ವಿಷಯಕ್ಕೆ ಹೋಗಿ

‘ನ್ಯೂಟನ್‌’ ಇಂಡಿಯಾದ ವಾಸ್ತವಿಕ ಚಿತ್ರ


ವ್ಯವಸ್ಥೆ ಸರಿಪಡಿಸುವ ಕೆಲಸ ಎಲ್ಲಿಂದ ಶುರು ಮಾಡೋದು? ಹೇಗೆ ಶುರು ಮಾಡೋದು? ಉತ್ತರ ತುಂಬ ಸುಲಭ. ಎಲ್ಲಿಂದಾದರೂ ಶುರು ಮಾಡಿ, ಹೇಗಾದರೂ ಶುರು ಮಾಡಿ. ಆದರೆ ಇಚ್ಛಾಶಕ್ತಿ ಮತ್ತದಕ್ಕೆ ಚಾಲನೆ ನೀಡುವ ಬದ್ಧತೆ ಬೇಕು. ಅದಕ್ಕೆ ಮುಖ್ಯವಾಗಿ ಎದೆಗಾರಿಕೆ ಬೇಕು. ಅದಕ್ಕೂ ಮುಖ್ಯವಾಗಿ ಕಾಯಕ ಯಾವುದಾದರೂ ಇರಲಿ. ಕಾರ್ಯಕ್ಷಮತೆ ಬೇಕು. ಜೀವಪರ ನ್ಯಾಯ ಬೇಕು. ನಮ್ಮ ನೆಲೆಯಿಂದಲೇ ವ್ಯವಸ್ಥೆ ಬದಲಾವಣೆಗೆ ಆರಂಭ ನೀಡಬಹುದಲ್ಲ!
ಒಂದು ಸೇಬು ಹಣ್ಣು ಮೇಲಕ್ಕೆ ಹಾರಿಸಿದರೆ ಅದು ಕೆಳಕ್ಕೇ ಬೀಳುತ್ತದೆ. ಮೇಲೆ ಎಸೆದ ಕಲ್ಲು ಗುಂಡು ಕೂಡ ಬೀಳುವುದು ಕೆಳಕ್ಕೇ. ಒಬ್ಬ ಚಹಾ ಮಾರುವವನು ಮತ್ತು ಅಂಬಾನಿಯಂಥ ಕರೋಡಪತಿ ಮೇಲಿನಿಂದ ನೆಗೆದರೆ ಇಬ್ಬರೂ ಬೀಳುವುದು ಕೇಳಕ್ಕೇ. ಗುರುತ್ವ ಶಕ್ತಿ ನೀಡಿದ ಮೊತ್ತ ಮೊದಲ ಸಮಾನತೆ ಸಂದೇಶ ಅದ್ಭುತ! ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಭೌತಿಕವಾಗಿ ಯಾವುದೂ ತಂತಾನೇ ಪರಿವರ್ತನೆ ಆಗುವುದಿಲ್ಲ ಎನ್ನುವುದು. ವಿಜ್ಞಾನಿ ಸರ್‌ ಐಸಾಕ್‌  ನ್ಯೂಟನ್‌ ಕಂಡುಕೊಂಡ ಈ ವೈಜ್ಞಾನಿಕ ಸತ್ಯವನ್ನು ಸಮಕಾಲೀನ ಸಾಮಾಜಿಕ, ರಾಜಕೀಯ ಸಂದರ್ಭಕ್ಕೂ ಸಮೀಕರಿಸಿದರೆ ಬದಲಾವಣೆ ಎನ್ನುವುದು ತಂತಾನೇ ಘಟಿಸುವುವಂಥದ್ದಲ್ಲ ಎನ್ನುವ ಸ್ಪಷ್ಟತೆ ಮೂಡುತ್ತದೆ. ಇಂಥ ವೈಜ್ಞಾನಿಕ ಮನೋ– ಧೋರಣೆ ಎಂಥ ಬದಲಾವಣೆಯನ್ನಾದರೂ ತರಬಲ್ಲುದು. ಅದಕ್ಕೆ ಕ್ರಿಯೆ ಅಥವಾ ಚಾಲನೆ ಮುಖ್ಯ ಅಷ್ಟೇ.  ‘ವಸ್ತುವಿಗೆ ತನ್ನದೇ ಸ್ಥಿರ ಸ್ಥಿತಿ (state of rest) ಇರುತ್ತದೆ. ಬಾಹ್ಯ ಪ್ರಚೋದನೆ ಅಥವಾ ಬಲಪ್ರಯೋಗ ಇಲ್ಲದೇ ಅದರ ಸ್ಥಾನಪಲ್ಲಟ ಆಗುವುದಿಲ್ಲ’–ಇದು ನ್ಯೂಟನ್‌ ಸಿದ್ಧಾಂತದ ಅತ್ಯಂತ ಸರಳ ವಿವರಣೆ.
ವ್ಯವಸ್ಥೆ ಜಡತ್ವದಲ್ಲಿದ್ದರೆ ಅದು ತಂತಾನೇ ಸರಿ ಹೋಗಲಾರದು. ಅದನ್ನು ಬದಲಾಯಿಸಬೇಕಾಗುತ್ತದೆ. ಬದಲಾವಣೆಗೆ ಕ್ರಿಯೆ ನಡೆಯಬೇಕೆಂದರ್ಥ. ಕಾರ್ಯೋನ್ಮುಖ ಆಗಬೇಕಾದ್ದು ಯಾರು? ನಾವೇ! ಇದೆಷ್ಟು ಸಿಂಪಲ್‌  ಥಾಟ್...
ಆಧುನಿಕ ಯುಗದಲ್ಲೂ ದಂಡಕಾರಣ್ಯದ ಆದಿವಾಸಿ ಪ್ರದೇಶದಲ್ಲಿ ಚುನಾವಣೆ ನಡೆಸುವುದು ಸವಾಲು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಇಷ್ಟು ದೊಡ್ಡ ಸವಾಲಾಗಲೇಬಾರದಿತ್ತು. ಆದರೆ, ನಕ್ಸಲ್‌ ಹೆಸರಲ್ಲಿ, ಭಯೋತ್ಪಾದನೆಯ ಹೆಸರಲ್ಲಿ ಸವಾಲನ್ನಾಗಿಯೇ ಉಳಿಸಿಕೊಂಡಿದ್ದು ರಾಜಕಾರಣ. ಇಂಥ ರಾಜಕಾರಣ, ವ್ಯವಸ್ಥೆಯ ಸ್ವರೂಪದಲ್ಲಿ ಪೋಷಿಸಲ್ಪಡುತ್ತ ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸಿದೆ. ಮತಯಂತ್ರ ಇದರ ಸಹಜ ಬಲಿಪಶು. ಈಗೀಗ ಅದನ್ನು ಆಟಿಕೆ ವಸ್ತುವಿನಂತೆ ಬಳಸಿ ಫಲಿತಾಂಶಗಳಲ್ಲಿ ಪವಾಡಗಳನ್ನೇ ಸೃಷ್ಟಿಸಲಾಗುತ್ತಿದೆ.
ಚುನಾವಣಾ ಆಯೋಗ ತನ್ನ ನಿಜವಾದ ಸ್ವಾಯತ್ತತೆಯನ್ನು ಮೆರೆದು ಮತಯಂತ್ರವನ್ನು ಕಬಂಧ ಬಾಹುಗಳಿಂದ ರಕ್ಷಿಸಲೆಂದೇ ರೂಪುಗೊಂಡ ವ್ಯವಸ್ಥೆ. ಅತಿಸೂಕ್ಷ್ಮ ಎಂದೇ ಹಣೆಪಟ್ಟಿ ಹಚ್ಚಿಸಿಕೊಂಡ ಆದಿವಾಸಿ ಪ್ರದೇಶದಲ್ಲಿ ಚುನಾವಣೆ ನಡೆಸಲು ನಿಯೋಜನೆಗೊಂಡ ಯುವಕನೊಬ್ಬ ದೊಡ್ಡ ಸಾಹಸವನ್ನೇ ಮಾಡುತ್ತಾನೆ. ತಾನು ಫಿಜಿಕ್ಸ್‌ ಓದುವಿನಲ್ಲಿ ಕಲಿತ ನ್ಯೂಟನ್‌ ಸಿದ್ಧಾಂತವನ್ನು ಕಾರ್ಯರೂಪಕ್ಕಿಳಿಸಿ ಬಂದೂಕಿನಿಂದ ಹೆದರಿಸಿ ದೂರವಿಟ್ಟ ಮತದಾರರನ್ನು ಬೂತ್‌ಗೆ ಕರೆತಂದು ಮತ ಹಾಕುವಂತೆ ಮಾಡುತ್ತಾನೆ. ತನ್ನ ಜೀವ ಪಣಕ್ಕಿಟ್ಟು ಇಂಥದೊಂದು ಕ್ರಿಯೆಗೆ ಮುಂದಾಗುತ್ತಾನೆ.ಯಶಸ್ವಿಯೂ ಆಗುತ್ತಾನೆ. ಈ ರೋಚಕ ಪ್ಲಾಟ್‌ ಇಟ್ಟುಕೊಂಡು ಪಾಲಿಟಿಕಲ್‌ ಸಟೈರ್‌ ಕಟ್ಟಿಕೊಟ್ಟ ‘ನ್ಯೂಟನ್‌’ ಅತ್ಯಂತ ವಾಸ್ತವಿಕ ಚಿತ್ರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ