ಹ್ಞೂ  ನಾನು ಹಾದಿ ಬೀದಿಯ ಮಿಠಾಯಿಯನ್ನು ಮಕ್ಕಳಿಗೆ ಕೊಡೊದೇ ಇಲ್ಲ.  ಹೀಗಾಗಿ ಮಗುವಿನ ನಿವೇದನೆ ನನ್ನ ಮೇಲೆ ಪರಿಣಾಮ ಬೀರಲಿಲ್ಲ. ಮುಂದಿನದನ್ನು ಯೋಚಿಸುತ್ತಾ ಮತ್ತಷ್ಟು ವಿಚಲಿತನಾದೆ. ಈ ಬಗ್ಗೆ ಅಮ್ಮನ ನ್ಯಾಯಾಲಯದಲ್ಲಿ ಅಪೀಲು ಮಾಡುವ ಅವಶ್ಯಕತೆಯ ಬಗ್ಗೆ ಮಗು ಯೋಚಿಸಿತೋ ಏನೋ ನಾನರಿಯೆ. ಸಾಮಾನ್ಯವಾಗಿ ಇಂಥ ಸಂದರ್ಭದಲ್ಲೆಲ್ಲ ಮಕ್ಕಳು ಅಮ್ಮನ ಮುಂದೆ ಅಪೀಲು ಮಾಡುತ್ತವೆ. ಮಗು ಬಹುಶಃ ಫಿರ್ಯಾದು ನೀಡುವುದನ್ನು ಮುಂದೂಡಿರಬಹುದೆಂದುಕೊಂಡೆ. ಆದರೆ, ಅದು ಬಾಗಿಲಿನತ್ತ ಸಾಗುವ ಗೋಜಿಗೇ ಹೋಗಲಿಲ್ಲ. ಬಾಗಿಲು ತೆರೆದೇ ಇತ್ತು!...
* * *
ಅಳುವ ಕಂದನ ಕಣ್ಣೊರೆಸುವ ಯೋಚನೆಯಿಂದ ಫೌಂಟೆನ್ ಪೆನ್  ಅನ್ನು ಮಗುವಿನ ಕೈಗಿತ್ತೆ.  ಸಂಭ್ರಮಗೊಂಡಿತು. ಜಗತ್ತಿನ ಸುಖದ ಗಣಿಯೇ ಕೈಸೇರಿತೇನೋ! ಅದರ ಇಂದ್ರಿಯಗಳೆಲ್ಲ ಹೊಸ ಸಮಸ್ಯೆಯ ಪರಿಹಾರಕ್ಕಾಗಿ ಸಾಂಘಿಕ ಯತ್ನಕ್ಕಿಳಿದಂತೆನಿಸಿತು. ಅಚಾನಕ್ ಬೀಸಿದ ಜೋರು ಗಾಳಿಗೆ ಬಾಗಿಲು ಧಡ್ ಅಂತ  ಮುಚ್ಚಿಕೊಂಡ ಭಾರಿ ಸದ್ದೊಂದು ಮಗುವಿನ ಕಿವಿಗಪ್ಪಳಿಸಿತು. ಬೆಚ್ಚಿದ ಮಗು ಬಾಗಿಲಿನೆಡೆ ಗಾಬರಿಯಿಂದ ನೋಡಿತು. ಅದರ ಸಂಭ್ರಮದ ಕ್ಷಣಗಳು ಕ್ಷಣಾರ್ಧದಲ್ಲೇ ಕಳೆದುಹೋದವು.
ಅದೀಗ ಫೌಂಟೆನ್ ಪೆನ್  ಅನ್ನು ಎಸೆದು ಜೋರಾಗಿ ಅಳುತ್ತ, ಗಾಬರಿಯಿಂದ ಬಾಗಿಲಿನತ್ತ ಧಾವಿಸಿತು.  ಯಾಕೆಂದರೆ ಬಾಗಿಲು ಮುಚ್ಚಿಕೊಂಡಿತ್ತು!
__________________________________________________________________________________
* ಮಗುವಿನ ತಾಯಿಪ್ರೇಮ ಬಯಕೆಯ ತೀವ್ರತೆಯನ್ನು ಧ್ವನಿಸುವ ಮುನ್ಶಿ ಪ್ರೇಮಚಂದರ ’ಬಂದ್ ದರವಾಜಾ’ ಸಣ್ಣ ಕಥೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ