ಕವಿ ಜಿ.ಎಸ್. ಶಿವರುದ್ರಪ್ಪ ಕಾವ್ಯ ಕಟ್ಟಿದರು. ಅದನ್ನು ಎದೆ ತುಂಬಿ ಹಾಡಿದವರೆಷ್ಟೋ. ಅವರು ಪ್ರೇಮ, ಪ್ರೀತಿಯ ಮಾತು ಹೇಳಿದರು. ಅದೆಷ್ಟೋ ಮಾನವ ಪ್ರೇಮಿಗಳು ಎದೆಗಿಳಿಸಿಕೊಂಡರು. ಕಾವ್ಯ, ಹಾಡು, ಪ್ರೇಮ ... ನಿರಂತರ. ಇವು ಎಂದೂ ನಿಲ್ಲದ ಧಾರೆಗಳು. ಕವಿತೆಗೆ ಸಾವಿಲ್ಲ, ಕವಿಗೂ...
* * *
ಬದುಕಿನೊಟ್ಟಿಗಿನ ಸಂಬಂಧವನ್ನು ಪದ್ಯ, ಗದ್ಯಗಳಲ್ಲಿ ಹಿಡಿದಿಡುವ ಯತ್ನ ಮನುಷ್ಯ ಸೂಕ್ಷ್ಮದ ಸಹಜ ನಡೆ. ಅವನಿಟ್ಟ ಹೆಜ್ಜೆ, ಆಡಿದ ನುಡಿ, ಕನಸಿದ ಭಾವ ಎಲ್ಲದರ ಪಡಿನೆರಳನ್ನು ಪದ ಪದಗಳಲ್ಲೂ ವಿಸ್ಮಯದಂತೆ ಮೂಡಿಸುವುದು ಕಾವ್ಯಕ್ಕೆ ಸಾಧ್ಯವಿದೆ. ಸಾಲು, ಸಾಲುಗಳ ನಡುವಿನುಸಿರು, ಪಸೆ ಮತ್ತು ಎಲ್ಲ ಎಲ್ಲದರ ಗುಟ್ಟನ್ನು ಒಡಲಲ್ಲಿಟ್ಟುಕೊಂಡ ಕುತೂಹಲ ಧಾರೆಯಂತೆ ಹರಿದು ನಮ್ಮೊಳಗೂ ಇಳಿದಾಗ ಆಗುವ ಅನುಭೂತಿ ...
ಭಾವುಕ ಜಗತ್ತನ್ನು ಕಲಾತ್ಮಕಗೊಳಿಸಿದ ಕವಿ ಜಿಎಸ್ಎಸ್ ಜೀವಪ್ರೀತಿಯನ್ನೇ ನೆಚ್ಚಿಕೊಂಡಿದ್ದರು. ಅಂತಃಕರಣ, ಸಹಜತೆ, ಸರಳತೆ ಮತ್ತು ಮುಗ್ಧತೆಯನ್ನು ಕಾವ್ಯಕ್ಕಿಳಿಸಿ ಮಾನವ ಪ್ರೇಮದ ಹೊನಲಾಗಿಸಿದರು.
ಕಾವ್ಯ ಒಳಗಿನದೆಲ್ಲವನು ಬಟಾಬಯಲುಗೊಳಿಸಿಕೊಳ್ಳುವ ಕ್ರಿಯೆಯೂ ಹೌದು. ತಮ್ಮ ಮನದಾಳದ ಮಾನವ ಪ್ರೇಮವನ್ನು ಅವರೆಂದೂ ಬಚ್ಚಿಟ್ಟುಕೊಂಡವರಲ್ಲ. ಧಾರೆ ಎರೆದವರು. 'ಪ್ರೀತಿ ಇಲ್ಲದ ಮೇಲೆ...' ಇಲ್ಲಾವುದೂ, ಏನೂ ಇಲ್ಲ ಎನ್ನುವುದರಲ್ಲಿ ದೊಡ್ಡ ನಂಬಿಕೆ ಇಟ್ಟುಕೊಂಡೇ ಮೊನ್ನೆ ಹೊರಟು ಹೋದರು. ಕಾಣದ ಕಡಲಿನತ್ತ...
* * *
ವಿಷಾದವೆಂದರೆ ಅಷ್ಟು ಸಹಜ ಮತ್ತು ಸರಳತೆಯ ಮನುಷ್ಯನೊಬ್ಬ ಬದುಕಿನ ಜಾತ್ರೆ ಮುಗಿಸಿದಾಗ 'ಸಾವನ್ನು ಸಂಭ್ರಮಿಸುವ ರೀತಿಯಲ್ಲಿ' ಆತನ ಅಂತ್ಯಸಂಸ್ಕಾರ ನಡೆದದ್ದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಈ ನಡೆಗೆ ಸೂಕ್ಷ್ಮ ಸಂವೇದನೆಯ ಕಲಾವಿದರು, ಬರಹಗಾರರು ಮತ್ತು ಬುದ್ಧಿಜೀವಿಗಳಿಂದ ದೊಡ್ಡ ವಿರೋಧವೇ ವ್ಯಕ್ತವಾಗಿದೆ. ಕಲಾಕ್ಷೇತ್ರ, ವಿಶ್ವವಿದ್ಯಾಲಯ ಇವೆಲ್ಲ ಯಾರನ್ನೂ ದೊಡ್ಡವರು, ಸಣ್ಣವರು ಎಂದು ನಿರ್ಧರಿಸುವ ತಾಣಗಳಲ್ಲ. ಲಿಖಿತ ಸಂವಿಧಾನ ಹೊಂದಿರುವ ಈ ದೇಶದ ಸರ್ಕಾರಗಳಿಗಂತೂ ಎಲ್ಲ ಸರಿ ಸಮಾನರು. ಯಾರೂ ಕೀಳಲ್ಲ, ಯಾರೂ ಮೇಲಲ್ಲ. ಧರ್ಮ, ದೈವತ್ವದ ನಂಬಿಕೆಗಳ ಪ್ರಕಾರವೂ ಮನುಷ್ಯ ಅತೀತನಲ್ಲ. ಮನುಷ್ಯ ದೇವರಲ್ಲ.. ಕವಿ ಇದಕ್ಕೆ ಹೊರತಲ್ಲ.
ಸಾವು ಎಂದರೆ ಅದು ಸಾವೇ. ಕವಿಯಾಗಿದ್ದವ ಸತ್ತರೂ, ಹುಲು ಮಾನವ ಸತ್ತರೂ...
ಲೆಬನಾನಿನ ದಾರ್ಶನಿಕ ಕವಿ ಖಲೀಲ್ ಗಿಬ್ರಾನ್ ಸಾವಿನ ಬಗ್ಗೆ ಹೇಳುವ ಈ ಅರ್ಥಪೂರ್ಣ ಮಾತುಗಳನ್ನು ಪುನರುಚ್ಛರಿಸಬೇಕೆನಿಸಿತು.
ನೀವು ಸಾವಿನ ರಹಸ್ಯ ತಿಳಿಯಲು ಸಂಶೋಧನೆ ನಡೆಸಬಹುದು.
ಆದರೆ, ಆತ್ಮಶೋಧನೆ ಇಲ್ಲದೇ ಮೃತ್ಯುವಿನ ದರುಶನ ಹೇಗಾದೀತು?
ಇರುಳಿಗೆ ಬದ್ಧ ಗೂಬೆ ಕಣ್ಣುಗಳು ಹಗಲು ತೆರಕೊಳ್ಳುವುದೇ ಇಲ್ಲ,
ಬೆಳಕಿನ ಬಣ್ಣಗಳ ರಹಸ್ಯವ ಅದು ಹೇಗೆ ಪ್ರಕಟಿಸೀತು...!
ನಿಮಗೆ ಮೃತ್ಯುವಿನ ನಿಜಸ್ವರೂಪದ ದರುಶನವಾಗಬೇಕೆ?
ಹಾಗಿದ್ದರೆ ತೆರೆದುಕೊಳ್ಳಲಿ ನಿಮ್ಮ ಹೃದಯ ಅನಂತದವರೆಗೆ,
ಅದು ಲೀನವಾಗಲಿ ಬದುಕಿನ ಶರೀರದೊಳಗೆ...
ಏಕೆಂದರೆ ನದಿ ಮತ್ತು ಸಾಗರದಂತೆ, ಬದುಕು ಮತ್ತು ಸಾವು ಅಭಿನ್ನ.
ನಿಮ್ಮ ಆಸೆ, ಆಕಾಂಕ್ಷೆಗಳ ಆಳದಲ್ಲೇ ಪರಲೋಕದ ಮೌನ ಚೇತನ ಮಿಸುಕಾಡುತ್ತಿರುತ್ತದೆ.
ಮತ್ತು ನಿಮ್ಮ ಹೃದಯ, ಮಂಜಿನೊಳಗೆ ಹೂತ ಬೀಜದಂತೆ
ವಸಂತದ ಕನಸು ಕಾಣುತ್ತಿರುತ್ತದೆ.
ಇಂಥ ಕನಸುಗಳ ಮೇಲೆ ನಂಬಿಕೆಯಿಡಿ;
ಏಕೆಂದರೆ, ಇಲ್ಲೇ ಇದೆ ದ್ವಾರ,
ಅನಂತದೆಡೆಗೆ ತೆರಕೊಳ್ಳುವ ಹಾದಿ ಸೇರಲು!
ಸಾಯುವುದರರ್ಥ ಗಾಳಿಯಲ್ಲಿ ಲೀನವಾಗುವುದು, ಬಿಸಿಲಲ್ಲಿ ಕರಗುವುದು ಎಂದೇ ಅಲ್ಲವೇ?
ನಿಮ್ಮ ಪ್ರಾಣವಾಯುವಿಗೆ ಅಶಾಂತ ಬಿರುಗಾಳಿಯಿಂದ ಮುಕ್ತಿ ಸಿಗುವುದು,
ಮತ್ತು ಎತ್ತರೆತ್ತರಕ್ಕೆ ಏರಿ ವಿಸ್ತಾರ ಪಡಕೊಳ್ಳುತ್ತ ಮುಕ್ತಿಮಾರ್ಗ ಹಿಡಿದು
ಸೃಷ್ಟಿಕರ್ತನ ಸೇರಿಕೊಳ್ಳುವುದು...
ಇಷ್ಟೇ ಅಲ್ಲವೇ ಉಸಿರು ಸ್ತಬ್ದವಾಗುವುದರರ್ಥ?
ನೀವು ನಿಜವಾಗಲೂ ಹಾಡೋದು ಪ್ರಶಾಂತ ನದಿಯ ಜಲ ಕುಡಿದಾಗಲೇ !
ಶಿಖರ-ಪರ್ವತಗಳ ತುದಿ ತಲುಪಿದ ಮೇಲೇ ನಿಜವಾದ ಆರೋಹಣ ಶುರುವಾಗೋದು...
-ದಿಲ್
ಮೂಲ: ಖಲೀಲ್ ಗಿಬ್ರಾನ್.
* * *
ಬದುಕಿನೊಟ್ಟಿಗಿನ ಸಂಬಂಧವನ್ನು ಪದ್ಯ, ಗದ್ಯಗಳಲ್ಲಿ ಹಿಡಿದಿಡುವ ಯತ್ನ ಮನುಷ್ಯ ಸೂಕ್ಷ್ಮದ ಸಹಜ ನಡೆ. ಅವನಿಟ್ಟ ಹೆಜ್ಜೆ, ಆಡಿದ ನುಡಿ, ಕನಸಿದ ಭಾವ ಎಲ್ಲದರ ಪಡಿನೆರಳನ್ನು ಪದ ಪದಗಳಲ್ಲೂ ವಿಸ್ಮಯದಂತೆ ಮೂಡಿಸುವುದು ಕಾವ್ಯಕ್ಕೆ ಸಾಧ್ಯವಿದೆ. ಸಾಲು, ಸಾಲುಗಳ ನಡುವಿನುಸಿರು, ಪಸೆ ಮತ್ತು ಎಲ್ಲ ಎಲ್ಲದರ ಗುಟ್ಟನ್ನು ಒಡಲಲ್ಲಿಟ್ಟುಕೊಂಡ ಕುತೂಹಲ ಧಾರೆಯಂತೆ ಹರಿದು ನಮ್ಮೊಳಗೂ ಇಳಿದಾಗ ಆಗುವ ಅನುಭೂತಿ ...
ಭಾವುಕ ಜಗತ್ತನ್ನು ಕಲಾತ್ಮಕಗೊಳಿಸಿದ ಕವಿ ಜಿಎಸ್ಎಸ್ ಜೀವಪ್ರೀತಿಯನ್ನೇ ನೆಚ್ಚಿಕೊಂಡಿದ್ದರು. ಅಂತಃಕರಣ, ಸಹಜತೆ, ಸರಳತೆ ಮತ್ತು ಮುಗ್ಧತೆಯನ್ನು ಕಾವ್ಯಕ್ಕಿಳಿಸಿ ಮಾನವ ಪ್ರೇಮದ ಹೊನಲಾಗಿಸಿದರು.
ಕಾವ್ಯ ಒಳಗಿನದೆಲ್ಲವನು ಬಟಾಬಯಲುಗೊಳಿಸಿಕೊಳ್ಳುವ ಕ್ರಿಯೆಯೂ ಹೌದು. ತಮ್ಮ ಮನದಾಳದ ಮಾನವ ಪ್ರೇಮವನ್ನು ಅವರೆಂದೂ ಬಚ್ಚಿಟ್ಟುಕೊಂಡವರಲ್ಲ. ಧಾರೆ ಎರೆದವರು. 'ಪ್ರೀತಿ ಇಲ್ಲದ ಮೇಲೆ...' ಇಲ್ಲಾವುದೂ, ಏನೂ ಇಲ್ಲ ಎನ್ನುವುದರಲ್ಲಿ ದೊಡ್ಡ ನಂಬಿಕೆ ಇಟ್ಟುಕೊಂಡೇ ಮೊನ್ನೆ ಹೊರಟು ಹೋದರು. ಕಾಣದ ಕಡಲಿನತ್ತ...
* * *
ವಿಷಾದವೆಂದರೆ ಅಷ್ಟು ಸಹಜ ಮತ್ತು ಸರಳತೆಯ ಮನುಷ್ಯನೊಬ್ಬ ಬದುಕಿನ ಜಾತ್ರೆ ಮುಗಿಸಿದಾಗ 'ಸಾವನ್ನು ಸಂಭ್ರಮಿಸುವ ರೀತಿಯಲ್ಲಿ' ಆತನ ಅಂತ್ಯಸಂಸ್ಕಾರ ನಡೆದದ್ದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಈ ನಡೆಗೆ ಸೂಕ್ಷ್ಮ ಸಂವೇದನೆಯ ಕಲಾವಿದರು, ಬರಹಗಾರರು ಮತ್ತು ಬುದ್ಧಿಜೀವಿಗಳಿಂದ ದೊಡ್ಡ ವಿರೋಧವೇ ವ್ಯಕ್ತವಾಗಿದೆ. ಕಲಾಕ್ಷೇತ್ರ, ವಿಶ್ವವಿದ್ಯಾಲಯ ಇವೆಲ್ಲ ಯಾರನ್ನೂ ದೊಡ್ಡವರು, ಸಣ್ಣವರು ಎಂದು ನಿರ್ಧರಿಸುವ ತಾಣಗಳಲ್ಲ. ಲಿಖಿತ ಸಂವಿಧಾನ ಹೊಂದಿರುವ ಈ ದೇಶದ ಸರ್ಕಾರಗಳಿಗಂತೂ ಎಲ್ಲ ಸರಿ ಸಮಾನರು. ಯಾರೂ ಕೀಳಲ್ಲ, ಯಾರೂ ಮೇಲಲ್ಲ. ಧರ್ಮ, ದೈವತ್ವದ ನಂಬಿಕೆಗಳ ಪ್ರಕಾರವೂ ಮನುಷ್ಯ ಅತೀತನಲ್ಲ. ಮನುಷ್ಯ ದೇವರಲ್ಲ.. ಕವಿ ಇದಕ್ಕೆ ಹೊರತಲ್ಲ.
ಸಾವು ಎಂದರೆ ಅದು ಸಾವೇ. ಕವಿಯಾಗಿದ್ದವ ಸತ್ತರೂ, ಹುಲು ಮಾನವ ಸತ್ತರೂ...
ಲೆಬನಾನಿನ ದಾರ್ಶನಿಕ ಕವಿ ಖಲೀಲ್ ಗಿಬ್ರಾನ್ ಸಾವಿನ ಬಗ್ಗೆ ಹೇಳುವ ಈ ಅರ್ಥಪೂರ್ಣ ಮಾತುಗಳನ್ನು ಪುನರುಚ್ಛರಿಸಬೇಕೆನಿಸಿತು.
ನೀವು ಸಾವಿನ ರಹಸ್ಯ ತಿಳಿಯಲು ಸಂಶೋಧನೆ ನಡೆಸಬಹುದು.
ಆದರೆ, ಆತ್ಮಶೋಧನೆ ಇಲ್ಲದೇ ಮೃತ್ಯುವಿನ ದರುಶನ ಹೇಗಾದೀತು?
ಇರುಳಿಗೆ ಬದ್ಧ ಗೂಬೆ ಕಣ್ಣುಗಳು ಹಗಲು ತೆರಕೊಳ್ಳುವುದೇ ಇಲ್ಲ,
ಬೆಳಕಿನ ಬಣ್ಣಗಳ ರಹಸ್ಯವ ಅದು ಹೇಗೆ ಪ್ರಕಟಿಸೀತು...!
ನಿಮಗೆ ಮೃತ್ಯುವಿನ ನಿಜಸ್ವರೂಪದ ದರುಶನವಾಗಬೇಕೆ?
ಹಾಗಿದ್ದರೆ ತೆರೆದುಕೊಳ್ಳಲಿ ನಿಮ್ಮ ಹೃದಯ ಅನಂತದವರೆಗೆ,
ಅದು ಲೀನವಾಗಲಿ ಬದುಕಿನ ಶರೀರದೊಳಗೆ...
ಏಕೆಂದರೆ ನದಿ ಮತ್ತು ಸಾಗರದಂತೆ, ಬದುಕು ಮತ್ತು ಸಾವು ಅಭಿನ್ನ.
ನಿಮ್ಮ ಆಸೆ, ಆಕಾಂಕ್ಷೆಗಳ ಆಳದಲ್ಲೇ ಪರಲೋಕದ ಮೌನ ಚೇತನ ಮಿಸುಕಾಡುತ್ತಿರುತ್ತದೆ.
ಮತ್ತು ನಿಮ್ಮ ಹೃದಯ, ಮಂಜಿನೊಳಗೆ ಹೂತ ಬೀಜದಂತೆ
ವಸಂತದ ಕನಸು ಕಾಣುತ್ತಿರುತ್ತದೆ.
ಇಂಥ ಕನಸುಗಳ ಮೇಲೆ ನಂಬಿಕೆಯಿಡಿ;
ಏಕೆಂದರೆ, ಇಲ್ಲೇ ಇದೆ ದ್ವಾರ,
ಅನಂತದೆಡೆಗೆ ತೆರಕೊಳ್ಳುವ ಹಾದಿ ಸೇರಲು!
ಸಾಯುವುದರರ್ಥ ಗಾಳಿಯಲ್ಲಿ ಲೀನವಾಗುವುದು, ಬಿಸಿಲಲ್ಲಿ ಕರಗುವುದು ಎಂದೇ ಅಲ್ಲವೇ?
ನಿಮ್ಮ ಪ್ರಾಣವಾಯುವಿಗೆ ಅಶಾಂತ ಬಿರುಗಾಳಿಯಿಂದ ಮುಕ್ತಿ ಸಿಗುವುದು,
ಮತ್ತು ಎತ್ತರೆತ್ತರಕ್ಕೆ ಏರಿ ವಿಸ್ತಾರ ಪಡಕೊಳ್ಳುತ್ತ ಮುಕ್ತಿಮಾರ್ಗ ಹಿಡಿದು
ಸೃಷ್ಟಿಕರ್ತನ ಸೇರಿಕೊಳ್ಳುವುದು...
ಇಷ್ಟೇ ಅಲ್ಲವೇ ಉಸಿರು ಸ್ತಬ್ದವಾಗುವುದರರ್ಥ?
ನೀವು ನಿಜವಾಗಲೂ ಹಾಡೋದು ಪ್ರಶಾಂತ ನದಿಯ ಜಲ ಕುಡಿದಾಗಲೇ !
ಶಿಖರ-ಪರ್ವತಗಳ ತುದಿ ತಲುಪಿದ ಮೇಲೇ ನಿಜವಾದ ಆರೋಹಣ ಶುರುವಾಗೋದು...
-ದಿಲ್
ಮೂಲ: ಖಲೀಲ್ ಗಿಬ್ರಾನ್.
ಕಾಮೆಂಟ್ಗಳು