ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2018 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇಷ್ಕ್‌ ಕೆ ಇಮ್ತೆಹಾನ್‌ ಔರ್‌ ಭೀ ಹೈ’.. ಇಮ್ರಾನ್‌ ಖಾನ್‌!

ಪಾಕಿಸ್ತಾನದ ಬಗ್ಗೆ ಮಾತನಾಡುವುದು ಮಹಾ ಪಾಪದ ಕೆಲಸವೇನಲ್ಲ. ಹಾಗೆ ಭಾವಿಸಬೇಕಿಲ್ಲ. ಅದು ಒಪ್ಪಿತವೊ ಇಲ್ಲವೋ, ಅದರ ಬಗ್ಗೆ ಅಲಕ್ಷ್ಯವೋ ನಿರ್ಲಕ್ಷ್ಯವೊ ಏನೇ ಆದರೂ ಅದು ಒಂದು ದೇಶ. ನೆರೆಯ ರಾಷ್ಟ್ರ. ‘ಪಡೋಸಿ...’ ಸಂಬಂಧದಲ್ಲಿ ನಮ್ಮದೇ ಕರುಳಬಳ್ಳಿ. ಭಾಷೆ, ಜನಜೀವನ ಶೈಲಿಯಲ್ಲಿ ಬದಲಾದರೂ ಮನುಷ್ಯ ಭಾವ, ಬದುಕುವ ಸಾಮಾನ್ಯ ಕಾಳಜಿ  ಒಂದೇ. ಹಾಗೆ ನೋಡಿದರೆ ಸಾಂಸ್ಕೃತಿಕವಾಗಿ ಎರಡೂ ದೇಶಗಳು ಅಭಿನ್ನ. ನಮ್ಮಲ್ಲಿರುವ ಹಾಗೆ ಅಲ್ಲಿಯೂ ಪ್ರಜಾಪ್ರಭುತ್ವ ಇದೆ. ಅಲ್ಲಿ ನಡೆಯುವುದು ಇಲ್ಲೂ ನಡೆಯುತ್ತದೆ. ಅಲ್ಲಿ ನಡೆಯಲೇಬಾರದ್ದು ಇಲ್ಲೂ ನಡೆಯಲೇಬಾರದು.  ತೀವ್ರವಾದ ನಮ್ಮಲ್ಲಿನದಕ್ಕಿಂತ ಅಲ್ಲಿ ತುಸು ಹೆಚ್ಚು ಸವಾರಿಗೆ ಹವಣಿಸಿದೆ. ಅಲ್ಲಿನ ಮಿಲಿಟರಿ ಅತಿರೇಕದ್ದು. ಅಕ್ಷಮ್ಯ. ಮತ್ತೆ ದೇಶ ಪುಟ್ಟದಾದಷ್ಟು ಅದಕ್ಕೆ ಭಯಗಳು ಜಾಸ್ತಿ. ಮಿಲಿಟರಿ ಕವಚದಲ್ಲಿ ಅದು ಸುರಕ್ಷಾ ಭಾವವನ್ನು ಕಲ್ಪಿಸಿಕೊಳ್ಳುತ್ತದೆ. ಅದೊಂದು ತರಹದ ಸಮಾಧಾನ. ಆದರೆ ಭ್ರಮೆಯಿಂದ ಕೂಡಿದ್ದು. ಭಯೋತ್ಪಾದನೆ ಕೂಡ ಒಂದರ್ಥದಲ್ಲಿ ಪುಕ್ಕಲುತನವೇ ಆಗುತ್ತದೆ. ಹಿಂಸಾ ಪ್ರವೃತ್ತಿಗೆ ಹೆದರಿಸುವುದೇ ಕೆಲಸ. ಹೆದರಿಸುವವರು ಶೂರರು, ಧೀರರು ಮತ್ತು ಜೀನಿಯಸ್‌ ಆಗಿರಲು ಹೇಗೆ ಸಾಧ್ಯ? ಮುಖ್ಯವಾಗಿ ಅಲ್ಲಿನ ವಿದ್ಯಮಾನಗಳನ್ನು ಗಮನಿಸುವುದಾದರೆ, ಮಿಲಿಟರಿ, ಮತಾಂಧರು, ಭಯೋತ್ಪಾದಕರು, ಭ್ರಷ್ಟರು ಇದೆಲ್ಲದರಿಂದ ಪಾಕಿ ತುಂಬ ರೋಸಿ ಹೋಗಿದ್ದಾನೆ. ಒಂದು ಸೂಕ್ತ ಪರ್ಯಾಯಕ್ಕಾಗಿ ಹಂಬಲಿಸಿದ್ದಾನೆ. ಸಹಜ

ಕಲೆ ಮತ್ತು ನೈತಿಕತೆ

ಕಲಾವಿದನೊಬ್ಬನ ಕಲೆಯ ಬಗೆಗಿನ ಅನುರಾಗ, ಶ್ರದ್ಧೆ, ವಿಶ್ವಾಸಾರ್ಹತೆ ಮತ್ತು ಧ್ಯಾನ ಎಲ್ಲವೂ ಬದ್ಧತೆಯಿಂದ ಕೂಡಿರುತ್ತದೆ. ಅವನೊಳಗೇ ಒಂದು ಸ್ವರ್ಗ ಸಮಾನವಾದ ಜಗತ್ತೊಂದು ರೂಪುಗೊಂಡಿರುತ್ತದೆ. ಅದನ್ನು ಬೇಕಿದ್ದರೆ ಕಾವ್ಯದ  ಅಂತಃದೃಷ್ಟಿ, ಅಂತಃಪ್ರಜ್ಞೆ ಅಥವಾ ಅಂತಃ ಸೂಕ್ಷ್ಮತೆ ಅಂತ ಅನ್ನಿ. ಕಾವ್ಯ ಎಂದಾಕ್ಷಣ ಅಕ್ಷರಗಳ ಕಲಾಕೃತಿ ಅಲ್ಲ. ಕಾವ್ಯ ಅಥವಾ ಪೊಯಟ್ರಿ ಅನ್ನೋದು ಎಲ್ಲದರೊಳಗೂ ಇರುವ ಅವ್ಯಕ್ತ ಸೂಕ್ಷ್ಮ. ಅದನ್ನು ಅಭಿವ್ಯಕ್ತಿಸಲು ನಾವು ಕಂಡುಕೊಳ್ಳುವ ಮಾರ್ಗಗಳಲ್ಲಿ ಅಕ್ಷರ, ಶಬ್ದ, ಧ್ವನಿ, ಚಿತ್ರ, ಅಭಿನಯ.. ಎಲ್ಲವೂ ಒಂದು ಮಾಧ್ಯಮ. ಕಲಾವಿದ ಅಥವಾ ಕವಿ ತಾನು ಸೃಜಿಸಹೊರಟ ಕೃತಿಯಲ್ಲಿ ಇದೆಲ್ಲವನ್ನು ಪ್ರಯೋಗಕ್ಕೊಳಪಡಿಸಿ ಅದರ ಸಾರವನ್ನೇ ಅಭಿವ್ಯಕ್ತಿಯಲ್ಲಿ ಎರಕಹೊಯ್ಯುತ್ತಾನೆ. ಹಾಗಾದಾಗ ಆ ಕಲಾಕೃತಿಯಲ್ಲಿ ಧ್ವನಿಸುತ್ತಿರುವುದು ಅವನ ದೃಷ್ಟಿ, ಪ್ರಜ್ಞೆ, ತತ್ವ, ಅಭಿಪ್ರಾಯ ಆಗುತ್ತದೆ. ಇದಕ್ಕೂ ಮಿಗಿಲಾಗಿ ಅದು ಆತನ ಅನುಭಾವ ಪರಪಂಚವೇ ಆಗುತ್ತದೆ. ಪ್ರತಿನಿಧಿಸುವ ತತ್ವ ಅವನದೇ ಆಗಬಹುದು. ಅದಕ್ಕವನು ಬದ್ಧನೂ ಆಗಬಹುದು. ಇಲ್ಲವೇ ಅರಾಜಕತೆಯ ಹಾಗೊಂದು ಭಾವದಲ್ಲಿ ತನಗೂ ತನ್ನ ಕಲಾಕೃತಿಗೂ ಸಂಬಂಧವೇ ಇಲ್ಲ ಎಂದು ವಾದಿಸಬಹುದು. ಅರಾಜಕತೆಯಿಂದ ಕೂಡಿದ ಯಾವುದೂ ಬಹುಕಾಲ ಬಾಳಿ ಬದುಕುವಂಥದ್ದಲ್ಲ ಎನ್ನುವ ಎಚ್ಚರ ಕೂಡ ಮುಖ್ಯ.   ಮತ್ತೆ ಕಲಾವಿದನ ಅಭಿವ್ಯಕ್ತಿಯನ್ನು ಬರಿಯ ಸಾಂಸ್ಕೃತಿಕ ನೆಲೆಯಲ್ಲಿ ಮಾತ್ರ ಕಾಣಬೇಕಿಲ್ಲ. ಅದು ಸಮಾಜೋ–ರಾಜಕೀ

ಇಂಡಿಯಾದ ರಾಜಕೀಯ ಎದುರಿಸಲಿರುವ ಅಪಾಯದ ಮುನ್ಸೂಚನೆ

Theater Olympic 2018 Play: Gunamukha Enacted bu NSD bengaluru Direction: C Basavalingaiah C Basavalingaiah Basu       ಅ ರೆ ಅಲೆಮಾರಿಯ ಮಗನೊಬ್ಬನಿಗೆ ಅಧಿಕಾರ, ದೌಲತ್‌ ಸುಖದ ಕಲ್ಪನೆಯಷ್ಟೇ ಆಗಿರಲಿಲ್ಲ. ಅದು ಒಟ್ಟೊವಿಯನ್‌ ಸಾಮ್ರಾಜ್ಯದ ವೈಭವವನ್ನು ಮೀರಿಸುವಂತೆ ಬೆಳೆದು ನಿಲ್ಲುವ ಕನಸು, ಛಲವೂ ಆಗಿತ್ತು. ಸಾಧಾರಣ ಗ್ಯಾಂಗ್‌ ಕಟ್ಟಿಕೊಂಡು ತನ್ನ ಕಾಲದ ಅರಸು ಮನೆತನಗಳ ಮೇಲೆ ಕಣ್ಣಿಟ್ಟು ಸೈನ್ಯ ಸೇರುವ ಆತ ಅದರ ನಾಯಕನೂ ಆಗುತ್ತಾನೆ. ದೊರೆಯಾಗಿ ರಾಜಕೀಯ ಮಹತ್ವಾಕಾಂಕ್ಷೆ ಈಡೇರಿಸಿಕೊಂಡು ಪರ್ಷಿಯಾ ಸೇರಿದಂತೆ ಜಾರ್ಜಿಯಾ, ರಷ್ಯದ ಹಲವು ಭಾಗಗಳನ್ನು ಆಗಲೇ ಆಕ್ರಮಿಸಿಕೊಳ್ಳುತ್ತಾನೆ. ಅವನು ಧೈರ್ಯಶಾಲಿ ನಾದಿರ್‌ ಷಾ.   ಕೆಲ ಕಾಲ ಹಿಂದೂಸ್ತಾನದ ದೊರೆಯೂ ಆಗಿ ಮೆರೆದಿದ್ದು ಒಂದು ಆಕಸ್ಮಿಕ. ಪರ್ಷಿಯಾ ದೇಶಗಳ ಸಮೇತ ಆಪ್ಘನ್‌, ಲಾಹೋರ್‌ ಗೆಲ್ಲುತ್ತ ದೆಹಲಿಗೂ ಕಾಲಿಟ್ಟಾಗ ಇಲ್ಲಿದ್ದ ಮುಘಲ್‌ ಸೈನ್ಯ ದೈನೇಸಿ ಸ್ಥಿತಿಯಲ್ಲಿತ್ತು. ಸುಲ್ತಾನಗಿರಿಯೂ ಅವಸಾನದಂಚಿನಲ್ಲಿತ್ತು. ಮುಘಲ್‌ರನ್ನು ಮಣಿಸಿ ನಾದಿರ್‌ ಷಾ ದೆಹಲಿಯ ದೊರೆಯಾಗಿಬಿಡುತ್ತಾನೆ. ಮುಘಲ್‌ರನ್ನು ಸೋಲಿಸಬಹುದು ಎನ್ನುವ ಮೊದಲ ಸೂಚನೆಯನ್ನು ಈತ ಜಗತ್ತಿಗೆ ತೋರಿಸಿಕೊಡುತ್ತಾನೆ. ಹೀಗಾಗಿಯೇ ಫ್ರೆಂಚರು ಮತ್ತು ಬ್ರಿಟೀಷರಿಗೆ ಈತ ಹೀರೋ!   ಆನಂತರದಲ್ಲಿ ಸಾಮ್ರಾಜ್ಯಷಾಹಿಯಾಗಿ ಮೆರೆದ ನಾದಿರ್‌ ಧರ್ಮ ಮತ್ತು ರಾಜಕಾರಣ ಬೆಸೆ

ದಿವ್ಯಾನುಭವ ನೀಡಿದ ಉಸಿರಿನಾಟ

Theatre Olympics 2018/Organised by: NSD Bengaluru Centre Play (Nob-verbal): Caesarean Section. Essays on Suicide/Enacted by: ZAR Theatre Polland Direction- Jarosław Fret ಬದುಕು ಸಾವನ್ನೇ ದಿಟ್ಟಿಸುತ್ತಲಿರುವುದಲ್ಲ. ಜೀವ ದೇಹದಿಂದ ಅನಂತದೆಡೆಗೆ ಹಾರುವ ಕ್ಷಣದತನಕ ಒಳಗೇ ಇರುವ ಅದಾವುದೋ ಶಕ್ತಿ ಅಥವಾ ಚೇತನ ಮನಸು, ದೇಹ, ಜೀವ, ಆತ್ಮದ ಜೊತೆ ನಿರಂತರ ಅನುಸಂಧಾನದಲ್ಲಿರುತ್ತದೇನೋ.. ಬದುಕಿನ ಯಾವುದೋ ಹಂತದಲ್ಲಿ ದುರ್ಬಲಗೊಳ್ಳುವ ಮನಸು ಸಾವಿನ ಧ್ಯಾನಕ್ಕೆ , ಆತ್ಮಹತ್ಯೆಯಂಥ ಪ್ರವೃತ್ತಿಗಿಳಿವುದೇ! ಆಸೆ, ಪಡೆವ. ಕಳಕೊಳ್ಳುವ ಹಂಬಲ, ತುಡಿತ ... ಎಲ್ಲದರಲ್ಲೂ ಸೋತು ನಿಂತಾಗ, ಇಷ್ಟು ವಿಶಾಲ ಟೈಂ ಅಂಡ್‌ ಸ್ಪೇಸ್‌ನಲ್ಲಿ ತನ್ನದೇ ಸ್ಪೇಸ್‌ಗಾಗಿ ತಡಕಾಡಿ ನಿರಾಶಗೊಂಡಾಗ ಎಲ್ಲವನ್ನು ಶಾಶ್ವತವಾಗಿ ಮರೆಯಲು ಅಂಥದೊಂದು ಪ್ರವೃತ್ತಿ ಶುರುವಾಗುತ್ತದೆ. ಸೋಲುಗಳನ್ನೋ, ಅವಮಾನಗಳನ್ನೋ, ಹತಾಶಗಳನ್ನೋ, ನೋವುಗಳನ್ನೋ, ಮುಜುಗರಗಳನ್ನೋ... ಅದೇನೇನನ್ನೋ ಕಾರಣಗಳ ಮಾಡಿಕೊಳ್ಳಬಹುದು ಆ ಪ್ರವೃತ್ತಿ ! ಆತ್ಮ ಹತ್ಯೆಯ ನಿರ್ಣಾಯಕ ಕ್ಷಣದಲ್ಲಿ ಅದಾವುದೋ ನಮ್ಮೊಳಗಿನ ಚೇತನ ಮತ್ತೆ ರಚ್ಚೆ ಹಿಡಿದು ಹಿಂದಕ್ಕೆಳೆಯುತ್ತದೆ. ತನಗೆ ಈ ಕ್ಷಣ ನೀನು ಬೇಕೇ ಬೇಕೆನ್ನುವ ಹಟಕ್ಕೆ ಬಿದ್ದ ಪುಟ್ಟ ಕಂದ, ಅಮ್ಮನ ಸೆರಗು ಹಿಡಿದು ನಿಲ್ಲುವ ಹಾಗೆ. ಸ್ವಲ್ಪ ನಿಂತು ಬಿಡೋ, ಕತ್ತಲಾವರಿಸುತ್ತಿದೆ, ಮಳೆ ಜೋರು, ಗಾಳಿಯೂ ಬಿರು ಬೀಸುತ್ತಲಿದೆ,

‘ಇಲ್ಲ.. ಅಂದರೆ.. ಇದೆ!’.. ಉತ್ತಮ ಪ್ರಯೋಗ

ಜೀನ್‌ ಬ್ಯಾಪ್ಟಿಸ್ಟ್‌ ಪೊಕ್ವೆಲಿನ್‌ ಅಲಿಯಾಸ್‌ ಮೊಲಿಯರ್‌ 18ನೇ ಶತಮಾನದ ಹೆಸರಾಂತ ಫ್ರೆಂಚ್‌ ನಾಟಕಕಾರ.  ಮೊಲಿಯರ್‌ ಎನ್ನುವುದು ಆತನ ರಂಗನಾಮ. ಕಾಮಿಡಿ ನಾಟಕಗಳಿಂದ ಹೆಸರಾದ ಈತ ಬದುಕಿನ ಸಣ್ಣ ಪುಟ್ಟ ಖುಷಿ ಕ್ಷಣಗಳು ಮತ್ತು ಹಾಸ್ಯದ ಪ್ರಸಂಗಗಳನ್ನೇ ಎತ್ತಿಕೊಂಡು ಇತರ ನಾಟಕೀಯ ಅಂಶಗಳೊಂದಿಗೆ  ಬದುಕಿನ ಬಹುದೊಡ್ಡ ವಿಷಣ್ಣತೆ. ವಿಷಾದವನ್ನು ನಾಟಕವಾಗಿ ಕಟ್ಟಿಕೊಟ್ಟಿದ್ದಾನೆ. ಆ ಮೂಲಕ ಬದುಕಿನ ಬಗ್ಗೆ ಚಿಂತನೆಗೆ ಹಚ್ಚಿದ್ದಾನೆ. ಪರಿಣಾಮಕಾರಿಯಾದ ಪ್ರಹಸನಗಳಿಂದಲೇ ಮೊಲಿಯರ್‌ ತುಂಬ ಖ್ಯಾತಿ ಗಳಿಸಿದ. ತಾರ್ತೂಫ್‌, ಬೂರ್ಜ್ವಾ ಜಂಟಲ್‌ಮನ್‌ ಮತ್ತಿತರ ನಾಟಕಗಳ ಮೂಲಕ ಅನನ್ಯ ರಂಗಾನುಭವಗಳನ್ನು ಪ್ರೇಕ್ಷಕರಿಗೆ ಕಟ್ಟಿಕೊಟ್ಟ ಮೊಲಿಯರ್‌, ನಮ್ಮ ನಡುವೆ ಮತ್ತು ಸಮಾಜದಲ್ಲಿ ಅಸಂಖ್ಯ ಪ್ರಹಸನಗಳು ನಡೆದಾಗೆಲ್ಲ ನೆನಪಾಗುತ್ತಾನೆ.  ಕಳೆದ ಶನಿವಾರ ಸಂಜೆ, ಕೆ.ಎಚ್‌. ಕಲಾಸೌಧದಲ್ಲಿ ‘ಸೈಡ್‌ ವಿಂಗ್‌’ ತಂಡ ಏರ್ಪಡಿಸಿದ್ದ ‘ಇಲ್ಲ.. ಅಂದರೆ.. ಇದೆ!’  ಎನ್ನುವ ಕಾಮಿಡಿ ನಾಟಕದ ಪ್ರಯೋಗಕ್ಕೆ ಜಿ.ಎನ್‌. ಮೋಹನ್‌ ಅವರ ಜೊತೆ ನಾನೂ ಸಾಕ್ಷಿಯಾದೆ. ಮೊಲಿಯೊರ್‌ ಯಾಕೋ ನೆನಪಾದ. ನಾವು ನಮ್ಮದೇ ಬದುಕಿನ ನಿಜದ ನೆಲೆಗಳ ಹುಡುಕಾಟಕ್ಕೆ ಇಳಿದಾಗ ವಾಸ್ತವಾಂಶಗಳು ಅನಾವರಣಗೊಳ್ಳುತ್ತವೆ. ಮನುಷ್ಯ ಸಂಬಂಧಗಳಲ್ಲಿ ಅಂದರೆ ಗಂಡು–ಹೆಣ್ಣು, ಸಮಾಜದ ಜೊತೆಗಿನ ಮನುಷ್ಯನ ಸಂಬಂಧಗಳು ಅಂದರೆ ಸಾಮಾಜಿಕ ಸಂಬಂಧ ಇದೆಲ್ಲದರ ಜೊತೆ ನಮ್ಮ ಸ್ಪಂದನೆ ಏನು? ಕಂಡುಕೊಂಡ ಸತ್ಯಗಳ ನೆಲೆಯಲ್ಲ

ಮುಸ್ಲಿಂ ಸಮುದಾಯ ತಂತ್ರಗಾರಿಕೆ ಬದಲಾಯಿಸಿಕೊಳ್ಳುವುದು ಅನಿವಾರ್ಯ

ಎಂಟು ನೂರು ವರ್ಷಗಳ ಕಾಲ ಮುಸ್ಲಿಂ ದೊರೆಗಳು, ಇನ್ನೂರೈವತ್ತು ವರ್ಷಗಳ ಕಾಲ ಕ್ರೈಸ್ತರು ಅಧಿಕಾರದಲ್ಲಿದ್ದರು. ಪ್ರವಾದಿತನ ನಂಬಿಕೆಯ ಸಮುದಾಯಗಳಿವು. ಎರಡರ ನಡುವೆ ರಾಜಕೀಯ ಸಂಘರ್ಷವಿದೆ. ಇವುಗಳ ರಾಜಕೀಯ ನೀತಿ ಮತ್ತು ಸಂಸ್ಕೃತಿಗಳ ಪ್ರಭಾವದಿಂದ ಸಿಂಧೂ ನಾಗರಿಕತೆ ಮತ್ತು ದ್ರಾವಿಡರ ಜೀವನಶೈಲಿಯಲ್ಲಿ ಮಹತ್ತರ ಬದಲಾವಣೆಗಳಾದವು. ಆಡಳಿತದ ಮಾದರಿಗಳಾಗಿದ್ದ ಈ ಸಮುದಾಯಗಳ ಅನುಯಾಯಿಗಳು ಅದೇ ನೆಲದಲ್ಲಿ ರಾಜಕೀಯ ನಿರ್ಲಕ್ಷ್ಯಕ್ಕೊಳಗಾಗಿ ಅಸುರಕ್ಷತಾ ಭಾವ ಎದುರಿಸುವಂತಾಗಿರುವುದು ಈ ಕ್ಷಣದ ವಾಸ್ತವ.  ನೆಹರೂ ಕಾಲದಲ್ಲಿ ವಿಭಜನೆಯ ಹಿಂಸೆ ಇನ್ನೂ ಇತ್ತು. ಭೌಗೋಳಿಕ ಕಾರಣಕ್ಕಾಗಿ ಇಂಡಿಯಾದಲ್ಲಿಯೇ ನೆಲೆ ನಿಂತ ಬಹು ನಂಬಿಕೆಗಳ ಜನರಿಗೆ ಘಾಸಿಯಾಗದಂತೆ ಎಚ್ಚರಿಕೆಯ ನಡೆ ರೂಪಿಸಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿ ಅವರ ರಾಜಕೀಯ ಇತ್ತು. ಸೆಕ್ಯುಲರಿಸಂ ತತ್ವದಡಿ ಸಮಾಜವಾದಿ ಪ್ರಜಾಪ್ರಭುತ್ವ ನೆಲೆಗೊಳಿಸುವ ಯತ್ನ ನಡೆಯಿತು.  ಇಂದಿರಾಗಾಂಧಿ ಇದನ್ನೇ ಮುಂದುವರಿಸಿದರು. ಆಧುನಿಕ ಇಂಡಿಯಾದ ರಾಜಕೀಯ ಇತಿಹಾಸ ಕಣ್ಣಾಡಿಸಿದರೆ ದಕ್ಕುವ ಮುಖ್ಯ ಅಂಶವಿದು.  ಇಂದಿರಾ ಗಾಂಧಿ ‘ಗರೀಬಿ ಹಟಾವೋ’ ಘೋಷಣೆ ಮೊಳಗಿಸಿದರು. ಬ್ಯಾಂಕ್‌ ರಾಷ್ಟ್ರೀಕರಣ, ಭೂಸುಧಾರಣೆಯಂಥ ದಿಟ್ಟ ಕ್ರಮಗಳ ಜೊತೆ ಕುಟುಂಬ ಕಲ್ಯಾಣ ಜಾರಿಗೊಳಿಸಿದರು. ಜನಸಂಖ್ಯೆ ನಿಯಂತ್ರಣದಂಥ ಕ್ರಮಗಳು ಧರ್ಮ ವಿವೇಚನೆಯ (Divine reason) ನೆಲೆಯಲ್ಲಿ ಸಮುದಾಯವೊಂದರ ನಂಬುಗೆಗಳನ್ನು ಮುಜುಗರಕ್ಕೀಡುಮಾಡುವಷ್ಟು ಆಕ್ರಮಣ

ತಲಾಖ್ ತಲಾಖ್ ತಲಾಖ್

ಒಟ್ಟಾಗಿ ಸಂಬಂಧವಾಗುತ್ತೇವೆ. ಸಂಬಂಧದಿಂದ ಒಟ್ಟಾಗುತ್ತೇವೆ. ಎರಡೂ ಸಾಧ್ಯವಿದೆ. ಬಂಧ ಗಟ್ಟಿಗೊಳ್ಳುವುದಕ್ಕೆ ಬೈಡಿಫಾಲ್ಟ್‌ ಆದ ಏನೂ ಇರುವುದಿಲ್ಲ. ಮನೆ ಕಟ್ಟಿಕೊಳ್ಳುವಂತೆ ಮನಸೂ ಕಟ್ಟಿಕೊಳ್ಳುವಂಥದು. ಒಂದು ತಂತು ತಂತಾನೇ ಎಲ್ಲ ನೋಡಿಕೊಳ್ಳಲು ಸಾಧ್ಯವಿದ್ದರೆ ಪ್ರಜ್ಞಾಪೂರ್ವಕವಾದ ಪ್ರಯತ್ನಗಳ ಅಗತ್ಯವಿರುತ್ತಿರಲಿಲ್ಲ. ಯಾರೂ ಯಾರ ಬದುಕಿಗೆ ಸುಮ್ಮನೇ ಸೇರುವುದಿಲ್ಲ.  ಮನುಷ್ಯರ ನಡುವೆ ಫಲಾಪೇಕ್ಷೆಗಳ ಹಂಗಿಲ್ಲದ ಅಕಾರಣ ಸಂಬಂಧಗಳೂ ಇವೆ. ಆದರೆ ಮದುವೆ ಎನ್ನುವ ಖಾಸಗಿ ಸಂಬಂಧದಲ್ಲಿ ನಿರ್ದಿಷ್ಟ ನಿರೀಕ್ಷೆಗಳಿರುವುದರಿಂದ ಅದೊಂದು ಏರ್ಪಾಟು. ಇದನ್ನೇ ಕ್ರಮಬದ್ಧ ಶಿಸ್ತಿಗೊಳಪಡಿಸುವ ಜವಾಬುದಾರಿಯನ್ನು ಕುಲ, ಜಾತಿ, ಧರ್ಮಗಳು ಹೊತ್ತುಕೊಂಡು ಸಾಂಸ್ಥಿಕ ಸ್ವರೂಪದಲ್ಲಿ ನಿಯಂತ್ರಿಸುತ್ತಿವೆ. ನಾಗರಿಕತೆ ಕಟ್ಟಿಕೊಳ್ಳುವ ಪ್ರಕ್ರಿಯೆಯಲ್ಲಿ ಹುಟ್ಟಿಕೊಂಡ ಇಂಥ ವ್ಯವಸ್ಥೆಗಳು ಕಾಲಾಂತರದಲ್ಲೂ ಮುಂದುವರಿದಿವೆ.   ಬುಡಕಟ್ಟುಗಳಲ್ಲಿ ಹಂಚಿಹೋಗಿದ್ದ ಅರೇಬಿಯನ್ನರನ್ನು ಒಗ್ಗೂಡಿಸಿ ನಿರಾಕಾರವಾದ ಏಕದೇವೋಪಾಸನೆ ವ್ಯಾಪ್ತಿಗೆ ತಂದಿದ್ದು ಪ್ರವಾದಿ ಮುಹಮ್ಮದ್‌ ನೇತೃತ್ವದ ಇಸ್ಲಾಂ. ಅದು ಅಪರೂಪದ ಅಸ್ಮಿತೆಯಾಗಿ ಇಂಡಿಯಾದಲ್ಲೂ ಹಬ್ಬಿದೆ. ಏಕದೇವೋಪಾಸನೆಗೆ ಪೂರಕ ಐದು ಮುಖ್ಯ ನೇಮಗಳನ್ನು ಇಸ್ಲಾಂ ರೂಪಿಸಿಕೊಂಡಿತು. ಕಲ್ಮಾ, ರೋಜಾ, ನಮಾಜ್‌, ಜಕಾತ್‌ ಮತ್ತು ಹಜ್‌. ಇವಕ್ಕೆಲ್ಲ ಕರಾರುವಾಕ್ಕಾದ ನೀತಿ ಸಂಹಿತೆಗಳನ್ನು ಅದು ರೂಪಿಸಿತು. ಹಾಗೆಯೇ ಸಾಮಾಜಿಕ ಬದುಕಿಗ