ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2016 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ದೃಶ್ಯಮಾಧ್ಯಮಕ್ಕೊಂದು ಅರ್ಥಪೂರ್ಣ ಮಾದರಿ ‘ಪೂರ್ವೋತ್ತರ ರಂಗೋತ್ಸವ’

ಬ ರಿಯ ಸಾಹಿತ್ಯಕ ಶಬ್ದ ಸೊಕ್ಕಿನ ಸಂಭಾಷಣೆಗಳಿಂದ ಸೊರಗುತ್ತಿರುವ ಕನ್ನಡ ರಂಗಭೂಮಿ ಮುಟ್ಟಿ ನೋಡಿಕೊಳ್ಳುವಂತೆ ‘ಪೂರ್ವೋತ್ತರ’ ರಂಗೋತ್ಸವದ ನಾಟಕಗಳ ಪ್ರಸ್ತುತಿ ಇತ್ತು. ರಂಗಭೂಮಿ ಅದ್ಭುತ ದೃಶ್ಯ ಮಾಧ್ಯಮ. ಮಾತುಗಳಿಗಿಂತ ದೃಶ್ಯಗಳ ಮೂಲಕ ವಸ್ತುವಿನ ಸಂವೇದನೆಗಳನ್ನು ರಂಗದ ಮೇಲೆ ಅಭಿವ್ಯಕ್ತಿಸುವ ವಿಶಿಷ್ಠ ಕಲಾಪ್ರಕಾರ. ಬಳಸಿದ ಪರಿಕರಗಳು, ಕಲಾತ್ಮಕ ಅಭಿವ್ಯಕ್ತಿಯ ಕಸಬುದಾರಿಕೆ ಏನೇ ಇರಲಿ. ನಾಟಕವೊಂದು ರಂಗಮುಖೇನ ಹೇಳಬೇಕಾದ್ದನ್ನು ದೃಶ್ಯಗಳಲ್ಲಿಯೇ ಹೇಳುವ ಸಾಧ್ಯತೆಗಳನ್ನು ರಂಗೋತ್ಸವ ಸ್ಪಷ್ಟಪಡಿಸಿತು. ಬರಿಯ ಸಂಭಾಷಣೆಗಳು, ಅದದೇ ರಂಗ ಸಂಗೀತದ ಸೋಗಲಾಡಿತನಗಳನ್ನು ನೋಡಿ, ಕೇಳಿ ಬೇಸತ್ತಿದ್ದ ಪ್ರೇಕ್ಷಕರಿಗೆ ದೃಶ್ಯದ ಅನನ್ಯ ಸ್ಪರ್ಶಾನುಭವ ನೀಡಿತು.  ‘ಲೈಫ್‌ ಕ್ಯಾನ್ವಾಸ್‌’ ರಚನೆ ಮತ್ತು ನಿರ್ದೇಶನ: ಅಸೀಮ ಕುಮಾರ್‌ ನಾಥ್‌ ತಂಡ: ಸರ್ಸಾ. ಅಸ್ಸಾಂ ಭಾಷೆ: ಅಸ್ಸಾಮಿ ಉತ್ಸವದಲ್ಲಿ ನನ್ನ ತುಂಬ ಸೆಳೆದ ನಾಟಕ ‘ಲೈಫ್‌ ಕ್ಯಾನ್ವಾಸ್‌’. ಮನುಷ್ಯನ ಅಂತರಂಗದಲ್ಲಿರುವ ಒಂದು ಸ್ಮಶಾನ ಕುರುಕ್ಷೇತ್ರದ ಚಿತ್ರಣ ಇಡೀ ನಾಟಕದ ಜೀವಾಳ. ಪ್ರೀತಿ, ಪ್ರೇಮ, ಕಾಮ ಮತ್ತಿತರ ಅಭಿಲಾಷೆಗಳಿಂದ ಒಳಗೇ ನಡೆಯುವ ಅಂತಃಯುದ್ಧದ ಚಿತ್ರಣ ಕಟ್ಟಿಕೊಟ್ಟ ಬಗೆಯಲ್ಲಿ ಹಲವು ಹೊಸ ಸಾಧ್ಯತೆಗಳಿದ್ದವು. ಭಿನ್ನ ಲೈಟಿಂಗ್‌ವಿನ್ಯಾಸ, ಪರಿಕರಗಳ ಜತೆ ವಾಸ್ತವಿಕತೆಯನ್ನು ಅದೆಷ್ಟು ಸಾಧ್ಯವೊ ಅಷ್ಟು ಸಾಕಾರಗೊಳಿಸಿ ನಾಟಕ ಕಟ್ಟಿಕೊಟ್ಟ ಬಗೆ ನಿಬ್ಬೆರಗುಗೊಳಿಸುವಂತಿತ್ತು. ನ