ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜನವರಿ, 2014 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ... ಭಾಗ 5

1968ರಲ್ಲಿ ರಫೀ ಕುಟುಂಬದ ಮೊತ್ತ ಮೊದಲ ಮದುವೆ ಸಮಾರಂಭ. ಮೊದಲ ಮಗಳು ಪರ್ವೀನ್ ಹಸೆಮಣೆ ಹತ್ತುವ ಸಂಭ್ರಮ. ಆ ಸಂದರ್ಭದಲ್ಲೇ ’ನೀಲ್ ಕಮಲ್’ ಚಿತ್ರದ  ’ಬಾಬುಲ್ ಕಿ ದುವಾಯ್ಞೆ ಲೇತಿ ಜಾ...’ ಹಾಡಿನ ರೆಕಾರ್ಡಿಂಗ್ ನಡೆಯಿತು.  ಹಸೆಮಣೆ ಏರಿದ ಮಗಳನ್ನು ತವರು ಮನೆಯಿಂದ ಬೀಳ್ಕೊಡುವ ಸಂದರ್ಭಕ್ಕೆಂದು ಬರೆದ ಹಾಡು ಅದಾಗಿತ್ತು. ಈ ಹಾಡಿನ ರೆಕಾರ್ಡಿಂಗ್ ಸಂದರ್ಭದಲ್ಲೆಲ್ಲ ಅಬ್ಬಾ ಮಗಳ ಬಿದಾಯಿಯನ್ನೇ ನೆನಪಿಸಿಕೊಂಡು ತುಂಬ ಭಾವುಕರಾಗುತ್ತಿದ್ದರು. ಹಾಡಿನ ಪ್ರತಿಯೊಂದು ಪದ ತಂದೆಯೊಬ್ಬನ  ಬಾವತೀವ್ರತೆಯನ್ನು ಧ್ವನಿಸುತ್ತಿತ್ತು.  ಇವತ್ತಿಗೂ ಈ ಹಾಡು ಕೇಳಿದಾಗೆಲ್ಲ ನನ್ನ ಕಣ್ಣುಗಳು ತೇವವಾಗುತ್ತವೆ. ಹಾಡಿನ ರೆಕಾರ್ಡಿಂಗ್ ಕ್ಷಣಗಳನ್ನು ಮೆಲುಕು ಹಾಕುವಾಗಲೆಲ್ಲ ಅಬ್ಬಾ ದನಿ ತಡವರಿಸುತ್ತಿತ್ತು. ಅದರಲ್ಲಿ ತಂದೆಯೊಬ್ಬನ ಮಗಳ ಬಗೆಗಿನ ಕಕ್ಕುಲಾತಿ ಭಾವನೆ ಮಿಡಿಯುತ್ತಿತ್ತು. 1968ರಲ್ಲಿ ಅಬ್ಬಾಗೆ ಇದೇ ಹಾಡಿಗಾಗಿ ನ್ಯಾಷನಲ್ ಅವಾರ್ಡ್ ಅರಸಿ ಬಂತು. ’ಹಮ್ ಕಿಸೀಸೆ ಕಮ್ ನಹೀ’ ಚಿತ್ರದ  ’ಕ್ಯಾ ಹುವಾ ತೇರಾ ವಾದಾ...’ ಎನ್ನುವ ಅದ್ಭುತ ಹಾಡಿಗೆ 1977ರಲ್ಲಿ ಮತ್ತೊಂದು ನ್ಯಾಷನಲ್ ಅವಾರ್ಡ್ ಅಬ್ಬಾ ಮುಡಿಗೇರಿತು. ರಫೀ ಸಾಹೇಬರ ಮಾತೃಭಾಷೆ ಪಂಜಾಬಿ. ಉರ್ದು  ಮಾತನಾಡುವಾಗಲೂ ಅದರಲ್ಲಿ ಪಂಜಾಬಿ ಸೊಗಡೇ ಧ್ವನಿಸುತ್ತಿತ್ತು. ಮನೆಯಲ್ಲಿ ಮಕ್ಕಳ ಜತೆ ಅಬ್ಬಾ ಉರ್ದುವಿನಲ್ಲೇ ಮಾತನಾಡುತ್ತಿದ್ದರು. ಕಾರಣ ಇಷ್ಟೇ, ಅಮ್ಮಾಗೆ ಪಂಜಾಬಿ ಭಾಷೆ ಅರ್ಥವಾಗು

ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ.... ಭಾಗ 4

1944. ಆಗ ಅಬ್ಬಾಗೆ ಇಪ್ಪತ್ತರ ಹರೆಯ. ಸಿರಾಜುದ್ದೀನ್ ಅಹ್ಮದ್ ಸಾಹೇಬ್ ಮತ್ತು ತಾಲೀಮುನ್ನೀಸಾ ಅವರ ಮಗಳು ಬಿಲ್ಖೀಸ್ ಅವರನ್ನು ಅಬ್ಬಾ (ಮೊಹಮ್ಮದ್ ರಫೀ) ವಿವಾಹವಾದರು. ನನಗಿದ್ದ ಮಾಹಿತಿಯಂತೆ ಸಿರಾಜುದ್ದೀನ್ ಅವರಿಗೆ ನಾಲ್ವರು ಹೆಂಡತಿಯರು ಮತ್ತು ಒಂಭತ್ತು ಮಕ್ಕಳು. ಹೆಂಡತಿಯರ ಪೈಕಿ ಮೂವರು ಒಬ್ಬರ ನಂತರ ಒಬ್ಬರಂತೆ ಅತ್ಯಂತ ಕಡಿಮೆ ಅಂತರದ ಅವಧಿಯಲ್ಲೇ ನಿಧನರಾಗಿದ್ದರು. ನಾಲ್ಕನೇ ಹೆಂಡತಿಯೇ ತಾಲೀಮುನ್ನೀಸಾ. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಮತ್ತು ಮೂವರು ಗಂಡುಮಕ್ಕಳು. ಅವರಲ್ಲಿ ಬಿಲ್ಖೀಸ್ ಕೂಡ ಒಬ್ಬರು. ಅಮ್ಮಾಗೆ (ಬಿಲ್ಖೀಸ್) ಆಗ ಕೇವಲ ಹದಿಮೂರರ ವಯಸ್ಸು. ಮದುವೆ ಬಗ್ಗೆ ಏನೂ ತಿಳಿಯದ ವಯಸ್ಸು. 'ಒಂದು ದಿನ ನಾನು ಶಾಲೆಯಿಂದ ವಾಪಸ್ ಬಂದೆ. ಅದೇ ದಿನ ನನಗೆ ಮದುವೆ ಅಂತ ಹೇಳಿದರು. ಮದುವೆ ಗಂಡು ಈ ನಿನ್ನ ಅಬ್ಬಾ. ನಾನಾಗ ನಿನ್ನ ಅಬ್ಬಾನನ್ನು ಭಾಯ್ ಎಂದು ಕರೆಯುತ್ತಿದ್ದೆ' ಎಂದು ಅವರು ಆಗಾಗ ನನ್ನ ಬಳಿ ನೆನಪಿಸಿಕೊಳ್ಳುತ್ತಿದ್ದರು.. ಹಮೀದ್ ಭಾಯ್ ಅಬ್ಬಾ ಅವರ  ಎಲ್ಲಾ ವೃತ್ತೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಹಮೀದ್ ಭಾಯ್ ಕೂಡ ಸಿರಾಜುದ್ದೀನರ ಮಗಳು ಮೆಹರುನ್ನೀಸಾಳನ್ನು ಮದುವೆಯಾದರು. ಈಕೆ ಸಿರಾಜುದ್ದೀನ್ ಅವರ ಮೊದಲ ಪತ್ನಿಯ ಮಗಳು. ಹಮೀದ್ ಭಾಯ್ ಅಬ್ಬಾ ಜತೆ 1950ರವರೆಗೂ ಇದ್ದರು. ಆನಂತರದಲ್ಲಿ ಅವರು ತಮ್ಮ ಪರಿವಾರ ಸಮೇತ ಬೆಂಗಳೂರಿಗೆ ಸ್ಥಳಾಂತರಗೊಂಡರು. ಆಗ ಅಬ್ಬಾ ವ್ಯವಹಾರಗಳನ್ನೆಲ್ಲಾ ಅಮ್ಮಾ ಸಹೋದರ ಜ

ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ...- ಭಾಗ 3

ಅಬ್ಬಾಗೆ ಒಂದು ಕಡೆ ತಾನು ಹುಟ್ಟಿ ಬೆಳೆದ ನಾಡು ಮತ್ತು ಬಂಧು ಬಳಗವನ್ನೆಲ್ಲ ತೊರೆದು ಬಂದ ಹಳವಂಡ. ಮತ್ತೊಂದೆಡೆ ಅಂದುಕೊಂಡಂತೆ ಮುಂಬೈ ಎಂಬ ಮಾಯಾನಗರಿಗೆ ಬಂದ ಖುಷಿ. ಮುಂಬೈ ಒಂಥರ ತುಂಬ ಕುತೂಹಲಕರವಾದ ನಗರ. ಅಬ್ಬಾ ಮತ್ತು ಹಮೀದ್ ಭಾಯ್ ಗೆ ಹೊಸ ವಾತಾವರಣಕ್ಕೆ ತೆರಕೊಳ್ಳುವ ಮತ್ತು ಇರುವುದಕ್ಕೊಂದು ಸೂರು ಹುಡುಕಿಕೊಳ್ಳುವ ಧಾವಂತ. ಅದರಲ್ಲೂ ಕಡಿಮೆ ಬೆಲೆಗೆ ಬಾಡಿಗೆ ಮನೆ ಹುಡುಕುವ ಅನಿವಾರ್ಯತೆ. ಅಬ್ಬಾಗೆ ಅದೃಷ್ಭದ ಮೇಲೆ ನಂಬಿಕೆ ಇತ್ತು. ಏನಾದರೊಂದು ವ್ಯವಸ್ಥೆ ಆದೀತೆಂಬ ವಿಶ್ವಾಸ ಬಲವಾಗಿತ್ತು. ಅಂತೂ ಮೊಹಮ್ಮದ್ ಅಲಿ ರಸ್ತೆಯ ಪ್ರಿನ್ಸೆಸ್ ಬಿಲ್ಡಿಂಗ್ ನಲ್ಲಿ ಇರುವುದಕ್ಕೆ ಒಂದು ನೆಲೆ ದಕ್ಕಿತು. ಸಿರಾಜುದ್ದೀನ್ ಅಹಮದ್ ಬಾರಿ ಎನ್ನುವವರು ಈ ಬಿಲ್ಡಿಂಗ್ ಒಡೆಯ. ಮೇಲ್ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಅಬ್ಬಾ ಅಂದುಕೊಂಡಂತೆ ಅತ್ಯಂತ ಕಡಿಮೆ ಬೆಲೆಗೆ ಬಾಡಿಗೆಯ ಕೋಣೆಯ ವ್ಯವಸ್ಥೆ ಆಯ್ತು.  ರಫೀ ಎದುರಿಸುತ್ತಿದ್ದ ಬಲು ಕಷ್ಟದ ಸಮಯ ಇದಾಗಿತ್ತು. ಅಪರಿಚಿತ ನಗರ, ಮೇಲೆ ಜೇಬಿನಲ್ಲಿ ಕಿಲುಬು ಕಾಸಿಲ್ಲ.. ಸ್ಟುಡಿಯೋ ಮತ್ತು ಮನೆಗೆ ಮೈಲುಗಟ್ಟಲೆ ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿ. ರೆಕಾರ್ಡಿಂಗ್, ಪೈಲಟ್ ಸಿಂಗಿಂಗ್, ರಿಹರ್ಸಲ್ ಹೀಗೆ ಎಲ್ಲದಕ್ಕೂ ದೂರದ ಸ್ಟೂಡಿಯೋಗೆ ನಡೆದುಕೊಂಡೇ ಹೋಗಬೇಕಿತ್ತು. ವಾಪಸ್ ನಡೆದೇ ಮನೆ ಸೇರಬೇಕಿತ್ತು. ಎಷ್ಟೋ ಸಾರಿ ನಡೆದು ಸುಸ್ತಾಗಿ ಸ್ಟುಡಿಯೋ ತಲುಪಿ, ಒಳಕ್ಕೆ ಕಾಲಿಡುತ್ತಿದ್ದಂತೆ