ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜನವರಿ 12, 2016 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಬದನಾಮ್‌ ಕಾಶ್ಮೀರ ಬದ್ಮಾಶ್‌ ‘ವಜೀರ’

ವಜೀರ್, ಅಂದರೆ ಪ್ರಧಾನಿ. ಶತರಂಜ್‌ (ಚದುರಂಗ) ನ ಆಟದಲ್ಲಿ ಇದೊಂದು ಪ್ರಮುಖ ದಾಳ. ಬಾದಷಾಹನನ್ನು ರಕ್ಷಿಸುವ ಹೊಣೆ ದಳಪತಿಯದು. ರಾಜನ ಆಡಳಿತದ ಆಶಯಗಳನ್ನು ಪ್ರಜೆಗಳಿಗೆ ತಲುಪಿಸುವುದಕ್ಕಿರುವ ಒಂದು ವ್ಯವಸ್ಥೆಯಲ್ಲಿ ವಜೀರನದು ಪ್ರಮುಖ ಪಾತ್ರ. ಯುದ್ಧ ಹೊರಗೆ ನಡೆದಷ್ಟು ಒಳಗೂ ನಡೆಯುತ್ತದೆ. ಸಾಮ್ರಾಜ್ಯ ವಿಸ್ತರಣೆಗೆ ಯಾ ಸಾಮ್ರಾಜ್ಯ ರಕ್ಷಣೆಗೆ ಬಾದಷಾಹ ತಲೆಕೆಡಿಸಿಕೊಳ್ಳುವಷ್ಟು ಸಾಮ್ರಾಜ್ಯಕ್ಕೆ ಅಧಿಪತಿಯಾಗುವ ಕನಸಿನ ಬಗ್ಗೆ ವಜೀರನೂ ತಲೆಕೆಡಿಸಿಕೊಳ್ಳುತ್ತಲೇ ಇರುತ್ತಾನೆ. ಬಾದಷಾಹನಿಗೆ ಹತ್ತಿರದ ಈ ಪದವಿ ಒಮ್ಮೊಮ್ಮೆ  ನೇರ ಬಾದಷಾಹನಿಗೇ ಮುಳುವಾದ ಕಥೆಗಳು ಸಾಕಷ್ಟಿವೆ. ವಜೀರ ಹುದ್ದೆ ಬಹುತೇಕ ಸೃಷ್ಟಿ ಅಥವಾ ನೇಮಕಾತಿ. ಅತ್ಯಂತ ಅರ್ಹನಾದವನು ಈ ಹಂತಕ್ಕೆ ಏರುವುದು ಕಷ್ಟ. ಬಹುಶಃ ಇದು ಬಾದಷಹ ಆದವನಿಗೂ ಇಷ್ಟವಾಗುವಂಥದ್ದಲ್ಲ. ಬಾದಷಾಹ ತನಗೆ ಅನುಕೂಲವಾಗಬಲ್ಲ ಮತ್ತು ತನ್ನ ಮಾತುಗಳನ್ನು ಶಿರಸಾವಹಿಸಿ ಪಾಲಿಸುವ ವ್ಯಕ್ತಿಯನ್ನೇ ವಜೀರನನ್ನಾಗಿಸುವುದು. ಕೆಲವು ಸಂದರ್ಭಗಳಲ್ಲಿ ವಜೀರನಾದವನು ಬಾದಷಾಹನ ಚಮಚ್ಯಾ ಆಗುವುದೂ ಇದೆ. ಇವೆಲ್ಲ ರಾಜಕೀಯ ಗುರಿ ಮತ್ತು ಅಧಿಕಾರ ಚದುರಂಗದಾಟಕ್ಕೆ ಪೂರಕವಾಗಬಲ್ಲ ಮೊಹರುಗಳಷ್ಟೇ. ಹೀಗಾಗಿ ವಜೀರ್‌ ಎನ್ನುವುದು ನಿಜವಾದರ್ಥದಲ್ಲಿ ಒಂದು ಮೊಹರಾ ಅಷ್ಟೇ. ವಜೀರ ಸಿನಿಮಾ ಇಂಥದೊಂದು ರಾಜಕೀಯ ಚದುರಂಗದಾಟದ ಪ್ಲಾಟ್‌ ಹೊಂದಿದೆ. ಇಲ್ಲಿ ವಜೀರ ಒಂದು Ghost. ಜನಾಂಗದ ಅಂತಃಕಲಹ, ಜನಾಂಗಗಳ ನಡುವಿನ ಸಂಘರ್ಷದಲ್ಲಿಯೂ